ಮಗಳ ಸಾವಿಗೆ ನ್ಯಾಯ ಕೇಳಿದಕ್ಕೆ ಶೋಷಣೆ; ಆರೋಪ

ಎಸ್ಪಿ ಕಚೇರಿ ಎದುರು ಕಿರಿಟಗೇರಿ ಗ್ರಾಮದ ಮೃತ ಮಹಿಳೆ ಕುಟುಂಬಸ್ಥರ ಆಕ್ರೋಶ

Team Udayavani, Jun 3, 2022, 4:39 PM IST

9

ಹಾವೇರಿ: ಮಗಳನ್ನು ಕೊಂದ ಆರೋಪಿಗಳನ್ನು ಬಂ ಧಿಸಬೇಕೆಂದು ದೂರು ಕೊಟ್ಟರೂ ನಮಗೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಗದಗ ಜಿಲ್ಲೆ ಕಿರಿಟಗೇರಿ ಗ್ರಾಮದ ಮೃತ ಮಹಿಳೆಯ ಕುಟುಂಬದವರು ನಗರದ ಎಸ್‌ಪಿ ಕಚೇರಿ ಎದುರು ಗುರುವಾರ ಸಂಜೆ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿ ನಡೆಸಲು ಎಸ್‌ಪಿ ಅವರು ಮಾಧ್ಯಮದವರನ್ನು ಆಹ್ವಾನಿಸಿದ್ದ ವೇಳೆ ಏಕಾಏಕಿ ಬಂದ ಮೃತ ಸಂಬಂಧಿಕರು ಎಸ್‌ಪಿ ಕಚೇರಿ ಎದುರು ಪೊಲೀಸರ ವಿರುದ್ಧ ಹರಿಹಾಯ್ದರು.

ಮಗಳ ಸಾವಿಗೆ ನ್ಯಾಯ ಕೇಳಿದವರ ಮೇಲೆಯೇ ಆರೋಪಿಗಳು ನೀಡಿದ ದೂರು ದಾಖಲಿಸಿಕೊಂಡ ಪೊಲೀಸರು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿದರು. ಗದಗ ತಾಲೂಕು ಕಿರಿಟಗೇರಿ ಗ್ರಾಮದಿಂದ ತಿಮ್ಮೇನಹಳ್ಳಿಗೆ ಮದುವೆ ಮಾಡಿಕೊಟ್ಟಿದ್ದ ಅಮೃತ(ಸರಸ್ವತಿ) ದಾಸಣ್ಣವರ ಅವರನ್ನು 2021ರ ಡಿಸೆಂಬರ್‌ ತಿಂಗಳಲ್ಲಿ ಪತಿಯ ಮನೆಯವರು ಕೊಲೆಗೈದಿದ್ದಾರೆಂದು ಕಿರಿಟಗೇರಿ ಗ್ರಾಮದ ಯಲ್ಲಪ್ಪಗೌಡ ಮರಿಗೌಡ್ರ ದೂರು ದಾಖಲಿಸಿದ್ದರು.

ಇದರ ನಂತರ ತನಿಖೆಗೆ ಎಫ್‌ಎಸ್‌ಎಲ್‌ ವರದಿ ಬರಲಿ ಎಂದು ಮುಂದೂಡುತ್ತ ಬಂದ ನೀವು ಈಗ ಸುಳ್ಳು ದೂರು ದಾಖಲಿಸಿಕೊಂಡು ನಮ್ಮನ್ನು ಅಲೆದಾಡುವಂತೆ ಮಾಡಿದ್ದೀರಿ. ನಮಗೆ ನ್ಯಾಯ ಒದಗಿಸಿ ಕೊಡಿ ಎಂದು ಮೃತ ಅಮೃತಳ ಸಂಬಂಧಿಕರು, ಅಖೀಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಜಿಲ್ಲಾಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ಗೀತಾ ಮುಂಡರಗಿ, ಈರವ್ವ ಮುಂಡರಗಿ, ಚನ್ನವ್ವ ನಾಗನಗೌಡ ಮರಿಗೌಡ್ರ, ವೀರೇಶಗೌಡ ಮರಿಗೌಡ್ರ, ದಾನಪ್ಪಗೌಡ ಮರಿಗೌಡ್ರ, ಯಲ್ಲಪ್ಪಗೌಡ ಮರಿಗೌಡ್ರ, ಶಾಂತವ್ವ ತಡಸದ, ಸಿದ್ದರಾಮಪ್ಪ ಪಟ್ಟಣದ, ನೀಲವ್ವ ಪಟ್ಟಣದ, ಸುರೇಶ ಮುಂಡರಗಿ, ಲಲಿತಾ ಮುಂಡರಗಿ ಇತರರು ಎಸ್‌ಪಿ ಹನಮಂತರಾಯ, ಎಎಸ್‌ಪಿ ವಿಜಯಕುಮಾರ ಸಂತೋಷ ಸೇರಿ ಪೊಲೀಸರ ವಿರುದ್ಧ ಹರಿಹಾಯ್ದರು.

ಎಸ್‌ಪಿ ಕಚೇರಿ ಎದುರು ದಿಢೀರ್‌ ಗಲಾಟೆ ಆರಂಭಗೊಂಡಿದ್ದರಿಂದ ಕೆಲ ಪೊಲೀಸರು ಆಕ್ರೋಶಗೊಂಡವರನ್ನು ಸಮಾಧಾನಪಡಿಸಿ ಗಲಾಟೆ ನಿಯಂತ್ರಣಕ್ಕೆ ತಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.