ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಅತೀ ಅವಶ್ಯ: ಸಾಂತಗೌಡ್ರ
Team Udayavani, Aug 16, 2019, 4:53 PM IST
ಹಿರೇಕೆರೂರ: ಸತ್ತಗೀಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭಿಸಿದ ಸ್ಮಾರ್ಟ್ಕ್ಲಾಸ್ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಲ್ ಪುಟ್ಟನಗೌಡ ಸಾಂತಗೌಡ್ರ ಮಾತನಾಡಿದರು.
ಹಿರೇಕೆರೂರ: ವಿದ್ಯಾರ್ಥಿಗಳು ಕಠಿಣ ಶ್ರಮದಿಂದ ವ್ಯಾಸಂಗ ಮಾಡಿ ಶೈಕ್ಷಣಿಕ ಅಭಿವೃದ್ಧಿ ಹೊಂದಿ, ಉನ್ನತ ಸಾಧನೆಗೈದು ದೇಶಕ್ಕೆ ಕೀರ್ತಿ ತರಬೇಕು ಎಂದು ಭಾರತೀಯ ಸೇನೆಯ ಕರ್ನಲ್ ಪುಟ್ಟನಗೌಡ ಸಾಂತಗೌಡ್ರ ಹೇಳಿದರು.
ರಟ್ಟೀಹಳ್ಳಿ ತಾಲೂಕಿನ ಸತ್ತಗೀಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರ ದೇಣಿಗೆಯಿಂದ ಪ್ರಾರಂಭಿಸಿದ ಸ್ಮಾರ್ಟ್ಕ್ಲಾಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಅತೀ ಅವಶ್ಯವಿದೆ. ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸಿಕೊಂಡು ಪ್ರಸ್ತುತದ ಮುಂದುವರೆದ ಜಗತ್ತಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಆಧುನಿಕತೆ, ವೈಜ್ಞಾನಿಕ ಮತ್ತು ತಾಂತ್ರಿಕತೆಯ ಅರಿವು ಮೂಡಿಸಿಕೊಳ್ಳಬೇಕು. ದೇಶದ ಬಗ್ಗೆ ಗೌರವ ಭಾವನೆ ಹೊಂದಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.
ಕ್ಷೇತ್ರ ಸಮನ್ವಾಧಿಕಾರಿ ಜಗದೀಶ ಬಳಿಗಾರ ಮಾತನಾಡಿ, ಇಂದಿನ ಮಕ್ಕಳು ನಾಳಿನ ಅಮೂಲ್ಯ ರತ್ನಗಳು. ಗುಣಾತ್ಮಕ ಶಿಕ್ಷಣ ಪಡೆಯಲು ಅಗತ್ಯ ಸೌಲಭ್ಯಗಳು ಅವಶ್ಯವಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಜವಾಬ್ದಾರಿ ತೋರಿ ಗ್ರಾಮದ ಯೋಧರಾದ ಪುಟ್ಟನಗೌಡ ಶಾಲೆಗೆ ದೇಣಿಗೆ ನೀಡಿರುವುದು ಸಂತಸದ ವಿಷಯ ಎಂದರು.
ಎಸ್ಡಿಎಂಸಿ ಅಧ್ಯಕ್ಷ ನಕುಲಪ್ಪ ಓಲೇಕಾರ, ಉಪಾಧ್ಯಕ್ಷೆ ವಿಶಾಲಾಕ್ಷಿ ಗಡದವರ, ಸುಮಾ ಸಾಂತಗೌಡ್ರ, ಗ್ರಾಪಂ ಸದಸ್ಯರಾದ ಬೂದಿಗೌಡ ಮರಿಗೌಡ್ರ, ನಾಗಮ್ಮ ಮೇದೂರ, ಶಿಕ್ಷಣ ಸಂಯೋಜಕ ಎನ್.ವಿ. ನಾಯಕ, ಸಿಆರ್ಪಿ ಎಚ್.ಬಿ.ಮಕರಿ, ಮುಖ್ಯಶಿಕ್ಷಕ ಎಸ್. ಶೇಖರಪ್ಪ, ಶಿಕ್ಷಕಿ ಎಸ್.ಎಂ.ಸೀತಿಕೋಡದ, ಶಿಕ್ಷಕ ಎಚ್.ಬಿ.ಸಾಂತಗೌಡ್ರ, ಚಂದ್ರಶೇಖರ ಸಾಂತಗೌಡ್ರ, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಮತ್ತು ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ