ಬ್ಯಾಂಕ್‌ ನಕಲಿ ಸೀಲ್‌ ಸೃಷ್ಟಿಸಿ ಪುರಸಭೆಗೆ ಟೋಪಿ

­ಪುರಸಭೆ ಎಸ್‌ಡಿಎ ತಿಗಳಣ್ಣವರ ಕಿತಾಪತಿ! ­ಶಿಗ್ಗಾವಿ ಠಾಣೆಯಲ್ಲಿ ದೂರು ದಾಖಲು

Team Udayavani, Feb 18, 2021, 7:17 PM IST

froud

ಶಿಗ್ಗಾವಿ: ಬ್ಯಾಂಕ್‌ನ ನಕಲಿ ಸೀಲ್‌ ಸೃಷ್ಟಿಸಿ ಪುರಸಭೆಯ ತೆರಿಗೆ ಹಣ ದುರ್ಬಳಕೆ ಮಾಡಿಕೊಂಡ ಪುರಸಭೆ ಪ್ರಥಮ ದರ್ಜೆ ಸಹಾಯಕನ ವಿರುದ್ಧ ಶಿಗ್ಗಾವಿ ಪೊಲೀಸ್‌ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ.

ಪಟ್ಟಣದ ಪುರಸಭೆ ಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಸೇವೆ ಸಲ್ಲಿಸುತ್ತಿದ್ದ ಮಾಲತೇಶ ವೈ. ತಿಗಳಣ್ಣವರ ಹಣ ದುರ್ಬಳಕೆ ಮಾಡಿಕೊಂಡ ಸಿಬ್ಬಂದಿ. 2010, ಜು.24ರಿಂದ ಪ್ರಭಾರಿ ಕಂದಾಯ ನಿರೀಕ್ಷರಾಗಿ ಸೇವೆ ಸಲ್ಲಿಸುತ್ತಿರುವ ತಿಗಳಣ್ಣವರ ಸಾರ್ವಜನಿಕರು ಮನೆ ಉತಾರ, ಆಸ್ತಿ ತೆರಿಗೆ, ವಾಣಿಜ್ಯ ತೆರಿಗೆ, ಅಗತ್ಯ ವಿವಿಧ ಸೌಲಭ್ಯ ಪಡೆದುಕೊಳ್ಳಲು ಪುರಸಭೆಯ ಬ್ಯಾಂಕ್‌ ಖಾತೆಗೆ ಪಾವತಿಸಬೇಕಿದ್ದ ಮೊತ್ತವನ್ನು ಸ್ವಂತಕ್ಕೆ ಬಳಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ ಠಾಣೆಗೆ ದೂರು ನೀಡಿದ್ದಾರೆ.

ಮನೆ ಉತಾರ, ನಾಗರಿಕರಿಗೆ ಅಗತ್ಯ ಸೇವೆ ನೀಡಲು ಪುರಸಭೆ ನಿಗ ದಿಪಡಿಸಿದ ಮೊತ್ತ ಪುರಸಭೆ ಬ್ಯಾಂಕ್‌ ಖಾತೆಗೆ ಜಮೆ ಮಾಡುವ ನಿಯಮವಿದೆ. ಆದರೆ, ಕಂದಾಯ ನಿರೀಕ್ಷಕ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ ಹೆಸರಿನಲ್ಲಿ ಹಣ ಸ್ವೀಕೃತ ನಕಲಿ ಸೀಲ್‌ವೊಂದನ್ನು ಸೃಷ್ಟಿಸಿ ಸಾರ್ವಜನಿಕರಿಂದ ಹಣ ಪಡೆದು ಬ್ಯಾಂಕ್‌ ಚಲನ್‌ ಮೇಲೆ ಹಣ ಸ್ವೀಕೃತ ನಕಲಿ ಸೀಲ್‌ ಹಾಕಿ ರಸೀದಿ ನೀಡಿದ್ದಾರೆ. ಕಂದಾಯ ನೀರೀಕ್ಷಕ ನೀಡುವ ಹಣ ಪಾವತಿಸಿದ ನಕಲಿ ರಸೀದಿ  ಸಂಬಂಧಪಟ್ಟ ನೌಕರರಿಗೆ ತೋರಿಸಿ ತಮಗೆ ಬೇಕಿರುವ ಉತಾರ, ಅಗತ್ಯ ಸೇವೆ ಸಾರ್ವಜನಿಕರು ಪಡೆದುಕೊಳ್ಳುತ್ತಿದ್ದರು.

ಬೆಳಕಿಗೆ ಬಂತು ಕರಾಮತ್ತು: ಹಣ ತುಂಬಿದ ರಸೀದಿ ನೀಡಿದರೂ ಉತಾರ ನೀಡದಿರುವ ಪುರಸಭೆ ಸಿಬ್ಬಂದಿ ಮೇಲೆ ಹರಿಹಾಯತ್ತಿದ್ದ ವ್ಯಕ್ತಿಯೊಬ್ಬರ ವರ್ತನೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ ಅವರಿಗೆ ಅನುಮಾನ ಮೂಡಿಸಿದೆ. ತಕ್ಷಣ ಪುರಸಭೆ ಬ್ಯಾಂಕ್‌ ಖಾತೆಯ ಜಮೆ-ಖರ್ಚು ವರದಿ ತರಿಸಿಕೊಂಡು ಪರಿಶೀಲಿಸಿದ್ದಾರೆ. ಇದರಲ್ಲಿ ಈತ ನೀಡಿರುವ ಬ್ಯಾಂಕ್‌ ಹಣ ಸ್ವೀಕೃತ ರಸೀದಿ  ಹಣ ಜಮೆಯಾಗದಿರುವುದು ದೃಢಪಟ್ಟಿದೆ. ಬಳಿಕ ಕೆಲ ಸದಸ್ಯರ ಸಮ್ಮುಖದಲ್ಲಿ ಮತ್ತೂಮ್ಮೆ ಪುರಸಭೆ ಬ್ಯಾಂಕ್‌ ಖಾತೆ ಪರಿಶೀಲಿಸಿದಾಗ, ಆರೇಳು ತಿಂಗಳಲ್ಲಿ ಮನೆ, ಇತರೆ ಸೇವೆಗೆ ಸಾರ್ವಜನಿಕರಿಂದ ಸಂಗ್ರಹವಾದ ಹಣ ಜಮೆಯಾಗದಿರುವುದು ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.