ದೇಶಕ್ಕಾಗಿ ಹೋರಾಟ, ಬದುಕಿಗಾಗಿ ಪರದಾಟ!


Team Udayavani, Jul 26, 2019, 9:43 AM IST

hv tdy 1

ಹಾವೇರಿ: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶಕ್ಕೆ ವಿಜಯ ತಂದ ಯೋಧರಲ್ಲೋರ್ವರಾದ ಹಾವೇರಿಯ ಮಹಮ್ಮದ್‌ ಜಹಾಂಗೀರ ಖವಾಸ್‌ ಇಂದು ಬದುಕಿಗಾಗಿ ನಿತ್ಯ ಹೋರಾಡುವಂತಾಗಿದೆ.

‘ದೇಶದ ಒಂದಿಂಚು ಭೂಮಿಯನ್ನು ಪರರಿಗೆ ಕೊಡೆವು’ ಎಂದು ದಿಟ್ಟತನದಿಂದ ವೈರಿಗಳ ಗುಂಡಿನ ದಾಳಿಗೆ ಮೈಯೊಡ್ಡಿ ನುಗ್ಗಿದ್ದ ಮಹಮ್ಮದ ಖವಾಸ್‌, ಈಗ ತಮ್ಮ ವೈಯಕ್ತಿಕ ಜೀವನಕ್ಕಾಗಿ ಒಂದಿಷ್ಟು ಜಮೀನಿಗಾಗಿ ಪರದಾಡುತ್ತಿದ್ದು ಎರಡು ದಶಕದಿಂದ ಅಧಿಕಾರಿಗಳ, ರಾಜಕಾರಣಿಗಳ ಭರವಸೆಯಲ್ಲೇ ಬದುಕು ಕಳೆಯುತ್ತಿದ್ದಾರೆ.

ಕಾರ್ಗಿಲ್ ವಿಜಯೋತ್ಸವ ನೆನಪಿಗಾಗಿ ದೇಶದಲ್ಲಿ ಸ್ಮರಣೆ, ಸಂಭ್ರಮಾಚರಣೆಗೆ ಸಿದ್ಧತೆ ನಡೆದಿದೆ. ಆದರೆ, ಯುದ್ಧದಲ್ಲಿ ವಿಜಯಶಾಲಿಯಾಗಿ ಬದುಕುಳಿದು ಬಂದ ಯೋಧರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಸುಲಭವಾಗಿ ಸಿಗದಿರುವುದು ಖೇದಕರ ಸಂಗತಿ.

ಸೇನೆಯಲ್ಲಿ ಸೇವೆ: ಮಹಮ್ಮದ್‌ ಖವಾಸ್‌ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಚಾಲಕ, ಹವಾಲ್ದಾರರಾಗಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಗೆ ಕೇವಲ ಆರು ತಿಂಗಳು ಬಾಕಿ ಇರುವಾಗ ಕಾರ್ಗಿಲ್ ಯುದ್ಧ ಆರಂಭವಾಯಿತು. ಯುದ್ಧದ ಮೊದಲ ದಿನದಿಂದ ಹಿಡಿದು ವಿಜಯೋತ್ಸವವರೆಗೂ ಸಕ್ರಿಯವಾಗಿ ಭಾಗವಹಿಸಿ ದೇಶದ ಗೆಲುವಿಗೆ ತಮ್ಮದೇ ಆದ ಕಾಣಿಕೆ ನೀಡಿದ್ದಾರೆ.

ದೇಶಕ್ಕಾಗಿ ಸೆಣಸಾಡಿ ನಿವೃತ್ತರಾದ ನಂತರ ಹಾವೇರಿ ನಗರದ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಜೀವನ ಸಾಗಿಸುತ್ತಿದ್ದು, ಇತ್ತೀಚೆಗಷ್ಟೆ ಆ ಕೆಲಸವನ್ನೂ ಬಿಟ್ಟಿದ್ದಾರೆ. ಪತ್ನಿ, ಇಬ್ಬರು ಹೆಣ್ಣು ಹಾಗೂ ಇಬ್ಬರು ಗಂಡು ಮಕ್ಕಳನ್ನು ಹೊಂದಿರುವ ಖವಾಸ್‌, ತಮ್ಮ ದೊಡ್ಡ ಮಗಳ ಮದುವೆ ಮಾಡಿದ್ದಾರೆ. ಇನ್ನೊಬ್ಬಳು ಓದುತ್ತಿದ್ದಾಳೆ. ಒಬ್ಬ ಮಗ ಖಾಸಗಿಯಾಗಿ ಕಂಪ್ಯೂಟರ್‌ ಸರ್ವಿಸ್‌ ಮಾಡುತ್ತಾರೆ. ಮತ್ತೂಬ್ಬ ಮಗ ಬುದ್ಧಿಮಾಂದ್ಯ.

ಇನ್ನೆಷ್ಟು ಹೋರಾಟ?: ಅಂದು ತಾಯ್ನಾಡನ್ನು ಶತ್ರುಗಳಿಂದ ರಕ್ಷಿಸಲು ಜೀವದ ಹಂಗು ತೊರೆದು ಹೋರಾಟ ನಡೆಸಿದ ಮಹಮ್ಮದ್‌ ಖವಾಸ್‌, ಜೀವನ ನಡೆಸಲು ಜಮೀನಿಗಾಗಿ ಎರಡು ದಶಕದಿಂದ ನಿರಂತರ ಕಚೇರಿ ಅಲೆದಾಟದ ಹೋರಾಟ ನಡೆಸುತ್ತಿದ್ದಾರೆ. ನಾಗೇಂದ್ರನಮಟ್ಟಿಯಲ್ಲಿ ಒಂದು ನಿವೇಶನ ಹಾಗೂ ತಾಲೂಕಿನ ಗುತ್ತಲ-ನೆಗಳೂರ ಬಳಿ 2 ಎಕರೆ 12 ಗುಂಟೆ ಕೃಷಿ ಜಮೀನಿದ್ದು, ಅವರಿಗೆ ಇನ್ನೂ ಸಂಪೂರ್ಣವಾಗಿ ಕೈಗೆ ಸಿಕ್ಕಿಲ್ಲ. ಕೃಷಿ ಜಮೀನು ಮಂಜೂರು ಪ್ರಕ್ರಿಯೆಗೆ ಸಂಬಂಧಪಟ್ಟ ಕಾಗದಪತ್ರ ಜಿಲ್ಲಾಧಿಕಾರಿ ಕಚೇರಿಯಲ್ಲಿವೆ.

ಬದುಕಿದವರಿಗಿಲ್ಲ ಬೆಲೆ: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ಸರ್ಕಾರ, ಸಂಘ-ಸಂಸ್ಥೆಗಳು ಸಾಕಷ್ಟು ನೆರವಾದವು. ಹುತಾತ್ಮ ಯೋಧರ ಕುಟುಂಬಗಳಿಗೆ ಪೆಟ್ರೋಲ್ ಬಂಕ್‌, ನೌಕರಿ, ಜಮೀನು ಹೀಗೆ ಏನೆಲ್ಲ ಸೌಲಭ್ಯಗಳು ಅವರ ಮನೆ ಬಾಗಿಲಿಗೆ ಬಂದವು. ಖಾಸಗಿ ಸಂಘ ಸಂಸ್ಥೆಗಳು ಆರ್ಥಿಕ ನೆರವು ನೀಡಿದವು. ಆದರೆ, ಅದೇ ಯುದ್ಧದಲ್ಲಿ ಹೋರಾಡಿ ವಿಜಯಶಾಲಿಯಾಗಿ ಮರಳಿ ಬಂದ ಮಹಮ್ಮದ್‌ ಖವಾಸ್‌ನಂಥ ನಿವೃತ್ತ ಯೋಧರನ್ನು ಸರ್ಕಾರ, ಸಮಾಜ ಕಡೆಗಣಿಸಿರುವುದು ದುರ್ದೈವ ಸಂಗತಿ.

ಈಡೇರದ ಭರವಸೆ : ಜಿಲ್ಲೆಯಲ್ಲಿ ಕಾರ್ಗಿಲ್ ಸೇನಾನಿ ಎಂದು ಗುರುತಿಸಿಕೊಂಡ ಖವಾಸ್‌ ಅವರಿಗೆ 2000ನೇ ಸಾಲಿನಲ್ಲಿ ಜಿಲ್ಲಾಡಳಿತ ಸೇರಿದಂತೆ ಈ ಭಾಗದ ಅನೇಕ ಮಠಮಾನ್ಯಗಳು ಸನ್ಮಾನಿಸಿ ಗೌರವಿಸಿದವು. ಆಗ ಜಿಲ್ಲಾಧಿಕಾರಿಗಳು ಸೇರಿದಂತೆ ಅಂದಿನ ಸಚಿವರು, ಜನಪ್ರತಿನಿಧಿಗಳು ಖವಾಸ್‌ ಅವರನ್ನು ಹಾಡಿ ಹೊಗಳಿದರು. ಸರ್ಕಾರದಿಂದ ಐದು ಎಕರೆ ಜಮೀನು ಹಾಗೂ ಸರ್ಕಾರಿ ನೌಕರಿ ಕೊಡುವ ಭರವಸೆ ನೀಡಲಾಗಿತ್ತು. ಆ ಭರವಸೆಗಳು ಎರಡು ದಶಕ ಗತಿಸಿದರೂ ಪೂರ್ಣಗೊಂಡಿಲ್ಲ.

ಸೈನ್ಯದಲ್ಲಿ ಶತ್ರುಗಳ ವಿರುದ್ಧ ಹೋರಾಟ ಮಾಡುವಾಗಲೂ ಇಷ್ಟೊಂದು ಕಷ್ಟ ಅನುಭವಿಸಿರಲಿಲ್ಲ. ಆದರೆ, ಸರ್ಕಾರದಿಂದ ಸೌಲಭ್ಯ ಪಡೆಯಲು ಮಾತ್ರ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಸತತ 16 ವರ್ಷಗಳಿಂದ ಜಮೀನಿಗಾಗಿ ಹೋರಾಟ ನಡೆಸಿದ್ದೇನೆ. ಐದು ಎಕರೆ ಜಮೀನು ಕೇಳಿದ್ದೆ, 2 ಎಕರೆ ಜಮೀನು ನೀಡಲು ಒಪ್ಪಿದೆ.ಅದು ಇನ್ನೂ ನನಗೆ ಸೇರಿಲ್ಲ.•ಮಹಮ್ಮದ್‌ ಖವಾಸ್‌ ನಿವೃತ್ತ ಯೋಧ

ಮಾಜಿ ಸೈನಿಕರಿಗಾಗಿಯೇ ಜಮೀನು ನೀಡಲು ತಾಲೂಕಿನ ಕರ್ಜಗಿ ಹೋಬಳಿಯಲ್ಲಿ ಭೂಮಿ ಗುರುತಿಸಲಾಗಿದ್ದು, ಮಂಜೂರಾತಿಗಾಗಿ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ ಸಲ್ಲಿಸಲಾಗುವುದು.•ಎನ್‌. ತಿಪ್ಪೇಸ್ವಾಮಿ ಅಪರ ಜಿಲ್ಲಾಧಿಕಾರಿ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.