ಕಳಂಕವಿಲ್ಲದೆ ಆಡಳಿತ ನಡೆಸಿದ ಬಿಜೆಪಿ ಗೆಲ್ಲಿಸಿ
Team Udayavani, Apr 20, 2019, 2:53 PM IST
ಹಾನಗಲ್ಲ: ಐದು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಕಳಂಕವಿಲ್ಲದೆ ದೇಶವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಸಮಗ್ರ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಶಾಸಕ ಸಿ.ಎಂ. ಉದಾಸಿ ಮನವಿ ಮಾಡಿದರು.
ತಾಲೂಕಿನ ಅರಿಷಿಣಗುಪ್ಪಿಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇಂದು ಚುನಾವಣೆಯಲ್ಲಿ ಪ್ರಚಾರಕ್ಕಿಂತ ಅಪಪ್ರಚಾರವೇ ಜೋರಾಗಿದೆ. ವಿರೋಧ ಪಕ್ಷದವರಿಗೆ ಹೇಳಿಕೊಳ್ಳಲು ವಸ್ತುಗಳಿದೆ ಸಂಸದರು ಎಷ್ಟುಬಾರಿ ಕ್ಷೇತ್ರಕ್ಕೆ ಬಂದಿದ್ದಾರೆ? ಏನು ಮಾಡಿದ್ದಾರೆ ಎಂದು ವ್ಯರ್ಥ ಪ್ರಶ್ನೆ ಕೇಳುತ್ತಿದ್ದಾರೆ ಎಂದರು.
ದೇಶಕ್ಕೆ ಅನ್ನ ನೀಡುವ ರೈತ ಹಾಗೂ ಗಡಿ ಕಾಯುವ ಯೋಧರಿಗೆ ಪ್ರಥಮ ಪ್ರಾಶಸ್ತ ಸಿಗಬೇಕು ಎಂದು ಅಂದು ಲಾಲ ಬಹದ್ದೂರ ಶಾಸ್ತ್ರೀ ಹೇಳಿದ್ದರು. ಇಂದು ನರೇಂದ್ರ ಮೋದಿ ರೈತ ಹಾಗೂ ಯೋಧರಿಗೆ ಪ್ರಥಮ ಆಧ್ಯತೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಕ್ಷಣೆಗೆ 3 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದರ ಫಲವಾಗಿ ಆಧುನಿಕ ಶಸ್ತಾಸ್ತ್ರಗಳನ್ನು ಹೊಂದಲು ಭಾರತೀಯರು ಶಕ್ತರಾಗಿದ್ದೇವೆ. ಪರಿಣಾಮ ವಿರೋಧಿ ದೇಶಗಳು ಭಾರತದತ್ತ ನೋಡಲೂ ಭಯಪಡುತ್ತಿವೆ. ಪುಲ್ವಾಮಾ ದಾಳಿಗೆ ಪ್ರತ್ಯುತ್ತರ ನೀಡಿ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ನೀಡುವ ಯೋಜನೆ ರೂಪಿಸಿದ್ದಾರೆ. ಇದನ್ನು ನೋಡಿದ ಕಾಂಗ್ರೆಸ್ಸಿಗರೂ ತಿಂಗಳಿಗೆ 6 ಸಾವಿರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಅಸಾಧ್ಯ ಯೋಜನೆಗಳನ್ನು ನೀಡಿದರೆ ಆರ್ಥಿಕವಾಗಿ ದೇಶದ ಮೇಲೆ ಆಗುವ ಪರಿಣಾಮದ ಅರಿವು ಅವರಿಗಿಲ್ಲ ಎಂದರು.
ಬಿ.ಎಸ್.ಅಕ್ಕಿವಳ್ಳಿ, ಚಂದ್ರಪ್ಪ ಜಾಲಗಾರ, ರಾಜಣ್ಣ ಗೌಳಿ, ಉದಯ ವಿರುಪಣ್ಣನವರ, ಶಿವಲಿಂಗಪ್ಪ ತಲ್ಲೂರ, ಕೃಷ್ಣ ಈಳಿಗೇರ, ಸಿದ್ದಲಿಂಗೇಶ್ವರ ಉದಾಸಿ, ಸಂತೋಷ ಟೀಕೋಜಿ, ಪರಮೇಶ ಹುಲ್ಮನಿ, ಸಂತೋಷ ಭಜಂತ್ರಿ, ನಿಂಗನಗೌಡ ಗಿರಿಗೌಡ್ರು, ಬಸವರಾಜ ಅಂಗಡಿ ಹಾಗೂ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!