ಏತ ನೀರಾವರಿ ಕಾಮಗಾರಿ ಶೀಘ್ರ ಮುಗಿಸಿ

ಅಧಿಕಾರಿಗಳಿಗೆ ಶಾಸಕ ಮಾನೆ ಕಟ್ಟುನಿಟ್ಟಿನ ಸೂಚನೆ

Team Udayavani, Apr 25, 2022, 12:44 PM IST

13

ಹಾನಗಲ್ಲ: ತಾಲೂಕಿನ 180 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಬಾಳಂಬೀಡ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಶ್ರೀನಿವಾಸ ಮಾನೆ ಅವರು, ತ್ವರಿತಗತಿಯಲ್ಲಿ ಯೋಜನೆ ಅನುಷ್ಠಾನಗೊಳಿಸಿ ಕೆರೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಾಳಂಬೀಡ ಗ್ರಾಮದ ಬಳಿಯ ಏತ ನೀರಾವರಿಯ ಪಂಪ್‌ಹೌಸ್‌ಗೆ ಭೇಟಿ ನೀಡಿದ ಶಾಸಕರು, ಪಂಪ್‌ ಮತ್ತು ಮೋಟರ್‌ಗಳ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿ ವೀಕ್ಷಿಸಿದರು. ವಿತರಣಾ ಜಾಲದ ಕುರಿತು ಅಧಿ ಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಟ್ಯಾನ್ಸ್‌ಫಾರ್ಮರ್‌, ವಿದ್ಯುತ್‌ ಲೈನ್‌ ಮತ್ತು ಟವರ್‌ ಅಳವಡಿಕೆ ವೀಕ್ಷಿಸಿದರು.

ಸ್ಥಳದಲ್ಲಿಯೇ ಅಧಿಕಾರಿಗಳು, ರೈತ ಮುಖಂಡರು ಹಾಗೂ ಬಾಳಂಬೀಡ ಮತ್ತು ಸುತ್ತಲಿನ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಶಾಸಕ ಶ್ರೀನಿವಾಸ ಮಾನೆ ಅವರು, ಯೋಜನೆ ಅನುಷ್ಠಾನ ವಿಳಂಬವಾದರೆ ರೈತ ಸಮೂಹಕ್ಕೆ ಅನಾನುಕೂಲವಾಗಲಿದೆ. ಕೊರೊನಾ ಕಾರಣದಿಂದ ಈಗಾಗಲೇ ಕಾಮಗಾರಿ ತಡವಾಗಿದೆ. ಕೆರೆಗಳು ಭರ್ತಿಯಾಗುವುದರಿಂದ ಜಲಮೂಲವೂ ಪುನಃಶ್ಚೇತನಗೊಂಡು ಕೃಷಿ ಚಟುವಟಿಕೆಗೆ ವರದಾನವಾಗಲಿದೆ ಎಂದರು.

ಈಗಾಗಲೇ ಕಳೆದ ಹಲವಾರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ ಕಾರಣಗಳಿಂದ ರೈತರು ಸರಿಯಾದ ಫಸಲು ಪಡೆಯಲು ಸಾಧ್ಯವಾಗಿಲ್ಲ. ಯೋಜನೆಯ ಅನುಷ್ಠಾನದಿಂದಾದರೂ ರೈತರ ಸಂಕಷ್ಟ ಕೊನೆಗೊಳ್ಳಲಿ. ಈ ನಿಟ್ಟಿನಲ್ಲಿ ಅಧಿ ಕಾರಿಗಳು ಕಾಳಜಿ ವಹಿಸಬೇಕೆಂದು ಸೂಚನೆ ನೀಡಿದರು.

ಬಾಳಂಬೀಡದ ಕೃಷಿ ಜಮೀನಿನಲ್ಲಿ ಪೈಪ್‌ಲೈನ್‌ ಅಳವಡಿಕೆಗೆ ಹಿನ್ನಡೆಯಾಗುತ್ತಿದೆ. ರೈತರು ಸಹಕರಿಸಿದರೆ ಆದಷ್ಟು ಬೇಗ ಪೈಪ್‌ಲೈನ್‌ ಅಳವಡಿಸಲಾಗುವುದು ಎನ್ನುವುದನ್ನು ಸಹಾಯಕ ಎಂಜಿನಿಯರ್‌ ಪ್ರಹ್ಲಾದ್‌ ಶೆಟ್ಟಿ ಗಮನಕ್ಕೆ ತರುತ್ತಿದ್ದಂತೆಯೇ, ಇಂಥ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಮಯದಲ್ಲಿ ಅಧಿಕಾರಿಗಳು ಸ್ಥಳೀಯ ಸಮುದಾಯ ಸಮಿತಿಗಳನ್ನು ರಚಿಸಬೇಕು. ಆಗಾಗ, ಸಮಿತಿ ಸಭೆ ನಡೆಸಿ ತೊಂದರೆ, ಅನಾನುಕೂಲಗಳ ಬಗ್ಗೆ ಗಮನ ಸೆಳೆದರೆ ಸಂಬಂಧಿ ಸಿದವರ ಜೊತೆಗೆ ಮಾತನಾಡಿ ತಕ್ಷಣವೇ ಸಮಸ್ಯೆ ಬಗೆಹರಿಸಬಹುದಾಗಿದೆ ಎಂದು ಹೇಳಿದರು. ಅಗತ್ಯ ಬಿದ್ದರೆ ನಾನೂ ಕೂಡ ರೈತರೊಂದಿಗೆ ಮಾತನಾಡುವೆ. ಸ್ಥಳೀಯ ಮುಖಂಡರೂ ಆ ಕೆಲಸ ಮಾಡಲಿದ್ದಾರೆ ಎಂದರು.

ಕರ್ನಾಟಕ ನೀರಾವರಿ ನಿಗಮದ ಅಧಿ ಕಾರಿ ಹುಗ್ಗಿ ಮಾತನಾಡಿ, ಯೋಜನೆ ಕಾಮಗಾರಿ ಅಂತಿಮ ಹಂತಕ್ಕೆ ಬಂದು ತಲುಪಿದೆ. ವಿದ್ಯುತ್‌ ಲೈನ್‌ ಎಳೆಯುವುದು, ಟಾವರ್‌ ನಿರ್ಮಾಣ, ಪೈಪ್‌ಲೈನ್‌ ಅಳವಡಿಕೆ ಕಾರ್ಯಗಳೆಲ್ಲವೂ ಚುರುಕಿನಿಂದ ಸಾಗಿದೆ. ಯಾವುದೇ ಪರಿಸ್ಥಿತಿಯಲ್ಲೂ ಬರುವ ಮಳೆಗಾಲದಲ್ಲಿಯೇ ಯೋಜನೆಯಿಂದ ಪ್ರಾಯೋಗಿಕವಾಗಿ ಕೆರೆಗಳನ್ನು ತುಂಬಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ರಾಜೇಂದ್ರ ಬಾರ್ಕಿ, ಪ್ರಮುಖರಾದ ಮಂಜಣ್ಣ ತಡಸದ, ಮಾಜಿ ಜಿಪಂ ಸದಸ್ಯ ಮಿಯ್ನಾಜಾನ್‌ ಕಂಬಳಿ, ಭರಮಣ್ಣ ಶಿವೂರ, ಉಮೇಶ ಗೌಳಿ, ಮಾರುತಿ ದೇವಸೂರ, ಬಸವರಾಜ ಚಲವಾದಿ, ಸಂತೋಷ್‌ ದುಂಡಣ್ಣನವರ, ಮಾಲತೇಶ ಕಲ್ಲಿಕರೆಣ್ಣನವರ, ಬಸವರಾಜ ಕೆಲವರಕೊಪ್ಪ, ಕೆಂಚಪ್ಪ ಕೊಪ್ಪದ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.