ಉಪಸಮರದಲ್ಲಿ ಅಬ್ಬರದ ಪ್ರಚಾರ


Team Udayavani, Nov 19, 2019, 4:33 PM IST

Udayavani Kannada Newspaper

ಹಾವೇರಿ: ಜಿಲ್ಲೆಯ ವಿಧಾನಸಭೆ ಉಪಚುನಾವಣೆ ನಡೆಯುವ ಹಿರೇಕೆರೂರು ಹಾಗೂ ರಾಣಿಬೆನ್ನೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಬಿರುಸಿನ ಮತ ಪ್ರಚಾರ ಶುರುವಾಗಿದೆ.

ನಾಮಪತ್ರ ಸಲ್ಲಿಕೆ ವೇಳೆಯಲ್ಲಿಯೇ ಘಟಾನುಘಟಿ ಅಭ್ಯರ್ಥಿಗಳು ತಮ್ಮ ಜನಶಕ್ತಿ ಪ್ರದರ್ಶಿಸಿದ್ದು, ಆಯಾ ಪಕ್ಷದ ರಾಜ್ಯ ಮಟ್ಟದ ಮುಖಂಡರು ಸಹ ಕ್ಷೇತ್ರಕ್ಕೆ ಕಾಲಿಟ್ಟು ಪ್ರಚಾರ, ಗೆಲ್ಲುವ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ತಮ್ಮ ಅಭ್ಯರ್ಥಿಯ ಗೆಲುವಿಗೆ ಅಗತ್ಯ ತಂತ್ರಗಾರಿಕೆ ಹೆಣೆಯುತ್ತಿರುವ ಮುಖಂಡರಿಂದ ಮತ ಸೆಳೆಯುವ ತಂತ್ರ, ಪ್ರತಿಸ್ಪಧಿ ì ಹಾಗೂ ಅವರ ಪಕ್ಷಗಳ ವಿರುದ್ಧ ಆರೋಪ, ಪ್ರತ್ಯಾರೋಪಗಳ

ಸುರಿಮಳೆ ಶುರುವಾಗಿದೆ. ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ ಸೆಳೆಯಲು ಹತ್ತು ಹಲವು ರೀತಿಯ ತಂತ್ರಗಾರಿಕೆಯನ್ನು ರೂಪಿಸಿಕೊಂಡಿದ್ದರೆ, ಇತ್ತ ಪ್ರಾದೇಶಿಕ ಪಕ್ಷಗಳಿಂದ ಸ್ಪರ್ಧೆಗಿಳಿದವರು, ಪಕ್ಷೇತರ ಅಭ್ಯರ್ಥಿಗಳು ಹೆಚ್ಚು ಮತ ಸೆಳೆಯಲು ತಂತ್ರರೂಪಿಸಿಕೊಂಡಿದ್ದಾರೆ.

ಹಿರೇಕೆರೂರು ಹಿನ್ನೋಟ: ಹಿರೇಕೆರೂರ ಹಾಗೂ ನೂತನ ರಟ್ಟಿಹಳ್ಳಿ ತಾಲೂಕು ವ್ಯಾಪ್ತಿ ಹೊಂದಿರುವ ಕವಿ ಸರ್ವಜ್ಞನ ನೆಲೆವೀಡಾದ ಹಿರೇಕೆರೂರ ವಿಧಾನಸಭೆ ಕ್ಷೇತ್ರವು ಅಘೋಷಿತ ಸಾಧರ ಲಿಂಗಾಯತ ಮೀಸಲು ಕ್ಷೇತ್ರವೆಂದೇ ಹೆಸರು ಪಡೆದಿದೆ. ಈ ಕ್ಷೇತ್ರದಲ್ಲಿ ಈವರೆಗೂ ಸಾಧರ ಲಿಂಗಾಯತ ಸಮುದಾಯದವರನ್ನು ಬಿಟ್ಟರೆ ಬೇರೆಯವರು ಆಯ್ಕೆಯಾಗಿಲ್ಲ. 1957ರಿಂದ ಮೂರು ಬಾರಿ ಶಂಕರರಾವ್‌ ಗುಬ್ಬಿ ಸತತವಾಗಿ ಆಯ್ಕೆಯಾಗಿ ಹ್ಯಾಟ್ರಿಕ್‌ ಬಾರಿಸಿದ್ದಾರೆ.

1972ರಲ್ಲಿ ಬಿ.ಜಿ. ಬಣಕಾರ ನಂತರ 1978ರಲ್ಲಿ ಶಂಕರರಾವ್‌ ಗುಬ್ಬಿ ಆಯ್ಕೆಯಾಗಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಬಿ.ಜಿ. ಬಣಕಾರ ಅವರು 1978ರ ನಂತರ 1983, 1985ರಲ್ಲಿ ಆಯ್ಕೆಯಾಗಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇವರ ನಂತರ 1989ರಲ್ಲಿ ಬಿ.ಎಚ್‌. ಬನ್ನಿಕೋಡ, 1994ರಲ್ಲಿ ಬಿ.ಜಿ. ಬಣಕಾರ ಪುತ್ರ ಯು.ಬಿ. ಬಣಕಾರ, 1999ರಲ್ಲಿ 2ನೇ ಬಾರಿಗೆ ಬಿ.ಎಚ್‌. ಬನ್ನಿಕೋಡ, 2004 ಹಾಗೂ 2008ರಲ್ಲಿ ಚಿತ್ರನಟ ಬಿ.ಸಿ. ಪಾಟೀಲ, 2013ರಲ್ಲಿ ಯು.ಬಿ. ಬಣಕಾರ, 2018ರಲ್ಲಿ ಬಿ.ಸಿ. ಪಾಟೀಲ ಆಯ್ಕೆಯಾಗಿದ್ದಾರೆ. ಇವರೆಲ್ಲ ಸಾಧರ ಲಿಂಗಾಯತ ಸಮುದಾಯದವರು. ಇವರನ್ನು ಹೊರತುಪಡಿಸಿದರೆ ಎಸ್‌ಟಿ ವರ್ಗದ ಡಿ.ಎಂ. ಸಾಲಿಯವರು ಅನೇಕ ಬಾರಿ ಅಖಾಡಕ್ಕಿಳಿದ್ದಾರಾದರೂ ಗೆಲುವು ಲಭಿಸಿಲ್ಲ.

ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಸಾಧರ ಸಮುದಾಯದ ಮತದಾರರೇ ಅತಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಬೇರೆ ಸಮುದಾಯದವರಿಗೆ ಇಲ್ಲಿ ಇದುವರೆಗೆ ಗೆಲುವು ಲಭಿಸಿಲ್ಲ. ಪ್ರಮುಖ ರಾಜಕೀಯ ಪಕ್ಷಗಳೂ ಸಹ ಇಲ್ಲಿ ಸಾಧರ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುತ್ತ ಬಂದಿವೆ. ಈ ಬಾರಿಯ ಉಪಸಮರದ ಆಖಾಡದಲ್ಲಿಯೂ ಸಾಧರ ಲಿಂಗಾಯತರಾದ ಬನ್ನಿಕೋಡ ಹಾಗೂ ಬಿ.ಸಿ. ಪಾಟೀಲ ನಡುವೆಯೇ ಸೆಣಸಾಟ ನಡೆಯುತ್ತಿದೆ.

ರಾಣಿಬೆನ್ನೂರು ರಣಾಂಗಣ: ವಾಣಿಜ್ಯ ಕೇಂದ್ರ ಹಾಗೂ ಬೀಜೋತ್ಪಾದನೆಗೆ ರಾಷ್ಟ್ರದಲ್ಲಿ ಹೆಸರುವಾಸಿಯಾದ ರಾಣಿಬೆನ್ನೂರು ತಾಲೂಕು ರಾಜ್ಯ ರಾಜಕಾರಣದಲ್ಲಿ ಅಷ್ಟೊಂದು ಹೆಸರು ಮಾಡದ್ದಿದರೂ, ಜಿಲ್ಲೆಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಸ್ವಾತಂತ್ರ ನಂತರ 14 ಸಾರ್ವತ್ರಿಕ ಚುನಾವಣೆಗಳನ್ನು ಎದುರಿಸಿರುವ ರಾಣಿಬೆನ್ನೂರ ಕ್ಷೇತ್ರದಲ್ಲಿ ಎಂಟು ಬಾರಿ

ಕಾಂಗ್ರೆಸ್‌ ವಿಜಯಿಶಾಲಿಯಾಗಿದರೆ, ಆರು ಬಾರಿ ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ಜಯದ ನಗೆ ಬೀರಿವೆ. ಕೆ.ಎಫ್‌. ಪಾಟೀಲರಂತಹ ಸಹಕಾರಿ ಧುರೀಣರನ್ನು ರಾಜಕೀಯಕ್ಕೆ ಪರಿಚಯ ಮಾಡಿರುವ ಕ್ಷೇತ್ರವು ಬಹುತೇಕ ಚುನಾವಣೆಗಳಲ್ಲಿ ವ್ಯಕ್ತಿ ಮಾನ್ಯತೆ ನೀಡುತ್ತ ಬಂದಿದೆ.

ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಕೆ.ಎಫ್‌. ಪಾಟೀಲ (1957), ಎನ್‌.ಎಲ್‌. ಬೆಲ್ಲದ (1967), ಬಿ.ಜಿ. ಪಾಟೀಲ (1983), ವಿ.ಎಸ್‌.ಕರ್ಜಗಿ (1994) ಹಾಗೂ ಜಿ.ಶಿವಣ್ಣ (2004, 2008), ಆರ್‌. ಶಂಕರ್‌ 2018 ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಕೆ.ಬಿ.ಕೊಳಿವಾಡ 1972, 1985, 1994, 1999, 2013ರಲ್ಲಿ ಹೀಗೆ ಐದು ಬಾರಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದು ಈಗ ನಡೆಯುತ್ತಿರುವ ಉಪಸಮರದ ಆಖಾಡಕ್ಕೆ ಮತ್ತೆ ಇಳಿದ್ದಾರೆ. ಈ ಉಪಸಮರದಲ್ಲಿ ಬಿಜೆಪಿ ಪಂಚಸಾಲಿ ಸಮುದಾಯದ ಅರುಣಕುಮಾರ ಪೂಜಾರ ಅವರಿಗೆ ಟಿಕೆಟ್‌ ನೀಡಿದ್ದು, ರಡ್ಡಿ ಲಿಂಗಾಯತ ಸಮುದಾಯದ ಕೆ.ಬಿ. ಕೋಳಿವಾಡ ಕಣದಲ್ಲಿದ್ದಾರೆ. ಹೀಗಾಗಿ ಕ್ಷೇತ್ರದ ಬಹುಸಂಖ್ಯಾತ ಲಿಂಗಾಯತರಲ್ಲೇ ಸ್ಪರ್ಧೆ ಏರ್ಪಡಲಿದೆ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.