ಕೋವಿಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ

ರಸ್ತೆಗಿಳಿದಿದ್ದ ನೂರಾರು ವಾಹನಗಳ ವಶ­! ಪೊಲೀಸರಿಂದ ದಂಡಂ ದಶಗುಣಂ ಅಸ್ತ್ರ ಪ್ರಯೋಗ

Team Udayavani, May 11, 2021, 10:43 AM IST

uihyghtuyg

ಹಾವೇರಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಘೋಷಿಸಿರುವ 14 ದಿನಗಳ ಲಾಕ್‌ಡೌನ್‌ಗೆ ಜಿಲ್ಲೆಯಲ್ಲಿ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನಗತ್ಯವಾಗಿ ಸಂಚಾರ ಮಾಡುವವರ ಮೇಲೆ ಪೊಲೀಸರು ದಂಡ ಪ್ರಯೋಗ ಆರಂಭಿಸಿದ್ದು, ನೂರಾರು ವಾಹನಗಳನ್ನು ಸೀಜ್‌ ಮಾಡಿ ಬಿಸಿ ಮುಟ್ಟಿಸಿದರು.

ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶವಿದ್ದರೂ ಸೋಮವಾರ ಪೊಲೀಸರು ಅಗತ್ಯ ಬಿಗಿ ಕ್ರಮ ಕೈಗೊಂಡರು. ಅಗತ್ಯ ವಸ್ತು ಖರೀದಿ ಹೆಸರಿನಲ್ಲಿ ಬೈಕ್‌ ಗಳಲ್ಲಿ ಬಂದವರ ನೂರಾರು ವಾಹನಗಳನ್ನು ಬೆಳಗ್ಗೆಯೇ ವಶಪಡಿಸಿಕೊಂಡರು. ಎಲ್ಲ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದರು. 10 ಗಂಟೆವರೆಗೆ ನಡೆದುಕೊಂಡು ಹೋಗಲು ಅವಕಾಶ ನೀಡಿದ ಪೊಲೀಸರು, ಬಳಿಕ ಅದಕ್ಕೂ ಅವಕಾಶ ನೀಡಲಿಲ್ಲ. ಅನಗತ್ಯವಾಗಿ ಬೈಕ್‌ನಲ್ಲಿ ಸಂಚರಿಸಿದವರಿಗೆ ಲಾಠಿ ರುಚಿ ತೋರಿಸಿದರು.

10 ಗಂಟೆ ಬಳಿಕ ರಸ್ತೆಗಳು ಖಾಲಿ: ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದ್ದು, ಎಲ್ಲರನ್ನೂ ತಪಾಸಣೆ ಮಾಡಿ ಬಿಡಲಾಗುತ್ತಿದೆ. ನಗರ ಪ್ರದೇಶದ ರಸ್ತೆಗಳು ಖಾಲಿಯಾಗಿದ್ದವು. ಎಲ್ಲ ಅಂಗಡಿಗಳು ಮುಚ್ಚಿದ್ದವು. ಬಸ್‌ ಸಂಚಾರವೂ ಸ್ಥಗಿತಗೊಂಡಿತ್ತು. ರಸ್ತೆಯಲ್ಲಿ ಅನವಶ್ಯಕ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. 10 ಗಂಟೆ ಬಳಿಕ ದಿನಸಿ ಅಂಗಡಿಗಳು ಬಂದ್‌ ಆಗಿದ್ದರಿಂದ ಜನರ ಸಂಚಾರ ಕಡಿಮೆಯಾಗಿತ್ತು. ಅಗತ್ಯ ಸೇವೆಯಲ್ಲಿದ್ದವರು ಮಾತ್ರ ಐಡಿ ಕಾರ್ಡ್‌ ತೋರಿಸಿ ಸಂಚರಿಸಿದರು.

ಅಂಗಡಿ, ಹೋಟೆಲ್‌ಗ‌ಳೂ ಬಂದ್‌: ತರಕಾರಿ, ಔಷಧ, ಹಾಲು ಹಾಗೂ ಕೆಲ ದಿನಸಿ ಅಂಗಡಿ ಬಿಟ್ಟರೆ ಉಳಿದೆಲ್ಲ ಅಂಗಡಿ, ಮುಂಗಟ್ಟುಗಳು ಬಂದ್‌ ಆಗಿದ್ದವು. ಹೋಟೆಲ್‌ ಗಳಲ್ಲಿ ಪಾರ್ಸೆಲ್‌ ವ್ಯವಸ್ಥೆ ಇದ್ದರೂ ಬಹುತೇಕ ಹೋಟೆಲ್‌ ಗಳನ್ನು ಬಂದ್‌ ಮಾಡಲಾಗಿತ್ತು. ಹೀಗಾಗಿ, ಕೆಲವರು ಊಟ, ಉಪಾಹಾರಕ್ಕೆ ಪರದಾಡಿದರು. ಅನವಶ್ಯಕ ಓಡಾಟ ನಡೆಸುವವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಬೈಕ್‌, ಕಾರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಸ್ತೆಗಿಳಿಯಲು ಜನರ ಹಿಂದೇಟು: ನಗರದ ಎಲ್ಲ ಒಳ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ಯಾರೇ ನಗರದಿಂದ ಹೊರ ಹೋಗಬೇಕಾದರೆ ಶಹರ ಪೊಲೀಸ್‌ ಠಾಣೆ ದಾಟಿ ಸಿದ್ದಪ್ಪ ವೃತ್ತದ ಮೂಲಕ ಹೋಗಬೇಕು. ಪೊಲೀಸರು ತಪಾಸಣೆ ನಡೆಸುತ್ತಿರುವುದರಿಂದ ಜನರೇ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಮಧ್ಯಾಹ್ನದ ವೇಳೆಗೆ ಸಿದ್ದಪ್ಪ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಜಿಲ್ಲೆಯ ಅನೇಕ ದೇಗುಲಗಳಲ್ಲಿ ಬೆಳಿಗಿನ ಜಾವ ದೇವರಿಗೆ ಪೂಜೆ ಮಾಡಿ ಬಾಗಿಲು ಹಾಕಲಾಯಿತು. ಹೀಗಾಗಿ, ದೇವಾಲಯಗಳು ಸಹ ಭಕ್ತರಿಲ್ಲದೇ ಬಣಗುಟ್ಟಿದವು.

ಗಡಿಯಲ್ಲಿ ಬಂದೋ ಬಸ್ತ್: ಜಿಲ್ಲೆಯ ಗಡಿ ಭಾಗದಲ್ಲಿ ಹೊರ ಜಿಲ್ಲೆಗಳಿಂದ ಬರುವವರನ್ನು, ಜಿಲ್ಲೆಯಿಂದ ಪಕ್ಕದ ಜಿಲ್ಲೆಗೆ ಹೋಗುವವರನ್ನು ನಿರ್ಬಂಧಿಸಲು 9 ಚೆಕ್‌ ಪೋಸ್ಟ್‌ ನಿರ್ಮಿಸಲಾಗಿದೆ. ಹೊರಗಿನಿಂದ ಬಂದವರಿಗೆ ಅವರ ವಿಳಾಸ, ದಾಖಲೆ ಪರಿಶೀಲಿಸಿ ಕ್ವಾರಂಟೈನ್‌ ಸೀಲ್‌ ಹಾಕಲಾಗುತ್ತಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.