ಚುನಾವಣಾ ನೀತಿ ಸಂಹಿತೆ ಪಾಲನೆ ಕಡ್ಡಾಯ: ಕಳಸದ

ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ವಿವಿಪ್ಯಾಟ್ ಬಳಕೆಯಲ್ಲಿರುವುದಿಲ್ಲ: ಮನಿಯಾರ್‌

Team Udayavani, May 26, 2019, 11:51 AM IST

haveri-tdy-3..

ಶಿಗ್ಗಾವಿ: ತಹಶೀಲ್ದಾರ್‌ ಕಾರ್ಯಾಲಯದ ಸಭಾಭವನದಲ್ಲಿ ಮತಯಂತ್ರ ಬಳಕೆಯ ಕುರಿತು ಪ್ರಾತ್ಯಕ್ಷಿಕೆ ಮತ್ತು ನೀತಿ ಸಂಹಿತೆ ಅರಿವು ಕಾರ್ಯಕ್ರಮದಲ್ಲಿ ಚುನಾವಣಾ ವೀಕ್ಷಣಾಧಿಕಾರಿ ರಮೇಶ ಕಳಸದ ಮಾತನಾಡಿದರು.

ಶಿಗ್ಗಾವಿ: ಪುರಸಭೆ ವಾರ್ಡ್‌ ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸದೆ, ಆಯೋಗ ನೀಡಿದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಬೇಕೆಂದು ಜಿಲ್ಲಾ ಚುನಾವಣಾ ವೀಕ್ಷಣಾಧಿಕಾರಿ ರಮೇಶ ಕಳಸದ ಹೇಳಿದರು.

ಶನಿವಾರ ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದ ಸಭಾಭವನದಲ್ಲಿ ವಿವಿಧ ವಾರ್ಡ್‌ ಅಭ್ಯರ್ಥಿಗಳು ಮತ್ತು ಬೂತ್‌ ಎಜೆಂಟರಿಗೆ ಮತಯಂತ್ರ ಬಳಕೆಯ ಕುರಿತು ಪ್ರಾತ್ಯಕ್ಷಿಕೆ ಮತ್ತು ಪ್ರಸಕ್ತ ಚುನಾವಣಾ ಅವಧಿಯಲ್ಲಿ ಅಭ್ಯರ್ಥಿಗಳು ಪಾಲಿಸಬೇಕಾದ ಮಾದರಿ ನೀತಿ ಸಂಹಿತೆ ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಸ್ಟರ್‌ ಟ್ರೇನರ್‌ ಮನಿಯಾರ ಮಾತನಾಡಿ, ಪುರಸಭೆಯ 23 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಗೆ 30 ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಮತಯಂತ್ರಗಳ ಮಾದರಿಯಾಗಿ ಐದು ಮತಗಳನ್ನು ಹಾಕಿ ಖಾತ್ರಿಪಡಿಸಿದ ನಂತರವೇ ಶೀಲ್ಡ್ ಮಾಡಲಾಗುವುದು. ಪ್ರಸಕ್ತ ಚುನಾವಣೆಯಲ್ಲಿ ವಿವಿಪ್ಯಾಟ್ ಬಳಕೆಯಲ್ಲಿರುವುದಿಲ್ಲ ಎಂದರು.

ತಹಶೀಲ್ದಾರ್‌ ಪ್ರಶಾಂತ ಚನ್ನಗೊಂಡ ಮಾತನಾಡಿ, ಪುರಸಭೆ ಚುನಾವಣೆ ಘೋಷಣೆಯಾದ ನಂತರ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಗಳ ದೂರು ಬಂದಿಲ್ಲ. ಶಾಂತಿಯುತವಾಗಿ ಮತದಾನ ಪ್ರಕ್ರಿಯೆಗೆ ಸಹಕರಿಸಲು ಅಭ್ಯರ್ಥಿಗಳಿಗೆ ಮನವಿ ಮಾಡಿದ ಅವರು, ವಾಹನದ ಮೂಲಕ ಮೆರವಣಿಗೆ ಮಾಡಬೇಕಾದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಅನುಮತಿ ನೀಡಬೇಕಾಗುತ್ತದೆ. ಅಲ್ಲದೇ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಮಾಹಿತಿಗಳನ್ನು ನಿಗದಿತ ಪಾರ್‌ಂ 11 ಏ. ಮೂಲಕ ರೀಟೆನಿಂಗ್‌ ಆಫೀಸರ್ಗೆ ಪ್ರತಿದಿನ ಸಲ್ಲಿಸಬೇಕಾಗುತ್ತದೆ ಎಂದು ವಿವರಿಸಿದರು.

ಸಹಾಯಕ ರೀಟೆನಿಂಗ್‌ ಅಧಿಕಾರಿ ಮಡಿವಾಳರ ಮಾತನಾಡಿ, ಪೂಲಿಂಗ್‌ ಬೂತ್‌ ಎಜೆಂಟರು ಅದೇ ವಾರ್ಡಿನ ಮತದಾರರ ಪಟ್ಟಿಯಲ್ಲಿರಬೇಕು. ಅವರ ವಿವರಗಳನ್ನು ಪ್ರಪತ್ರ 10ರಲ್ಲಿ ತುಂಬಿ ಚುನಾವಣಾ ಅಧಿಕಾರಿಗಳಿಗೆ ನೀಡಬೇಕು. ಮತ ಯಂತ್ರಗಳಿಗೆ ಪೂಜೆ, ಕಾಯಿ ಅರ್ಪಣೆಯಂತಹ ಧಾರ್ಮಿಕ ವಿಧಿ ವಿಧಾನ ಪಾಲಿಸುವಂತಿಲ್ಲ ಎಂದು ವಿವರಿಸಿದರು.

ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರು ಪೂಜಾರ, ಕೃಷಿ ಅಧಿಕಾರಿ ಬಸವನಗೌಡ, ಎಪಿಎಂಸಿ ಕಾರ್ಯದರ್ಶಿ ವೆಂಕಟೇಶ, ಜಿಪಂ ಉಪವಿಭಾಗದ ಸಹಾಯಕ ಅಭಿಯಂತರರಾದ ಶಿವಕುಮಾರ, ಜಲಾಲ್ ಹಾಗೂ ದೇಸಾಯಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.