ಕಾಯಿಲೆಗೆ ಶೀಘ್ರ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ

ಖ್ಯಾತ ಆರೋಗ್ಯ ತಜ್ಞ-ಕಂಪಾನಿಯೋ ಸೌಥ್‌ ಝೋನ್‌ ಮುಖ್ಯಸ್ಥ ರತ್ನಾಕರ ಶೆಟ್ಟಿ ಸಲಹೆ

Team Udayavani, May 16, 2022, 5:06 PM IST

18

ರಾಣಿಬೆನ್ನೂರ: ಜೀವನದಲ್ಲಿ ಹಣ, ಆಸ್ತಿ, ಅಂತಸ್ತು, ವಜ್ರ, ವೈಡೂರ್ಯಕ್ಕಿಂತ ಆರೋಗ್ಯವೇ ಬಹು ಮುಖ್ಯ. ಹಾಗಾಗಿ, ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಸಣ್ಣಪುಟ್ಟ ಕಾಯಿಲೆಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಬಾಳಬೇಕೆಂದು ಖ್ಯಾತ ಆರೋಗ್ಯ ತಜ್ಞ ಹಾಗೂ ಕಂಪಾನಿಯೋ ಸೌಥ್‌ ಝೋನ್‌ ಮುಖ್ಯಸ್ಥ ರತ್ನಾಕರ ಶೆಟ್ಟಿ ಹೇಳಿದರು.

ಇಲ್ಲಿನ ಲಯನ್ಸ್‌ ಕ್ಲಬ್‌ ಹಾಗೂ ಕಂಪಾನಿಯೋ ಸಂಸ್ಥೆ ಆಶ್ರಯದಲ್ಲಿ ಲಯನ್ಸ್‌ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಉಚಿತ ಫೂಟ್‌ ಪಲ್ಸ್‌ ಥೆರಪಿ ಶಿಬಿರ ಹಾಗೂ ಉಚಿತ ಆರೋಗ್ಯ ಮಾಹಿತಿ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಕೂಡ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಭಾವನೆ ತಾಳದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.

ದೇಹದಲ್ಲಿ ಸಮರ್ಪಕವಾಗಿ ರಕ್ತ ಸಂಚಾರ ಆಗುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ದೇಹದಲ್ಲಿ ರಕ್ತ ಸಂಚಾರ ವ್ಯತ್ಯಯವಾದರೆ ಹಲವಾರು ರೋಗಗಳು ಉತ್ಪತ್ತಿಯಾಗಿ ಉಲ್ಬಣಗೊಂಡು ಮುಂದೆ ಜೀವಕ್ಕೆ ಅಪಾಯ ತಂದೊಡ್ಡುವ ಸಂದರ್ಭಗಳು ಬರಬಹುದು. ಹಾಗಾಗಿ, ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದರು.

ಇಂದಿನ ಆಧುನಿಕತೆಯ ಜೀವನದಲ್ಲಿ ಮನುಷ್ಯ ಒತ್ತಡದ ಮಧ್ಯೆ ಯಂತ್ರದಂತೆ ಕೆಲಸ ಮಾಡುವ ಪದ್ಧತಿಯಲ್ಲಿ ಜೀವನ ನಡೆಸುತ್ತಾನೆ. ವಾಯುವಿಹಾರ, ವ್ಯಾಯಾಮ, ಯೋಗಾಸನಗಳು ಸೇರಿದಂತೆ ಇತರ ಶ್ರಮಿಕ ಕಾರ್ಯಗಳನ್ನು ಮಾಡಲು ಮನುಜರಿಗೆ ಸಮಯವಿಲ್ಲದಂತಾಗಿದೆ. ಇದರಿಂದ ಆತನಲ್ಲಿ ಆಲಸ್ಯ, ನಿರಾಸಕ್ತಿ ಹೆಚ್ಚಾಗಿ ಜೀವನ ಜಿಗುಪ್ಸೆ ಆಗಬಹುದು ಎಂದರು.

ಜನರ ಆರೋಗ್ಯ ಸಮಸ್ಯೆ ಮನಗಂಡು ಮೊದಲ ಭಾರಿಗೆ 2014ರಲ್ಲಿ ಉಚಿತ ಫೂಟ್‌ ಪಲ್ಸ್‌ ಥೆರಪಿ ಶಿಬಿರವನ್ನು ದೇಶಾದ್ಯಂತ ಪರಿಚಯಿಸಲಾಗಿದೆ. 42 ದೇಶಗಳಲ್ಲಿ ಇದನ್ನು ಜನರು ಉಪಯೋಗಿಸುತ್ತಿದ್ದಾರೆ. 350ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಈ ಥೆರಪಿಯಿಂದ ರಕ್ತ ಪರಿಚಲನೆ, ನರಗಳ ಯಾವುದೇ ರೀತಿಯ ಸರಳ ಮತ್ತು ದೀಘ್ರಕಾಲಿನ ಸಮಸ್ಯೆಗಳನ್ನು ಔಷಧ ರಹಿತವಾಗಿ ಅಡ್ಡಪರಿಣಾಮವಿಲ್ಲದೇ ನಿವಾರಿಸಬಹುದಾಗಿದೆ ಎಂದರು.

ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ 10 ಲಕ್ಷಕ್ಕಿಂತ ಹೆಚ್ಚಿನ ಜನರು ಇದರ ಪರಿಹಾರ ಕಂಡುಕೊಂಡಿದ್ದಾರೆ. 30 ನಿಮಿಷದ ಈ ಥೆರಪಿಯಿಂದ 5 ಕಿಮೀ ನಷ್ಟು ವಾಕಿಂಗ್‌ ಮಾಡಿದಷ್ಟೇ ರಕ್ತ ಸಂಚಾರವಾಗುತ್ತದೆ. ಮಧುಮೇಹ, ರಕ್ತದೊತ್ತಡ, ಸಂಧಿ ವಾತ, ವೇರಿಕೋಸ್‌ ವೇನ್‌, ಸ್ನಾಯು ಸೆಳೆತ, ಊತ, ನಿದ್ರಾಹೀನತೆ, ಪಾರ್ಶ್ವವಾಯು , ಬೆನ್ನು ನೋವು, ಬೊಜ್ಜು ನಿವಾರಣೆಯಂತಹ ಕಾಯಿಲೆಗಳನ್ನು ನಿವಾರಿಸುವಲ್ಲಿ ಈ ಥೆರಪಿ ಪದ್ಧತಿ ಸಹಕಾರಿಯಾಗಲಿದೆ ಎಂದರು. ನಗರದ ಲಯನ್ಸ್‌ ಶಾಲೆಯಲ್ಲಿ ಏ.30 ರಿಂದ ಆರಂಭಗೊಂಡಿರುವ ಉಚಿತ ಈ ಥೆರಪಿ ಶಿಬಿರ ಮೇ 17 ರವರೆಗೂ ನಡೆಯಲಿದೆ. ಇದರ ಪ್ರಯೋಜನವನ್ನು ನಾಗರಿಕರು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಲಯನ್ಸ್‌ ಶಾಲೆಯ ಅಧ್ಯಕ್ಷ ಎಂ.ಎಸ್‌. ಅರಕೇರಿ, ಟಿ.ವೀರಣ್ಣ, ಪ್ರಭು ಹಲಗೇರಿ, ರಾಜು ಅಡಿವೆಪ್ಪನವರ, ಅಶೋಕ ಹೊಟ್ಟಿಗೌಡ್ರ, ಕೊಟ್ರೇಶಪ್ಪ ಎಮ್ಮಿ, ಟಿ.ಸಿ.ಪಾಟೀಲ, ಥೆರಪಿಯ ಜಿಲ್ಲಾ ಮುಖ್ಯಸ್ಥ ನಾಗರಾಜ ಹುಣಸಿಮನೆ, ನಾಗೇಂದ್ರ ಪೂಜಾರಿ, ಅಶೋಕ ಹುಣಸಿಮನೆ, ಕೌಶಿಕ್‌ ಸೇರಿದಂತೆ ಮತ್ತಿತರರು ತರಬೇತಿ ನೀಡಿದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.