ಮೀಸಲಾತಿ ಹೆಚ್ಚಿಸದಿದ್ದರೆ ಉಗ್ರ ಪ್ರತಿಭಟನೆ

•ಕಾಲಹರಣ ಮಾಡುವ ತೀರ್ಮಾನ ಕೈಗೊಂಡರೆ ಸುಮ್ಮನಿರಲ್ಲ: ಬಿ. ಶಿವಪ್ಪ ಎಚ್ಚರಿಕೆ

Team Udayavani, Jun 19, 2019, 10:36 AM IST

hv-tdy-1..

ಹಾವೇರಿ: ವಾಲ್ಮೀಕಿ ಸಮಾಜದ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾವೇರಿ: ಪರಿಶಿಷ್ಟ ಜಾತಿ ಮೀಸಲಾತಿಯನ್ನು ಕನಿಷ್ಠ ಶೇ.7ಕ್ಕೆ ಏರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಜೂ. 19ರಂದು ವಾಲ್ಮೀಕಿ ಸಮಾಜದ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ನಮ್ಮ ಬೇಡಿಕೆಗೆ ವ್ಯತಿರಿಕ್ತ ಇಲ್ಲವೇ ಅತೃಪ್ತಿಕರ ನಿರ್ಣಯ ಕೈಗೊಂಡರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ವಾಲ್ಮೀಕಿ ಸಮಾಜದ ಮುಖಂಡ, ನಿವೃತ್ತ ಜಿಲ್ಲಾಧಿಕಾರಿ ಬಿ. ಶಿವಪ್ಪ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಕರೆದಿರುವ ಪರಿಶಿಷ್ಟ ಪಂಗಡದ ಶಾಸಕರು, ಸಂಸದರು, ಮುಖಂಡರ ಸಭೆಯಲ್ಲಿ ನಮ್ಮ ಬೇಡಿಕೆ ಈಡೇರಿಸುವ ದೃಢ ನಿರ್ಧಾರ ಕೈಗೊಂಡರೆ ಅದನ್ನು ಸ್ವಾಗತಿಸುತ್ತೇವೆ. ಒಂದು ವೇಳೆ ಸುಮ್ಮನೇ ಕಾಲಹರಣ ಮಾಡುವ ತೀರ್ಮಾನ ಕೈಗೊಂಡರೆ ಜೂ. 21ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿನ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದರು.

ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ರಾಜನಹಳ್ಳಿಯಿಂದ ಪಾದಯಾತ್ರೆ ಆರಂಭಿಸಿದ್ದು, ಈಗ ಒಂಬತ್ತು ದಿನಗಳು ಕಳೆದರೂ ಸರಕಾರ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ. ಸ್ವಾಮೀಜಿ ಪಾದಯಾತ್ರೆ ಜೂ. 24ಕ್ಕೆ ಬೆಂಗಳೂರು ತಲುಪಲಿದ್ದು ಜೂ. 19ರ ಸಭೆಯ ನಿರ್ಧಾರದ ಆಧಾರದಲ್ಲಿ ಜೂ. 25ರಂದು ಅಲ್ಲಿ ಸತ್ಯಾಗ್ರಹ ಕೈಗೊಳ್ಳಲ್ಲಿದ್ದಾರೆ ಎಂದರು.

ಆಯಾ ಸಮುದಾಯದ ಜನಸಂಖ್ಯೆ ಆಧರಿಸಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡಬೇಕು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. 1956ರಲ್ಲಿ ಅಂದಿನ ಸರಕಾರ ತನ್ನಲ್ಲಿ ಜನಸಂಖ್ಯೆ ಬಗ್ಗೆ ನಿಖರ ಮಾಹಿತಿ ಇಲ್ಲದ ಕಾರಣ ತಾತ್ಕಾಲಿಕವಾಗಿ ಶೇ.3 ರಷ್ಟು ಮೀಸಲಾತಿ ನೀಡುವ ನಿರ್ಣಯ ಕೈಗೊಂಡಿತು. ನಂತರ ಯಾವ ಸರ್ಕಾರವೂ ಸಮೀಕ್ಷೆ ನಡೆಸಿ, ಜನಸಂಖ್ಯೆ ಆಧರಿಸಿ ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿಲ್ಲ. ಇದರಿಂದಾಗಿ ಪರಿಶಿಷ್ಟ ಪಂಗಡದಲ್ಲಿ ಬರುವ ವಾಲ್ಮೀಕಿ ಸಮುದಾಯದವರಿಗೆ ಶಿಕ್ಷಣ, ಸಾರ್ವಜನಿಕ ಉದ್ಯೋಗ ಕ್ಷೇತ್ರದಲ್ಲಿ ಭಾರಿ ಅನ್ಯಾಯವಾಗುತ್ತ ಬಂದಿದೆ.

ಈ ಹಿಂದೆ ಉಚ್ಚ ನ್ಯಾಯಾಲಯದ ಆದೇಶದಂತೆ 2016ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಶೇ. 7ರಷ್ಟು ಮೀಸಲಾತಿ ನೀಡುವಂತೆ ಅಂದಿನ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ, ಅಂದಿನ ಮುಖ್ಯಮಂತ್ರಿ ಅದನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಅವರು ಆರೋಪಿಸಿದರು ಎಂದರು.

ಖೊಟ್ಟಿ ಪ್ರಮಾಣಪತ್ರ:ಹಲವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಎಸ್ಸಿ , ಎಸ್‌ಟಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಮೂಲ ಸಮುದಾಯಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಮುದಾಯಕ್ಕೆ ಕನಿಷ್ಠ ಶೇ.7ರಷ್ಟು ಮೀಸಲಾತಿ ನೀಡಬೇಕು. ರಾಜಕೀಯದಲ್ಲಿ ವಿಶೇಷ ಸ್ಥಾನಮಾನ ನೀಡಬೇಕು. ವಾಲ್ಮೀಕಿ ಸಮುದಾಯಕ್ಕೆ ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿಡಬೇಕು. ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ಸಮಾಜದ ಮುಖಂಡರಾದ ರಮೇಶ ಆನವಟ್ಟಿ, ಮಂಜುಳಾ ಕರಬಸಮ್ಮನವರ, ಎಚ್.ಎಂ. ಓಲೇಕಾರ, ಶ್ರೀಧರ ದೊಡ್ಡಮನಿ, ಜಿ.ಎಸ್‌. ತಳವಾಳ, ಶಿವಾನಂದ ಯಮನಪ್ಪನವರ, ನಾಗರಾಜ, ಭೀಮಣ್ಣ, ಚಂದ್ರು ಬೇಡರ, ಅಶೋಕ ಹರನಗೇರಿ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.