ಕೋವಿಡ್ ವಾರಿಯರ್ಸ್ ಗೆ ಸನ್ಮಾನ
Team Udayavani, Jun 23, 2020, 7:05 AM IST
ಹಾವೇರಿ: ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಜಯಂತಿ ನಿಮಿತ್ತ ಕೋವಿಡ್ ವಾರಿಯರ್ಸ್ ಗೆ ಸನ್ಮಾನ, ಗಡಿಯಲ್ಲಿ ಚೀನಿಯರೊಂದಿಗೆ ಹೋರಾಡಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಹೊಸಮಠದಲ್ಲಿ ನಡೆಯಿತು.
ಮುರುಘೇಂದ್ರ ಶಿವಯೋಗಿಗಳ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ, ಕೊರೊನಾ ವಾರಿಯರ್ಸ್ ಗೆ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮೌನಾಚರಣೆ ಮೂಲಕ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಮುರುಘೇಂದ್ರ ಶಿವಯೋಗಿಗಳು ವಚನ ಸಾಹಿತ್ಯವನ್ನು ತಲೆಯ ಮೇಲೆ ಹೊತ್ತುಕೊಂಡು ಅದಕ್ಕೆ ಅಪ್ಪನ ಸ್ಥಾನ ಕೊಟ್ಟರು. ಜಾತಿಭೇದಗಳ ಬೇರು ಕಿತ್ತೂಗೆದು ಶಾಂತಿಯ ಸೂತ್ರ ಸಮಾಜದಲ್ಲಿ ಬಿತ್ತಿದರು. ಪವಾಡಕ್ಕಿಂತ ಪರಿವರ್ತನೆ ಮುಖ್ಯ ಎಂದು ಸಾರಿದರು. ಆಡಂಬರದ ಬದುಕಿಗಿಂತ ನಿರಾಡಂಬರದ ಬದುಕು ನಡೆಸಿದರು ಎಂದರು.
ಜಿಲ್ಲಾಸ್ಪತ್ರೆ ವೈದ್ಯ ಡಾ.ವಿಶ್ವನಾಥ ಸಾಲಿಮಠ, ಶೂಶ್ರೂಷಕಿ ತಫುಲ್ಲ ಪಠಾಣ, ಅಂಬ್ಯುಲೆನ್ಸ್ ಚಾಲಕ ಶಂಕರ್, ಪೊಲೀಸ್ ವಿ.ಎಸ್. ಪಾಟೀಲ್ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು. ನಾಗೇಂದ್ರ ಕಟಕೋಳ, ಪರಮೇಶಪ್ಪ ಮೇಗಳಮನಿ, ಡಾ| ಬಸವರಾಜ ವಿರಾಪೂರ, ಮುರಿಗೆಪ್ಪ ಕಡೆಕೊಪ್ಪ, ಜಯದೇವ ಕೆರೊಡಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ
ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು