ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಸಿಗ‌ಲಿ


Team Udayavani, Sep 6, 2019, 11:54 AM IST

hv-tdy-1

ಹಾನಗಲ್ಲ: ಸದಾಶಿವ ಮಂಗಲ ಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಉದ್ಘಾಟಿಸಿದರು.

ಹಾನಗಲ್ಲ: ತಾಯಿಯಂತೆ ಮಮತೆ ತೋರಿ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕನಿಗೆ ಸಮಾಜದಲ್ಲಿ ಗೌರವಗಳು ಸಿಗಬೇಕು ಎಂದು ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ಕುಮಾರೇಶ್ವರ ವಿರಕ್ತಮಠದ ಸದಾಶಿವ ಮಂಗಲಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ತಾಪಂ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ದಿನಾಚರಣೆ ನೆಪಕ್ಕೆ ಮಾತ್ರ ಆಗುವುದು ಬೇಡ. ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರಗಳು ಸಿಗುವಂತಾಗಬೇಕು. ಎಲ್ಲವನ್ನೂ ಹೋರಾಟದಿಂದ ಪಡೆಯುವ ಸ್ಥಿತಿ ಇರುವಾಗ ಇದಕ್ಕೆ ಶಿಕ್ಷಕರೂ ಹೊರತಾಗಿಲ್ಲ. ಶಿಕ್ಷಕರ ಶ್ರದ್ಧೆಯ ಸೇವೆ ಸಾರ್ಥಕವಾಗಲು ಸಮಾಜ ಹಾಗೂ ಸರ್ಕಾರ ಶಿಕ್ಷಕರನ್ನು ಗೌರವಿಸಬೇಕು ಎಂದರು.

ಡಾ| ಹೊನ್ನಪ್ಪ ಹೊನ್ನಪ್ಪನವರ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಆದರ್ಶಗಳನ್ನು ಶಿಕ್ಷಕರಾದವರು ಎಷ್ಟು ಅಳವಡಿಸಿಕೊಂಡಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಉತ್ತಮ ವಿದ್ಯಾರ್ಥಿಯಾದರೆ ಮಾತ್ರ ಉತ್ತಮ ಶಿಕ್ಷಕನಾಗಬಲ್ಲ ಎಂಬುದನ್ನು ಅರಿತು, ಈ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು. ಜಿಪಂ ಸದಸ್ಯ ಮಾಲತೇಶ ಸೊಪ್ಪಿನ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ. ಶಾಸಕ ಸಿ.ಎಂ. ಉದಾಸಿ ಅವರನ್ನು ಶಿಕ್ಷಕರ ಪದಾಧಿಕಾರಿಗಳೊಂದಿಗೆ ಭೇಟಿ ಮಾಡಿ ಶಿಕ್ಷಣ ಸಚಿವರ ಗಮನಸೆಳೆಯಲು ಪ್ರಯತ್ನಿಸಲಾಗುವುದು. ಶಿಕ್ಷಕರು ಕನ್ನಡ ಶಾಲೆಗಳ ಉಳಿವಿಗೆ ಕಾರ್ಯಯೋಜನೆ ರೂಪಿಸಬೇಕು. ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದರೂ, ಪಾಲಕರಲ್ಲಿ ಆಂಗ್ಲಮಾಧ್ಯಮ ವ್ಯಾಮೋಹ ತಪ್ಪುತ್ತಿಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತವರೂ ಉನ್ನತ ಹುದ್ದೆಗಳಲ್ಲಿದ್ದಾರೆ ಎಂಬುದನ್ನು ಅರಿತುಕೊಳ್ಳಿ ಎಂದು ಹೇಳಿದರು.

ಶಿಕ್ಷಕರ ಸಂಘದ ಅಧ್ಯಕ್ಷ ವಿಜೇಂದ್ರ ಯತ್ನಳ್ಳಿ ಮಾತನಾಡಿ, ಮೂರು ಸರ್ಕಾರಗಳು ಬಂದು ಹೋದರೂ ಶಿಕ್ಷಕರ ವರ್ಗಾವಣೆ ಸಮಸ್ಯೆ ಬಗೆಹರಿಯದಾಗಿದೆ. ಸಂವಿಧಾನ ತಿದ್ದಬಹುದು, ಶಿಕ್ಷಕರ ವರ್ಗಾವಣೆ ನೀತಿ ತಿದ್ದಲಾಗದ ಸ್ಥಿತಿಯಿದೆ. ನಿತ್ಯ ಪರಿಷ್ಕೃತ ವೇಳಾಪಟ್ಟಿ ನೋಡುವುದಾಗಿದೆ. ಇದರಿಂದ ಶಿಕ್ಷಕರ ಮನಸ್ಥಿತಿ ಹಾಳಾಗುತ್ತಿದೆ. ಶಿಕ್ಷಕರಿಗೆ ಪಾಠ-ಪ್ರವಚನಕ್ಕಿಂತ ಉಳಿದ ಕೆಲಸಗಳೇ ಹೆಚ್ಚಾಗುತ್ತಿವೆ. ಸರ್ಕಾರ ತಕ್ಷಣ ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಜಿಪಂ ಸದಸ್ಯರಾದ ಟಾಕನಗೌಡ ಪಾಟೀಲ, ಗೌರವ್ವ ಶೇತಸನದಿ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಸದಸ್ಯರಾದ ಬಸವರಾಜ್‌ ಬೂದಿಹಾಳ, ಅಜ್ಜಪ್ಪ ಶಿರಳ್ಳಿ, ಎಪಿಎಂಸಿ ಅಧ್ಯಕ್ಷ ಶೇಕಣ್ಣ ಮಹರಾಜ್‌ಪೇಟ, ಎನ್‌.ಎಂ.ಪಾಟೀಲ, ವೆಂಕಟೇಶ ನಾಯಕ್‌, ಎನ್‌.ಪಿ.ಕಲ್ಲೇದೇವರು, ಬಿ.ಎಸ್‌.ಕರೆಣ್ಣನವರ, ಪ್ರಭು ಚಿಕ್ಕಾಂಶಿ, ಎಫ್‌.ಎಲ್.ನದಾಫ್‌, ಸಂತೋಷ ದೊಡ್ಡಮನಿ, ಎಸ್‌.ಎಂ.ದೊಡ್ಡಮನಿ, ದೀಪಾ ಮೇಸ್ತಾ, ಬಿ.ಎಂ.ಬೇವಿನಮರದ, ಬಿ.ಉಮೇಶ್‌, ಇಒ ಚನ್ನಪ್ಪ ರಾಯಣ್ಣನವರ, ಶೇಖರ ಹಂಚಿನಮನಿ, ಡಿ.ಮೋಹನ್‌ಕುಮಾರ್‌ ಅತಿಥಿಗಳಾಗಿದ್ದರು. ಬಿಇಒ ಎಚ್.ಶ್ರೀನಿವಾಸ ಸ್ವಾಗತಿಸಿದರು. ಅನಿಲ್ಕುಮಾರ ಗೋಣೆಣ್ಣವರ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ವರ್ಗಾವಣೆಗೊಂಡ ಶಿಕ್ಷಕರು, ನಲಿಕಲಿ ಕೇಂದ್ರದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.