ಬಿಜೆಪಿ ಸರ್ಕಾರ ಹೆಚ್ಚು ದಿನ ಮುಂದುವರಿಯಲ್ಲ


Team Udayavani, Nov 1, 2020, 8:48 PM IST

hv-tdy-1

ಹಾವೇರಿ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. ವಾಮ ಮಾರ್ಗದಿಂದ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂದು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ ಭವಿಷ್ಯ ನುಡಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಿಗೆ ಆಸೆ-ಆಮಿಷ ತೋರಿಸಿ ವಾಮ ಮಾರ್ಗದ ಮೂಲಕ ಬಿಜೆಪಿ ಅಧಿಕಾರಕ್ಕೇರಿದೆ. ದೌರ್ಜನ್ಯ, ಬೆದರಿಕೆ ತಂತ್ರದ ಮೂಲಕ ಬಿಜೆಪಿ ಅಧಿಕಾರಕ್ಕೇರುತ್ತಿದೆ. ಇದರಿಂದ ಜನತೆ ಬೇಸತ್ತಿದ್ದು, ಶಿರಾ, ಆರ್‌ ಆರ್‌ ನಗರ, ಪಶ್ಚಿಮ ಪದವೀಧರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ. ಬಿಜೆಪಿ ದುರಾಡಳಿತ ನೋಡಿ ಜನರಿಗೆ ಸಾಕಾಗಿದೆ. ಮುಂಬರುವ ಚುನಾವಣೆಗಳಲ್ಲಿ ಆ ಪಕ್ಷ‌ಕ್ಕೆ ಮತದಾರರು ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ತಿದ್ದುಪಡಿ ಕಾಯ್ದೆಗಳು ಮರಣ ಶಾಸನವಾಗಿದೆ. ರೈತರು ಮತ್ತು ಜನಸಾಮಾನ್ಯರ ವಿರುದ್ಧ ಸರ್ಕಾರ ಕಾಯ್ದೆ ಜಾರಿ ತರುತ್ತಿದೆ. ಉಳುವವನೇ ಒಡೆಯ ಎಂಬುದನ್ನು ಈ ಸರ್ಕಾರ ಉಳ್ಳವನೇ ಒಡೆಯ ಎಂದು ಮಾಡಿದೆ. ಎಲ್ಲವನ್ನೂ ಖಾಸಗೀಕರಣ ಮಾಡಲು ಹೊರಟಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಕುಸಿದಿದೆ. ಡಿಜಿಪಿ ಕುಸಿದಿದ್ದು, ದೇಶ 20 ವರ್ಷ ಹಿಂದಕ್ಕೆ ಹೋಗಿದೆ. ಜನರ ಭಾವನೆ ಜೊತೆ ಚೆಲ್ಲಾಟವಾಡುತ್ತಿದೆ. ತಾನು ನೀಡಿದ ಯಾವ ಭರವಸೆಗಳನ್ನೂ ಬಿಜೆಪಿ ಈಡೇರಿಸಿಲ್ಲ. ಆದ್ದರಿಂದ ಕೆಲವೇ ದಿನಗಳಲ್ಲಿ ಚುನಾವಣೆ ಎದುರಾದರೂ ಆಶ್ಚರ್ಯವಿಲ್ಲ ಎಂದರು.

ಹಾವೇರಿ ನಗರಸಭೆ ಅಧ್ಯಕ್ಷ  ಹಾಗೂ ಉಪಾಧ್ಯಕ್ಷ‌ ಚುನಾವಣೆ ಸಂದರ್ಭದಲ್ಲಿ ನಮ್ಮ ಸದಸ್ಯರ ಮೇಲೆ ಸುಳ್ಳು ಕೇಸ್‌ ಹಾಕಿಸಿ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಪ್ರಯತ್ನಿಸಿತ್ತು. ಇಲ್ಲಿಯ ನಗರಸಭೆ ಚುನಾವಣೆ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಆದರೆ, ಪಕ್ಷದ ಸದಸ್ಯರು ಅಧ್ಯಕ್ಷ‌, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಕಾಂಗ್ರೆಸ್‌ ಸದಸ್ಯರ ಮೇಲೆ ಖೊಟ್ಟಿ ಅಟ್ರಾಸಿಟಿ ಕೇಸ್‌ ಹಾಕಿಸಿ ಒಳಗೆ ಹಾಕಿಸಲು ಬಿಜೆಪಿ ಸಿದ್ಧವಾಗಿತ್ತು. ಆದರೆ, ಕಾನೂನು ಅಡಿ ಹಾಗಾಗದಂತೆ ನೋಡಿಕೊಂಡೆವು. ಜಿಪಂ ನಲ್ಲೂ ಕಾಂಗ್ರೆಸ್‌ ಅಧಿಕಾರವಿದೆ. ಇನ್ನು ಮುಂದೆ ಬಿಜೆಪಿಯ ಸುಳ್ಳು ಭರವಸೆ ಗಳನ್ನು ಜನತೆ ನಂಬುವುದಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಹೇಳಿದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಸಂಖ್ಯಾಬಲ ಇಲ್ಲದಿದ್ದರೂ ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಏರುವ ಹೊಸ ರೀತಿಯ ಪ್ರಯತ್ನ ಇಲ್ಲಿಂದಲೇ ಆರಂಭವಾಗುವುದಿತ್ತು. ಆದರೆ, ನಾವು ಅದಕ್ಕೆ ಅವಕಾಶ ಕೊಡದ್ದರಿಂದ ನಗರಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದಿದೆ. ಈ ಹಿಂದೆ ಬ್ಯಾಡಗಿಯಲ್ಲಿ ಮತ್ತು ಈಗ ಹಾವೇರಿ ಕ್ಷೇತ್ರದಲ್ಲಿ ವಿರೋಧಿ ಗಳನ್ನು ಹಣಿಯಲು ಅಟ್ರಾಸಿಟಿ ಕೇಸ್‌ ಹಾಕಿಸುವ ಕೆಲಸ  ಈಗಿನ ಸ್ಥಳೀಯ ಶಾಸಕರಿಂದ ಆಗುತ್ತಿದೆ ಎಂದು ಆರೋಪಿಸಿದರು.

ಮಾಜಿ ಸಚಿವ ಬಸವರಾಜ ಶಿವಣ್ಣ ನವರ, ನಮ್ಮ ಸದಸ್ಯರ ಮೇಲೆ ರಾಜಕೀಯ ಪ್ರೇರಿತ ದೂರು ದಾಖಲಿ ಸಿರುವುದು ಅಧಿಕಾರಿಗಳಿಗೂ ಗೊತ್ತಾಗಿದೆ. ಆದ್ದರಿಂದ ನಮ್ಮ ಮನವಿಗೆ ಸ್ಪಂದಿಸಿ ನಗರಸಭೆ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿದ್ದಾರೆ. ಇನ್ನು ಮುಂದೆ ನೂತನ ಅಧ್ಯ ಕ್ಷ‌‌ರು ಅಭಿವೃದ್ಧಿ ಕಡೆಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು. ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಜಿಪಂ ಅಧ್ಯಕ್ಷ‌ ಏಕನಾಥ ಬಾನು ವಳ್ಳಿ, ನಗರಸಭೆ ನೂತನ ಅಧ್ಯಕ್ಷ‌ ಸಂಜೀವ ಕುಮಾರ ನೀರಲಗಿ, ಜಿಪಂ ಮಾಜಿ ಅಧ್ಯಕ್ಷ‌ ಕೊಟ್ರೇಶಪ್ಪ ಬಸೇಗಣ್ಣಿ ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.