ಮುಂಗಾರು ಹಂಗಾಮಿಗೆ ರೈತರ ತಯಾರಿ

ಚುರುಕುಗೊಂಡ ಕೃಷಿ ಚಟುವಟಿಕೆ ಜಮೀನು ಹಸನಗೊಳಿಸುತ್ತಿದ್ದಾರೆ ರೈತರು

Team Udayavani, May 29, 2022, 5:24 PM IST

27

ರಾಣಿಬೆನ್ನೂರ: ತಾಲೂಕಿನಾದ್ಯಂತ ಕಳೆದವಾರ ಸುರಿದ ಮಳೆಯಿಂದ ಭೂಮಿ ಹಸಿಯಾಗಿದೆ. ಪ್ರಸ್ತುತ ಕಳೆದ ಮೂರು ದಿನಗಳಿಂದ ಮಳೆ ಬಿಡುವು ನೀಡಿದ ಕಾರಣ ರೈತರು ಜಮೀನು ಹಸನಗೊಳಿಸುವಲ್ಲಿ ಮುಂದಾಗಿದ್ದಾರೆ.

ರೈತರು ವಾರದೊಳಗೆ ಕೃಷಿ ಭೂಮಿಯನ್ನು ಸಂಪೂರ್ಣ ಹಸನುಗೊಳಿಸಿದ ನಂತರ ಮುಂಗಾರು ಹಂಗಾಮು ಆರಂಭವಾಗುತ್ತಿದ್ದಂತೆ ಬಿತ್ತನೆಯ ಚಟುವಟಿಕೆಗಳು ಗರಿಗೆದರಲಿವೆ. ಈಗಾಗಲೆ ರೈತರು ನಗರಕ್ಕೆ ಆಗಮಿಸಿ ಬಿತ್ತನೆಯ ಬೀಜ ಹಾಗೂ ರಸಗೊಬ್ಬರಗಳ ಖರೀದಿಸಲು ಮುಂದಾಗಿದ್ದಾರೆ.

ವಾಡಿಕೆಗಿಂತ ಹೆಚ್ಚು ಮಳೆ: ತಾಲೂಕಿನ ಮೇ ತಿಂಗಳ ವಾಡಿಕೆ ಮಳೆ 88 ಮಿಮೀ ಇದ್ದು, ಮೇ ತಿಂಗಳ ಅಂತ್ಯದವರೆಗೆ 225 ಮಿಮೀ ಮಳೆಯಾಗಿದೆ. ವಾಡಿಕೆಗಿಂತ ಈ ಬಾರಿ 137 ಮಿಮೀ ಹೆಚ್ಚು ಮಳೆಯಾಗಿದೆ. ಈ ಮಳೆಯು ಭೂಮಿಯನ್ನು ಸಿದ್ಧಪಡಿಸಲು ಪೂರಕವಾಗಿದೆ.

ಸಾಗುವಳಿ ಕೃಷಿ ಭೂಮಿ 68900 ಹೆಕ್ಟೇರ್‌: ತಾಲೂಕಿನಲ್ಲಿ 90475 ಹೆಕ್ಟೇರ್‌ಗಳಷ್ಟು ಭೌಗೋಳಿಕ ಕ್ಷೇತ್ರ ಹೊಂದಿದ್ದು, ಇದರಲ್ಲಿ 68900 ಹೆಕ್ಟೇರ್‌ ಸಾಗುವಳಿ ಕ್ಷೇತ್ರ ಇರುತ್ತದೆ. 2021-22ನೇ ಸಾಲಿನ ಮುಂಗಾರು ಹಂಗಾಮಿಗೆ 53930 ಹೆಕ್ಟೇರ್‌ ಪ್ರದೇಶದಷ್ಟು ಬಿತ್ತನೆಗೆ ಕೃಷಿ ಇಲಾಖೆ ಗುರಿ ನಿಗ ದಿಪಡಿಸಿದೆ. ಇದರಲ್ಲಿ ಪ್ರಮುಖವಾಗಿ ಮೆಕ್ಕಜೋಳ-39000 ಹೆಕ್ಟೇರ್‌, ಜೋಳ-800 ಹೆಕ್ಟೇರ್‌, ಭತ್ತ-7600 ಹೆಕ್ಟೇರ್‌, ಹತ್ತಿ 3500 ಹೆಕ್ಟೇರ್‌, ತೊಗರಿ, ಹೆಸರು, ಹಲಸಂದಿ, ಶೇಂಗಾ, ಸೂರ್ಯಕಾಂತಿ, ಸೋಯಾಬಿನ್‌, ಉದ್ದು ಸೇರಿದಂತೆ 830 ಹೆಕ್ಟೇರ್‌ ಬಿತ್ತನೆಗೆ ಕೃಷಿ ಇಲಾಖೆ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮ ಮಳೆ ಸಕಾಲಕ್ಕೆ ಆಗಮಿಸಿದರೆ ಸುಮಾರು 68900 ಹೆಕ್ಟೇರ್‌ ಭೂಮಿಯಲ್ಲಿ ರೈತರು ಬಿತ್ತನೆಯ ಕಾರ್ಯ ಮುಗಿಸಲಿದ್ದಾರೆ. ಒಂದು ವೇಳೆ ಮುಂಗಾರು ತಡವಾದಲ್ಲಿ ಬಿತ್ತನೆಗೆ ಹಿನ್ನಡೆಯಾಗಲಿದೆ.

9 ಬಿತ್ತನೆ ಬೀಜಗಳ ವಿತರಣಾ ಕೇಂದ್ರ: ತಾಲೂಕಿನಲ್ಲಿ ಬಿತ್ತನೆ ಬೀಜಗಳನ್ನು ವಿತರಿಸುವ ಸಲುವಾಗಿ 9 ಬೀಜ ವಿತರಣಾ ಕೇಂದ್ರ ಸ್ಥಾಪಿಸಲಾಗಿದೆ. ಈ ಬೀಜ ವಿತರಣಾ ಕೇಂದ್ರಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳಾದ ಮೆಕ್ಕೆಜೋಳ, ಭತ್ತ, ಜೋಳ, ತೊಗರಿ, ಹೆಸರು, ಶೇಂಗಾ, ಸೂರ್ಯಕಾಂತಿ, ಸೋಯಾ ಅವರೆ ಬೇಡಿಕೆಗಳಿಗೆ ಅನುಗುಣವಾಗಿ ಬೀಜ ವಿತರಣಾ ಕೇಂದ್ರಗಳಲ್ಲಿ ದಾಸ್ತಾನಿಕರಿಸಲಾಗಿದ್ದು, ಉಳಿದಂತೆ ಪರಿಕರ ಮಾರಾಟಗಾರರಲ್ಲಿ ದಾಸ್ತಾನು ಲಭ್ಯವಿದೆ.

ಯೂರಿಯಾ, ಡಿಎಪಿ, ಎಂಓಪಿ, ಕಾಂಪ್ಲೆಕ್‌Ò ಗೊಬ್ಬರವನ್ನು ಈಗಾಗಲೇ ಪರಿಕರ ಮಾರಾಟಗಾರರು ಮತ್ತು ಸೊಸೈಟಿಗಳಲ್ಲಿ ದಾಸ್ತಾನಿಕರಿಸಲಾಗಿದೆ. ತಾಲೂಕಿನಲ್ಲಿ ಬೀಜ ಮತ್ತು ರಸಗೊಬ್ಬರದ ಯಾವುದೇ ಕೊರತೆ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಡಿಸಿದೆ.

ರೈತ ಬಾಂಧವರು ಯಾವ ಕಾರಣಕ್ಕೂ ಪ್ಯಾಕೇಟ್‌ಗಳಲ್ಲದೆ ಬೇರೆ ಯಾವುದೇ ಖುಲ್ಲಾ ಬೀಜಗಳನ್ನು ಬಿತ್ತನೆಗೆ ಉಪಯೋಗಿಸಬಾರದು. ಅಧಿಕೃತ ಕಂಪನಿಗಳ ಪ್ಯಾಕೇಟ್‌ ಬೀಜಗಳನ್ನು ಉಪಯೋಗಿಸಬೇಕು. ಖರೀದಿಸಿದ ಬೀಜದ ಪ್ಯಾಕೇಟ್‌ ಹಾಗೂ ಬಿಲ್‌ ತಮ್ಮ ತಾಬಾದಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ರೈತರು ಯಾವ ಕಾರಣಕ್ಕೂ ಪ್ಯಾಕೇಟ್‌ಗಳಲ್ಲದೆ ಬೇರೆ ಯಾವುದೇ ಖುಲ್ಲಾ ಬೀಜಗಳನ್ನು ಬಿತ್ತನೆಗೆ ಉಪಯೋಗಿಸಬಾರದು. ಅಧಿಕೃತ ಕಂಪನಿಗಳ ಪ್ಯಾಕೇಟ್‌ ಬೀಜಗಳನ್ನು ಉಪಯೋಗಿಸಬೇಕು. ಖರೀದಿಸಿದ ಬೀಜದ ಪ್ಯಾಕೇಟ್‌ ಹಾಗೂ ಬಿಲ್‌ ತಮ್ಮ ತಾಬಾದಲ್ಲಿ ಇಟ್ಟುಕೊಳ್ಳಬೇಕು. ಕಾರಣ ರೈತರು ಕಡ್ಡಾಯವಾಗಿ ಅಧಿಕೃತ ಕಂಪನಿಯ ಪ್ಯಾಕೇಟ್‌ ಬೀಜಗಳನ್ನು ಬಿತ್ತನೆಗೆ ಉಪಯೋಗಿಸಬೇಕು. ಇದನ್ನು ಹೊರತುಪಡಿಸಿ ಖುಲ್ಲಾ ಬೀಜಗಳನ್ನು ಬಳಸಬಾರದು. ಎಚ್‌.ಬಿ. ಗೌಡಪ್ಪಳವರ, ಸಹಾಯಕ ಕೃಷಿ ನಿರ್ದೇಶಕ ರಾಣಿಬೆನ್ನೂರ         

ಮಂಜುನಾಥ ಎಚ್‌ ಕುಂಬಳುರ

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.