ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮಗೆ ರಾಷ್ಟ್ರೀಯ ಪ್ರಶಸ್ತಿ ಗರಿ

ವಿಶ್ವದ 16ಕ್ಕೂ ಹೆಚ್ಚು ದೇಶ ಸುತ್ತಿ ಗಾಂಧಿ, ವಿನೋಭಾ ತತ್ವ ಪ್ರಚಾರ ಮಾಡಿದ ಅಮ್ಮನಿಗೆ ಗೌರವ

Team Udayavani, Jul 12, 2019, 9:38 AM IST

hv-tdy-2..

ಹಾವೇರಿ: ಇತ್ತೀಚೆಗೆ ನಗರಕ್ಕೆ ಆಗಮಿಸಿದಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚನ್ನಮ್ಮ ಹಳ್ಳಿಕೇರಿಯವರು.

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡುವ 2018ನೇ ಸಾಲಿನ ಶ್ರೀ ಭಗವಾನ್‌ ಮಹಾವೀರ ರಾಷ್ಟ್ರೀಯ ಪ್ರಶಸ್ತಿ ತಾಲೂಕಿನ ಹೊಸರಿತ್ತಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮ ಹಳ್ಳಿಕೇರಿ ಅವರಿಗೆ ಲಭಿಸಿದ್ದು, ಅಹಿಂಸಾ ತತ್ವ ಪಾಲನೆ ಹಾಗೂ ಸಮಾಜ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಚನ್ನಮ್ಮ ಅವರು ಕಳೆದ ಏಳು ದಶಕಗಳಲ್ಲಿ ವಿಶ್ವದ 16ಕ್ಕೂ ಹೆಚ್ಚು ದೇಶಗಳನ್ನು ಸುತ್ತಾಡಿ ಅಲ್ಲಿ ಗಾಂಧೀಜಿ, ಕಸ್ತೂರಬಾ ಹಾಗೂ ವಿನೋಭಾಜಿ ಹಾಗೂ ಶರಣರ ಸಂದೇಶ ಮತ್ತು ಭಾರತೀಯ ಸಂಸ್ಕೃತಿಯ ಪ್ರಚಾರ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಗಾಂಧಿ, ವಿನೋಭಾಜಿಯವರ ಭೂದಾನ, ಸರ್ವೋದಯ ವಿಚಾರ ಪ್ರಚಾರದೊಂದಿಗೆ ಅಸ್ಪ್ರಶ್ಯತೆ ನಿವಾರಣೆ, ಗ್ರಾಮೀಣ ನೈರ್ಮಲ್ಯ, ಹರಿಜನೋದ್ಧಾರ, ಖಾದಿ ಬಳಕೆ, ಮಹಿಳಾ ಸಬಲೀಕರಣಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದಾರೆ.

ಹೊಸರಿತ್ತಿಯವರು: ಮೂಲತಃ ಹಾವೇರಿ ತಾಲೂಕು ಹೊಸರಿತ್ತಿಯವರಾದ ಚನ್ನಮ್ಮನವರು 1931ಜ.2ರಲ್ಲಿ ಜನಿಸಿದರು. ಬಾಲ್ಯದಲ್ಲಿಯೇ ಹೊಸರಿತ್ತಿಗೆ ಬಂದಿದ್ದ ಗಾಂಧೀಜಿಯವರ ನೇರ ದರ್ಶನ ಭಾಗ್ಯ ಇವರದ್ದಾಗಿತ್ತು. ಜಿಲ್ಲೆಯ ಸ್ವಾತಂತ್ರ್ಯ ಹೋರಾಟ ಕೇಂದ್ರವಾಗಿದ್ದ ಹೊಸರಿತ್ತಿ ಚನ್ನಮ್ಮ ಅವರ ಜೀವನದ ಮೇಲೆ ಪ್ರಭಾವ ಬೀರಿತು. ಹೊಸರಿತ್ತಿ ಸುತ್ತಮುತ್ತ ನಡೆಯುವ ಸ್ವಾತಂತ್ರ್ಯ ಚಳವಳಿಯಲ್ಲಿ ತಾತ, ಸ್ವಾತಂತ್ರ್ಯ ಹೋರಾಟಗಾರ ಗುದ್ಲೆಪ್ಪ ಹಳ್ಳಿಕೇರಿಯವರೊಂದಿಗೆ ಚನ್ನಮ್ಮನವರು ಭಾಗವಹಿಸುತ್ತಿದ್ದರು. ಗುದ್ಲೆಪ್ಪ ಹಳ್ಳಿಕೇರಿ ಸ್ಥಾಪಿಸಿದ್ದ ಗಾಂಧಿ ಆಶ್ರಮದ ಒಡನಾಟ ಹೊಂದಿದ್ದ ಅವರಿಗೆ ಇದು ಸಮಾಜಸೇವೆ, ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಕೊಳ್ಳಲು ಪ್ರೇರಣೆ ನೀಡಿತು.

ಚನ್ನಮ್ಮ ಅವರು ಮನ್ನಂಗಿ ದೇವಕ್ಕ ಸ್ಥಾಪಿಸಿದ ಆಶ್ರಮದಲ್ಲಿ ಗ್ರಾಮ ಸೇವಕಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ದೇಶ ಸೇವೆ, ಸ್ವಾತಂತ್ರ್ಯ ಚಳವಳಿಯಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಂಡರು. ನಂತರ ಸ್ವಾತಂತ್ರ್ಯ ಹೋರಾಟಗಾರ್ತಿ ಮೀರಾತಾಯಿ ಕೊಪ್ಪಿಕರ ಸಾಂಗತ್ಯದಲ್ಲಿ ಕಸ್ತೂರಬಾ ಆಶ್ರಮದಲ್ಲಿ ಸೇವೆ ಸಲ್ಲಿಸಿದರು. ಆಸ್ಪತ್ರೆಯಲ್ಲಿ ದಾದಿಯಾಗಿ ರೋಗಪೀಡಿತರ ಸೇವೆ ಮಾಡಿದರು. ವಿನೋಭಾ ಭಾಯಿಯವರ ಪ್ರಭಾವಕ್ಕೊಳಗಾಗಿ ಸರ್ವೋದಯ ಹಾಗೂ ಭೂದಾನ ಚಳವಳಿಯಲ್ಲಿ ತೊಡಗಿದರು. ಅವಿರತ ದೇಶಸೇವೆಯ ಸ್ಮರಣೆಯಲ್ಲಿ ಮದುವೆ, ಸಂಸಾರ ಮುಂತಾದ ವೈಯಕ್ತಿಕ ಜೀವನ ತ್ಯಾಗ ಮಾಡಿ ಜೀವನ ಪೂರ್ತಿ ಸಮಾಜಸೇವೆಯಲ್ಲೇ ಮೀಸಲಿಸಿದರು.

ಚನ್ನಮ್ಮ ಅವರ ಈ ಸೇವೆ ಗುರುತಿಸಿ ರಾಜ್ಯ ಸರ್ಕಾರದ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ-2016’ ಸೇರಿದಂತ ನೂರಾರು ಪ್ರಶಸ್ತಿಗಳು ಬಂದಿದ್ದು, ಈಗ ಶ್ರೀಭಗವಾನ್‌ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.