ಬಾರೋ..ಬಾರೋ..ಮಳೆರಾಯ

ಬಹುತೇಕ ಬಿತ್ತನೆ ಪೂರ್ಣ­! ಬೆಳೆಗೆ ತೇವಾಂಶ ಕೊರತೆ ಭೀತಿ­! ಆತಂಕದಲ್ಲಿ ಅನ್ನದಾತ

Team Udayavani, Jul 14, 2021, 9:09 PM IST

220012hnl1

ಹಾನಗಲ್ಲ: ಬಿತ್ತನೆ ಬಹುತೇಕ ಪೂರ್ಣಗೊಂಡಿದ್ದರೂ ತೇವಾಂಶದ ಕೊರತೆಯಿಂದ ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ನೀರಿನ ಅಭಾವ ತಲೆದೋರಿದ್ದು, ಮಳೆಗಾಗಿ ರೈತರು ಚಾತಕ ಪಕ್ಷಿಯಂತೆ ಕಾಯುತ್ತಿರುವ ದೃಶ್ಯ ತಾಲೂಕಿನಲ್ಲಿ ಕಂಡು ಬರುತ್ತಿದೆ.

ಹಾನಗಲ್ಲ ತಾಲೂಕಿನಲ್ಲಿ ಒಟ್ಟು 47,663 ಹೆಕ್ಟೇರ್‌ ಕೃಷಿ ಭೂಮಿ ಇದೆ. ಈ ಪೈಕಿ 37,900 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಭತ್ತದ ನಾಡಾದ ಹಾನಗಲ್ಲ ತಾಲೂಕಿನಲ್ಲಿ ಗೋವಿನಜೋಳವನ್ನೇ ಪ್ರಮುಖ ಬೆಳೆಯನ್ನಾಗಿ ಬೆಳೆಯಲು ಮುಂದಾಗಿದ್ದು, ಈ ವರ್ಷ ರೈತರು 21,385 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನಜೋಳ ಬಿತ್ತನೆ ಮಾಡಿದ್ದಾರೆ. 8,525 ಹೆಕ್ಟೇರ್‌ನಲ್ಲಿ ಕೂರಿಗೆ ಮೂಲಕ ಭತ್ತ ಬಿತ್ತನೆ, 2,775 ಹೆಕ್ಟೇರ್‌ ಸೋಯಾ ಅವರೆ, 2,425 ಹೆಕ್ಟೇರ್‌ನಲ್ಲಿ ಹತ್ತಿ, 665 ಹೆಕ್ಟೇರ್‌ ನಲ್ಲಿ ಶೇಂಗಾ ಬಿತ್ತನೆ ಮಾಡಿದ್ದಾರೆ. 2,100 ಹೆಕ್ಟೇರ್‌ ಕ್ಷೇತ್ರದಲ್ಲಿ ಕಬ್ಬು ಬೆಳೆಯಲಾಗುತ್ತಿದೆ.

ಈಗಾಗಲೇ ಅಂದಾಜು 45 ದಿನಗಳ ಬೆಳೆಗಳಾಗಿವೆ. ಕೃಷಿ ಇಲಾಖೆ ಪ್ರಸ್ತುತ ವರ್ಷ 2,500 ಕ್ವಿಂಟಲ್‌ ಭತ್ತ, 470 ಕ್ವಿಂಟಲ್‌ ಗೋವಿನಜೋಳ, 105 ಕ್ವಿಂಟಲ್‌ ಶೇಂಗಾ, 2,172 ಕ್ವಿಂಟಲ್‌ ಸೋಯಾ ಅವರೆ ಬೀಜ ವಿತರಿಸಿದೆ. ಬಿತ್ತನೆ ಬೀಜ, ಗೊಬ್ಬರದ ಕೊರತೆ ಕಾಣದಿದ್ದರೂ ಪ್ರಾಕೃತಿಕವಾಗಿ ಮಳೆ ಅಭಾವವೇ ರೈತರನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ.

ತಾಲೂಕಿನಲ್ಲಿ ನೀರಾವರಿ ವ್ಯವಸ್ಥೆ ಇರುವ ಕಡೆಗಳಲ್ಲಿ, ಅದರಲ್ಲೂ ವರದಾ, ಧರ್ಮಾ ನದಿ ತೀರದ ಪ್ರದೇಶಗಳಲ್ಲಿ ಹಾಗೂ ಅಲ್ಲಲ್ಲಿ ಕೊಳವೆಬಾವಿ ಅವಲಂಬಿಸಿ ಕೆಲವೆಡೆ ಭತ್ತದ ನಾಟಿಗೆ ಮುಂದಾಗಿರುವ ರೈತರು ಅಂದಾಜು 6,000 ಹೆಕ್ಟೇರ್‌ನಲ್ಲಿ ಭತ್ತದ ನಾಟಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ಈ ಸಂದರ್ಭದಲ್ಲಿ ಭತ್ತ-ಗೋವಿನಜೋಳಕ್ಕೆ ಬಹಳಷ್ಟು ರೋಗ ಬಾಧೆ ಕಾಣಿಸಿತ್ತು. ಆದರೆ ಈ ಬಾರಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಗೋವಿನಜೋಳಕ್ಕೆ ಲದ್ದಿ ಹುಳುವಿನ ಬಾಧೆ ಇದೆ. ಆದರೆ ಕಳೆದ ವರ್ಷ ಭಾರೀ ಪ್ರಮಾಣದಲ್ಲಿ ಲದ್ದಿ ಹುಳು ಕಾಣಿಸಿಕೊಂಡಿದ್ದರ ಪರಿಣಾಮ ಮುಂಜಾಗ್ರತೆಯಾಗಿ ಔಷಧಿ ಸಿಂಪಡಣೆಗೆ ಮುಂದಾಗಿರುವುದರಿಂದ ಲದ್ದಿ ಹುಳು ಬಾಧೆ ಅಷ್ಟಾಗಿ ಕಾಣಿಸಿಕೊಳ್ಳುತ್ತಿಲ್ಲ.

ಕಳೆದ ನಾಲ್ಕಾರು ವರ್ಷಗಳಿಂದ ಅತಿವೃಷ್ಟಿ-ಅನಾವೃಷ್ಟಿ ಕಾರಣದಿಂದ ಬೆಳೆ ಕೈಗೆ ಸಿಗದೆ ಆತಂಕದಲ್ಲೇ ಕೃಷಿಗೆ ಮುಂದಾದ ರೈತನ ಪಾಲಿಗೆ ಪ್ರಸ್ತುತ ವರ್ಷ ಸರಿಯಾಗಿ ಬೆಳೆ ಬರಬೇಕೆಂದರೆ ಅದು ಮಳೆಯನ್ನೇ ಆಶ್ರಯಿಸಿದೆ. ಈವರೆಗೆ ಇರುವ ಬೆಳೆಯಲ್ಲಿ ಏನೂ ತೊಂದರೆ ಇಲ್ಲದ ಕಾರಣ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತರಿದ್ದಾರೆ.

 

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.