ಹಬ್ಬ-ಹರಿದಿನ-ಜಾತ್ರೆ ಸಾಮರಸ್ಯದ ಸಂಕೇತ


Team Udayavani, Dec 11, 2021, 3:04 PM IST

ಹಬ್ಬ-ಹರಿದಿನ-ಜಾತ್ರೆ ಸಾಮರಸ್ಯದ ಸಂಕೇತ

ಬಂಕಾಪುರ: ಹಬ್ಬ, ಹರಿದಿನ, ಜಾತ್ರೆ, ಉತ್ಸವಗಳು ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರಗಳನ್ನುಬಿತ್ತಿ ಬೆಳೆಯುವದರ ಜೊತೆಗೆ, ಸರ್ವಜನಾಂಗದವರಲ್ಲಿ ಸಾಮರಸ್ಯ ಮೂಡಿಸುವ ಸಂಕೇತಗಳಾಗಿವೆ ಎಂದು ಹುಬ್ಬಳ್ಳಿಯ ನಿವೃತ್ತ ಪ್ರಾಚಾರ್ಯ ಕೆ.ಎಸ್‌.ಕೌಜಲಗಿ ಹೇಳಿದರು.

ಪಟ್ಟಣದ ಶ್ರೀ ದೇಸಾಯಿ ಮಠದ ಆವರಣದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನಡೆದ ಎಣ್ಣೆದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿವಿಧ ಋತುಮಾನಗಳಲ್ಲಿ ನಡೆಯುವಹಬ್ಬ ಹರಿದಿನಗಳಲ್ಲಿ ನಾವು ಮಾಡುವ ಅಡುಗೆ, ಆಹಾರ ಸೇವನೆಯ ಸಂಪ್ರದಾಯಗಳುಮನುಷ್ಯನ ಆರೋಗ್ಯಕ್ಕೆ ಪೂರಕವಾಗಿವೆ. ಸರ್ವಜನಾಂಗದವರು ಒಂದೆಡೆ ಸೇರಿ ಸಾಮರಸ್ಯದಿಂದಬದುಕಲು ಪೂರಕ ವಾತಾವರಣ ಸೃಷ್ಟಿಸುತ್ತಲಿವೆ ಎಂದು ಹೇಳಿದರು.

ಡಾ|ಆರ್‌.ಎಸ್‌.ಅರಳೆಲೆಮಠ ಮಾತನಾಡಿ, ಎಂ.ಎ. ಪದವೀಧರರಾದ ಶ್ರೀ ಮಹಾಂತಸ್ವಾಮಿಗಳು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣನೀಡಲು ಶಿಕ್ಷಣ ಸಂಸ್ಥೆ ತೆರೆದು ವಿದ್ಯಾದಾನಮಾಡುವುದರ ಮೂಲಕ ಇತರರಿಗೆಪ್ರೇರಣಾದಾಯಕರಾಗಿದ್ದಾರೆ. ಸೃಷ್ಟಿ, ಪ್ರಕೃತಿಬಗ್ಗೆ ಅಪಾರ ಕಾಳಜಿ ಹೊಂದಿದ ಶ್ರೀಗಳುದೇಸಾಯಿ ಮಠದ ಆವರಣವನ್ನು ಸುಂದರಉದ್ಯಾನವನವನ್ನಾಗಿ ಮಾಡಿರುವುದು ಎಲ್ಲರ ಕಣ್ಮನಸೆಳೆಯುತ್ತವೆ ಎಂದರು.

ಇಳಿಯ ವಯಸ್ಸಿನಲ್ಲಿಯೂಎಳೆಯರಾಗಿ ಭಕ್ತರೇ ತಮ್ಮ ಸರ್ವಸ್ವವೆಂದು ಬಡ ಕುಟುಂಬಗಳು ಮಂಗಲ ಕಾರ್ಯಕ್ರಮಗಳನ್ನು ಮಾಡಿಕೊಳ್ಳಲು ಉಚಿತವಾಗಿ ಶ್ರೀಮಠದಕಲ್ಯಾಣ ಮಂಟಪ ಧಾರೆ ಎರೆಯುತ್ತಿರುವುದುಶ್ರೀ ಮಠದ ಸ್ವಾಮೀಜಿಯವರ ನಿಸ್ವಾರ್ಥ ಸೇವಾಮನೋಭಾವನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದ ಸದಾಶಿವಪೇಟೆ ವಿರಕ್ತಮಠದ ಶ್ರೀ ಗದಿಗೇಶ್ವರಸ್ವಾಮಿಗಳು, ಶ್ರೀ ಮಠದ ಮಹಾಂತಸ್ವಾಮಿಗಳು ಅಣ್ಣ ಬಸವಣ್ಣನವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಬಂದವರಾಗಿದ್ದಾರೆ. ಅವರ ತತ್ವ, ಸಿದ್ಧಾಂತಗಳಡಿ ಯಾವುದೇ ವಸ್ತುವನ್ನು ದುಂದು ವೆಚ್ಚ ಮಾಡಬಾರದೆಂಬ ಉದ್ದೇಶದಿಂದ ಕಾರ್ತಿಕೋತ್ಸವವನ್ನುಸಾಂಕೇತಿಕವಾಗಿ ದೀಪಾರಾಧನೆ ಮೂಲಕಆಚರಿಸಿ, ಇದರ ಅಂಗವಾಗಿ ಬಡವರಿಗೆ ಎಣ್ಣೆದಾನ ಮಾಡುತ್ತಿರುವುದು ಶ್ರೀಗಳವರ ಹೃದಯ ಶ್ರೀಮಂತಿಕೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಎ.ಕೆ.ಆದವಾನಿಮಠ ಮಾತನಾಡಿದರು. ಪರಶುರಾಮನರೇಗಲ್‌ ಅವರಿಂದ ಸಂಗೀತ ಸೇವೆ ನಡೆಯಿತು. ಮಕ್ಕಳ ಭರತನಾಟ್ಯ ಪ್ರದರ್ಶನಕಣ್ಮನ ಸೆಳೆಯಿತು. ಸವಣೂರ ಅಕ್ಕನ ಬಳಗದಅಧ್ಯಕ್ಷೆ ಲಲಿತಾ ಮೆಣಸಿನಕಾಯಿ, ಅನ್ನಪೂರ್ಣಅಡವಿಸ್ವಾಮಿಮಠ, ಬಸವಂತರಾವ್‌ಮಾಮ್ಲೆದೇಸಾಯಿ, ಶೇಖಪ್ಪ ಅಂಕಲಕೋಟಿ,ಅನೀಲ್‌ ಕುಮಾರ ಮಾಮ್ಲೆ ದೇಸಾಯಿ, ಸಿದ್ದಪ್ಪಹರವಿ, ಬಿ.ಎಸ್‌.ಗಿಡ್ಡಣ್ಣವರ, ಸುರೇಶ ದೇಸಾಯಿ,ಹುಚ್ಚಯ್ಯಸ್ವಾಮಿ ಹುಚ್ಚಯ್ಯನಮಠ, ಸಿ.ಆರ್‌.ದೇಸಾಯಿ ಇತರರಿದ್ದರು. ಗಂಗುಬಾಯಿ ದೇಸಾಯಿ ನಿರೂಪಿಸಿದರು.

ಅಣ್ಣ ಬಸವಣ್ಣನವರು ಸರ್ವ ಜನಾಂಗದವರನ್ನು ಅನುಭವ ಮಂಟಪಕ್ಕೆ ಕರೆತಂದು ಸರ್ವ ಜನಾಂಗದರಲ್ಲಿ ಸಮಾನತೆ ತರಲು ಶ್ರಮಿಸಿದ್ದರು. ಆದರೆ, ಈಗ ಜಾತಿಗೊಂದು ಪೀಠ ಉದಯಿಸಿ ಅವರವರ ಸಮುದಾಯಕ್ಕೆ ಮಾತ್ರ ಸೀಮಿತವಾಗುತ್ತಿರುವುದು ವಿಷಾದದ ಸಂಗತಿ. ಶ್ರೀ ಮಹಾಂತಸ್ವಾಮಿಗಳು, ಪೀಠಾಧಿಪತಿ, ದೇಸಾಯಿಮಠ

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.