ಬದುಕಿನ ಶಿಕ್ಷಣ ನೀಡುವ ಸರ್ಕಾರಿ ಕಾಲೇಜು


Team Udayavani, Dec 28, 2019, 1:23 PM IST

hv-tdy-3

ಹಾನಗಲ್ಲ: ಸರ್ಕಾರಿ ಕಾಲೇಜುಗಳೆಂದರೆ ಮೂಗು ಮುರಿಯುವ ಸಂದರ್ಭಗಳಲ್ಲಿ ಹಾನಗಲ್ಲಿನ ಸರ್ಕಾರಿ ಪ.ಪೂ ಕಾಲೇಜು ಪರೀಕ್ಷೆ ಭಯ ಮುಕ್ತಗೊಳಿಸಿ, ನಕಲು ತೊಡೆದು ಹಾಕಿ, ವಿದ್ಯಾರ್ಥಿಗಳಿಗೆ ಓದಿನೊಂದಿಗೆ ಬದುಕಿನ ಶಿಕ್ಷಣ ನೀಡುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡು ಯಶಸ್ವಿಯಾಗಿದೆ.

ಹೌದು, ಈ ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರೊಂದಿಗೆ ಶಿಸ್ತು, ಶಾಂತಿ, ಧ್ಯಾನ ಅಧ್ಯಯನಕ್ಕೆ ಪ್ರೇರಣೆಯನ್ನು ಒದಗಿಸುವ ಕೆಲಸ ಮಾಡುತ್ತಿದೆ. ಯೋಗ, ಧ್ಯಾನ, ಕಲೆ, ಸಂಸ್ಕೃತಿ, ಕೃಷಿ, ಸಾಹಿತ್ಯ ವಿಚಾರ ಮಂಥನ ಇಲ್ಲಿನ ವಿಶೇಷಗಳು. ಆರೋಗ್ಯ, ಅಪರಾಧರಹಿತ ಬದುಕಿಗೆ ಬೇಕಾಗುವ ವಿಶೇಷ ತರಬೇತಿಗಳು ಇಲ್ಲಿ ನಡೆಯುತ್ತವೆ. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಪ್ರತಿ ದಿನ ವರ್ಗಗಳ ಆರಂಭಕ್ಕೂ ಮೊದಲು 15 ನಿಮಿಷಗಳ ಕಾಲ ಧ್ಯಾನಸ್ಥರಾಗುತ್ತಾರೆ. ಇವರಿಗೆ ಯಾವುದೇ ಸೂಚನೆಗಳ ಅಗತ್ಯ ಇರುವುದಿಲ್ಲ.

ಸದ್ದು ಗದ್ದಲವಿಲ್ಲ: ಪ್ರಸ್ತುತ ಶೈಕ್ಷಣಿಕ ವರ್ಷ ಆರಂಭವಾದ ಧ್ಯಾನದ ಪ್ರಕ್ರಿಯೆ ವಿದ್ಯಾರ್ಥಿಗಳ ಅಭ್ಯಾಸದ ಮೇಲೆ ಉತ್ತಮ ಪರಿಣಾಮ ಬೀರಿದೆ. ಸದ್ದು ಗದ್ದಲವಿಲ್ಲದೇ ವಿದ್ಯಾರ್ಥಿಗಳು ಓದಿನತ್ತ ಲಕ್ಷ್ಯ ವಹಿಸುತ್ತಾರೆ. ಶಾಲಾ ಪಾಠದೊಂದಿಗೆ ಬದುಕಿನ ಶಾಲೆಯಲ್ಲಿ ಪಾಸಾಗಲು ಬೇಕಾಗುವ ಮಾರ್ಗದರ್ಶನ ಕೂಡ ಇಲ್ಲಿ ನೀಡಲಾಗುತ್ತಿದೆ. ಕನ್ನಡ ಹಬ್ಬ, ಕಾನೂನು ತಿಳಿವಳಿಕೆ, ಕೃಷಿ ವಿಚಾರ ಸಂಕಿರಣ, ಸಾಹಿತ್ಯ ವಿಚಾರ ಸಂಕಿರಣಗಳು, ವೈದ್ಯಕೀಯ ವಿಚಾರ ಸಂಕಿರಣಗಳು, ಸಾಂಸ್ಕೃತಿಕ ಚಟುವಟಿಕೆಗಳು, ಹಿರಿಯ ಸಾಹಿತಿಗಳೊಂದಿಗೆ ಸಂವಾದ, ಹೀಗೆ ಹಲವು ವೈಚಾರಿಕ ಜ್ಞಾನಾರ್ಥ ಸಂಗತಿಗಳನ್ನು ವಿದ್ಯಾಥಿಥಗಳಿಗೆ ನೀಡಲಾಗುತ್ತದೆ.

ವರ್ಲಿ ಚಿತ್ರ: ಸ್ವಚ್ಛತೆ ಇಲ್ಲಿನ ಮೊದಲ ಆದ್ಯತೆ. ಇಡೀ ವರಾಂಡ ಶುಚಿಯಾಗಿಟ್ಟುಕೊಂಡಿರುವುದು ಮಾತ್ರವಲ್ಲ, ಮಾರ್ಗದರ್ಶಕ ಬರಹಗಳು, ಗಮನ ಸೆಳೆಯುವ ಕಲಾತ್ಮಕ ವರ್ಲಿ ಚಿತ್ರಗಳ ಮೂಲಕ ಆವರಣ ಪ್ರವೇಶಿಸುತ್ತಿದ್ದಂತೆ ಹೃದಯವನ್ನು ಜಾಗೃತಗೊಳಿಸುತ್ತವೆ. ಕಾಲೇಜಿನ ವರಾಂಡದ ಒಳ ಭಾಗದ ಗೋಡೆಗಳು ಹಲವು ಬರಹಗಳು, ವರ್ಲಿ ಕಲೆಯ ಚಿತ್ರಗಳನ್ನು ಹೊತ್ತು ನಿಂತಿವೆ. ಕಾಲೇಜು ಅಭಿವೃದ್ಧಿ ಸಮಿತಿ, ಉಪನ್ಯಾಸಕರ ವಿಶೇಷ ಕಾಳಜಿಯಿಂದಾಗಿ ಇಡೀ ಕಾಲೇಜು ವರಾಂಡ ಸ್ವತ್ಛ-ಶುದ್ಧ ಶಾಂತ ವಾತಾವರಣಕ್ಕೆ ಸಾಕ್ಷಿಯಾಗಿದೆ. ಪ.ಪೂ ಕಾಲೇಜು ಹಾವೇರಿ ಜಿಲ್ಲಾ ಉಪನಿರ್ದೇಶಕ ಎಸ್‌.ಸಿ. ಪೀರಜಾದೆ, ಕಾಲೇಜಿನ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಕಾಲೇಜಿನ ಪ್ರಭಾರ ಪ್ರಾಚಾರ್ಯ ಮಾರುತಿ ಶಿಡ್ಲಾಪುರ, ಉಪನ್ಯಾಸಕರಾದ ಎಸ್‌.

ಎಸ್‌.ನಿಸ್ಸೀಮಗೌಡರ, ಎಚ್‌.ಎಸ್‌. ಬಾರ್ಕಿ, ಕೆ.ಈಶ್ವರ, ಸುಮಂಗಲಾ ನಾಯನೇಗಲಿ, ರೂಪಾ ಹಿರೇಮಠ, ಎಸ್‌.ವಿ. ರಶ್ಮಿ, ಗೀತಾ ನಾಯ್ಕ, ವೀಣಾ ದೇವರಗುಡಿ, ಆಯಿಷಾ, ಬಸವರಾಜ ಹರಿಜನ ಅವರ ಶ್ರಮ, ಬೋಧಕೇತರ ಸಿಬ್ಬಂದಿ ಮಂಜು ಸುಣಗಾರ ಎಲ್ಲರ ಒಟ್ಟು ಪರಿಶ್ರಮ ಇಷ್ಟೆಲ್ಲ ಬದಲಾವಣೆ ಮಾಡಿದೆ.

ಮಕ್ಕಳಿಗೆ ನಾವು ಏನನ್ನು ಕೊಡುತ್ತೇವೆಯೋ ಅದನ್ನು ಪ್ರಾಂಜಲವಾಗಿ ಸ್ವೀಕರಿಸುವ ಮನಸ್ಸು ಅವರದು. ಹೀಗಾಗಿ ಒಳ್ಳೆಯದನ್ನು ನೀಡುವ ಉದ್ದೇಶ ನಮ್ಮದು. ಅದು ಸಫಲವಾಗಿದೆ. ಪರೀಕ್ಷೆ, ಅಂಕ, ಆಟ-ಪಾಠಗಳ ಜೊತೆಗೆ ಸಾಂಸ್ಕೃತಿಕ ವಾತಾವರಣ ನಿರ್ಮಿಸಿ ಕೊಟ್ಟಿದ್ದೇವೆಂಬ ಸಮಾಧಾನವಿದೆ.  ಪ್ರೊ| ಎಚ್‌.ಎಸ್‌. ಬಾರ್ಕಿ, ಉಪನ್ಯಾಸಕರು

 

-ರವಿ ಲಕ್ಷ್ಮೇಶ್ವರ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.