ವರುಣನ ಆಗಮನಕ್ಕೆ ಅನ್ನದಾತ ಕಾತುರ

•ಕೃಷಿ ಚಟುವಟಿಕೆ ಆರಂಭಕ್ಕೆ ಸಿದ್ಧತೆ•ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಇಲಾಖೆ ಸಜ್ಜು

Team Udayavani, May 29, 2019, 10:40 AM IST

haveri-tdy-1..

ಹಾನಗಲ್ಲ: ಪಟ್ಟಣದ ಹೊರವಲಯದಲ್ಲಿರುವ ಹೊಲವೊಂದರಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತ.

ಹಾನಗಲ್ಲ: ಕಳೆದ ವರ್ಷ ಈ ಹೊತ್ತಿಗಾಗಲೇ ಉತ್ತಮ ಮಳೆ ಬಂದು ಬಿತ್ತನೆ ಕಾರ್ಯ ಆರಂಭವಾಗಿತ್ತು. ಆದರೆ, ಪ್ರಸ್ತುತ ವರುಣನ ಬರುವಿಕೆಗೆ ಅನ್ನದಾತ ಜಾತಕಪಕ್ಷಿಯಂತೆ ಕಾಯುವಂತಾಗಿದೆ.

ವರ್ಷದಿಂದ ವರ್ಷಕ್ಕೆ ಮಳೆ ಅಭಾವ ಹೆಚ್ಚುತ್ತಿರುವ ಪರಿಣಾಮ ಬೇಸಿಗೆ ಆರಂಭಕ್ಕೂ ಮುನ್ನವೇ ಕೆರೆ-ಕಟ್ಟೆಗಳೆಲ್ಲ ಖಾಲಿಯಾಗುತ್ತಿವೆ. ಮೊದಲೆಲ್ಲ ಬೇಸಿಗೆಯಲ್ಲೂ ಬೆಳೆ ಬೆಳೆಯುತ್ತಿದ್ದ ರೈತ ಮಳೆ ಅಭಾವದಿಂದ ಮಳೆಗಾಲದಲ್ಲೂ ಬಿತ್ತನೆ ಮಾಡಲು ಹಿಂದೇಟು ಹಾಕುವಂಥ ಸ್ಥಿತಿ ನಿರ್ಮಾಣವಾಗಿದೆ.

53 ಸಾವಿರ ಹೆಕ್ಟೇರ್‌ ಕೃಷಿ ಭೂಮಿ: ಹಾನಗಲ್ಲ ತಾಲೂಕಿನಲ್ಲಿ 77 ಸಾವಿರ ಹೆಕ್ಟೇರ್‌ ವಿಸ್ತೀರ್ಣ ಭೂಮಿ ಇದ್ದು, 53 ಸಾವಿರ ಹೆಕ್ಟೇರ್‌ ಕೃಷಿ ಭೂಮಿ ಇದೆ. 3800 ಹೆಕ್ಟೇರ್‌ ತೋಟಗಾರಿಕೆ ಕ್ಷೇತ್ರವಿದೆ. 8400 ಹೆಕ್ಟೇರ್‌ ಅರಣ್ಯ ಭೂಮಿ ಇದೆ.

ಪ್ರಸ್ತುತ 20 ಸಾವಿರ ಹೆಕ್ಟರ್‌ ಭತ್ತ, 16700 ಹೆಕ್ಟರ್‌ ಗೋವಿನಜೋಳ, 450 ಹೆಕ್ಟರ್‌ ಶೇಂಗಾ, 2700 ಹೆಕ್ಟೕರ್‌ ಸೋಯಾ ಅವರೆ, 5900 ಹೆಕ್ಟರ್‌ ಹತ್ತಿ, 2500 ಹೆಕ್ಟರ್‌ ಕಬ್ಬು ಬೆಳೆಯುವ ನಿರೀಕ್ಷೆ ಕೃಷಿ ಇಲಾಖೆಯದ್ದಾಗಿದೆ. ಒಟ್ಟು 49 ಸಾವಿರ ಹೆಕ್ಟರ್‌ ಕೃಷಿ ಭೂಮಿ ಬಿತ್ತನೆಯಾಗುವ ನಿರೀಕ್ಷೆ ಇದೆ.

ಶುಂಠಿ ಬೆಳೆ ಆದ್ಯತೆ: ಪ್ರಸ್ತುತ ವರ್ಷ ಮೂರು ಸಾವಿರ ಹೆಕ್ಟರ್‌ ಕೃಷಿ ಭೂಮಿ ಶುಂಠಿ ಬೆಳೆ ಬೆಳೆಯಲಾಗುತ್ತಿದೆ. ಈಗಾಗಲೇ ಶುಂಠಿ ನಾಟಿ ಮುಗಿದಿದೆ. ಹತ್ತಾರು ವರ್ಷಗಳಿಂದ ಹಾನಗಲ್ಲ ತಾಲೂಕಿನಲ್ಲಿ ಕೇರಳದ ಹಲವರು ಇಲ್ಲಿನ ಭೂಮಿ ಗೇಣಿ ಪಡೆದು ಶುಂಠಿ ಬೆಳೆಯುವ ಪರಿಪಾಠವಿದೆ. ಆದರೆ, ಪ್ರಸ್ತುತ ವರ್ಷ ಅತಿ ಹೆಚ್ಚು ಪ್ರಮಾಣದಲ್ಲಿ ಕೇರಳದ ಗುತ್ತಿಗೆದಾರರು ಶುಂಠಿ ಬೆಳೆಯುತ್ತಿದ್ದಾರೆ. ಇನ್ನೂ ಕೆಲವು ರೈತರು ತಾವೇ ತಮ್ಮ ಭೂಮಿಯಲ್ಲಿ ಶುಂಠಿ ಬೆಳೆಯುತ್ತಿದ್ದಾರೆ.

ಬಿತ್ತನೆ ಬೀಜ ವಿತರಣೆಗೆ ಸಜ್ಜು: ಹಾನಗಲ್ಲ, ಚಿಕ್ಕಾಂಶಿಹೊಸೂರ, ಸಮ್ಮಸಗಿ, ಅಕ್ಕಿಆಲೂರು, ತಿಳವಳ್ಳಿ, ಆಡೂರು, ಬೊಮ್ಮನಹಳ್ಳಿ, ಬೆಳಗಾಲಪೇಟ್, ಮಾರನಬೀಡ ಹೀಗೆ 9 ಕೇಂದ್ರಗಳ ಮೂಲಕ ರಿಯಾಯಿತಿ ದರದ ಬಿತ್ತನೆ ಬೀಜ ವಿತರಿಸಲು ಕೃಷಿ ಇಲಾಖೆ ಸಜ್ಜಾಗಿದೆ. 1 ಸಾವಿರ ಕ್ವಿಂಟಾಲ್ ಸೋಯಾ ಅವರೆ, 1700 ಕ್ವಿಂಟಾಲ್ ಭತ್ತ, 900 ಕ್ವಿಂಟಾಲ್ ಗೋವಿನಜೋಳ ಸೇರಿದಂತೆ ಅಗತ್ಯ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆ ದಾಸ್ತಾನು ಮಾಡಿದೆ.

ತಾಲೂಕಿನ 74 ಅಧಿಕೃತ ರಸಗೊಬ್ಬರ ಹಾಗೂ ಬೀಜ ಮಾರಾಟ ಕೇಂದ್ರಗಳ ಸಭೆ ನಡೆಸಿ ಬೀಜ ಗೊಬ್ಬರದ ಅಭಾವ ಸೃಷ್ಟಿಸಿ ಸಮಸ್ಯೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ದರಪಟ್ಟಿ ಹಾಗೂ ದಾಸ್ತಾನು ಪ್ರಕಟಿಸಲು, ತಪ್ಪದೆ ರಸೀದಿ ನೀಡಲು, ಬಿಡಿ ಬಿತ್ತನೆ ಬೀಜ ಮಾರಾಟ ಮಾಡಕೂಡದು, ಎಂಆರ್‌ಪಿ ದರದಲ್ಲೇ ಬೀಜ ಗೊಬ್ಬರ ಮಾರಾಟ ಮಾಡಬೇಕೆಂಬುದು ಸೇರಿದಂತೆ ರೈತರಿಗೆ ತೊಂದರೆಯಾಗದಂತೆ ನಿಗಾ ವಹಿಸಲು ಸೂಚಿಸಲಾಗಿದೆ.ಏನೇ ಆದರೂ ಸಕಾಲಿಕವಾಗಿ ಮಳೆ ಬಾರದಿದ್ದರೆ ಎಂಬ ಆತಂಕ ಕೃಷಿ ಇಲಾಖೆಯನ್ನು ಕಾಡುತ್ತದೆ. ಏಪ್ರಿಲ್ನಲ್ಲಿ ಒಂದಷ್ಟು ಮಳೆ ಬಿದ್ದಿದೆ. ಮೇ ತಿಂಗಳಿನಲ್ಲಿ ಮಳೆಯೇ ಆಗಿಲ್ಲ. ಹೀಗಾಗಿ ರೈತ ಹಾಗೂ ಕೃಷಿ ಇಲಾಖೆಯ ಸಿದ್ಧತೆ ಸಫಲವಾಗಲು ಮಳೆರಾಯನೇ ಕೃಪೆ ತೋರಬೇಕು. ಈ ವರೆಗೂ ಸರಿಯಾದ ಮಳೆಯಾಗದೆ ಕೃಷಿ ಭೂಮಿ ಮುಂಗಾರು ಬಿತ್ತನೆ ಸಜ್ಜುಗೊಂಡಿಲ್ಲ ಎಂಬುದೇ ತೀರ ಆತಂಕದ ಸಂಗತಿ.

.ರವಿ ಲಕ್ಶ್ಮೀಶ್ವರ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.