ಸರ್ಕಾರಿ ನೌಕರರಿಗೆ ಸೇವಾ ಮನೋಭಾವ ಅಗತ್ಯ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಲ್ಲಿ ಡಿಸಿ ಸಂಜಯ ಶೆಟ್ಟೆಣ್ಣವರ ಸಲಹೆ

Team Udayavani, Apr 22, 2022, 4:54 PM IST

22

ಹಾವೇರಿ: ಸರ್ಕಾರಿ ಕೆಲಸ ಜನರ ಕೆಲಸವಾಗಿದೆ. ಸರ್ಕಾರಿ ನೌಕರರು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಜನಸಾಮಾನ್ಯರ ಸೇವೆಯಲ್ಲಿ ನಿರತರಾಗಬೇಕೆಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಲಹೆ ನೀಡಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಜಿಲ್ಲಾ ಶಾಖೆ ಸಹಯೋಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ತಮ್ಮ ಕರ್ತವ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ 19 ಜನರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಸರ್ಕಾರಿ ನೌಕರರ ಉತ್ತಮ ಕೆಲಸಕ್ಕೆ ನಮ್ಮೆಲ್ಲರ ಸದಾ ಬೆಂಬಲವಿರುತ್ತದೆ. ಸರ್ಕಾರಿ ನೌಕರರ ಸಂಘದ ಚಟುವಟಿಕೆಗೆ ಐದು ಎಕರೆ ಭೂಮಿಯನ್ನು ಕೋರಿದ್ದು, ಜಾಗೆ ಗುರುತಿಸಿದರೆ ಶೀಘ್ರದಲ್ಲೇ ಮಂಜೂರಾತಿ ನೀಡುವುದಾಗಿ ಘೋಷಿಸಿದರು.

ಉಪನ್ಯಾಸಕರಾಗಿ ಭಾಗವಹಿಸಿದ್ದ ಉಪನ್ಯಾಸಕ ಅರವಿಂದ ಐರಣಿ ಮಾತನಾಡಿ, ಸರ್ಕಾರಿ ನೌಕರರಿಗೆ ಅ ಧಿಕಾರ ಅಷ್ಟೇ ಜವಾಬ್ದಾರಿಯೂ ಇರುತ್ತದೆ. ಆಡಳಿತದಲ್ಲಿ ಜವಾಬ್ದಾರಿ ನಿಭಾಯಿಸುವುದು ಒಂದು ಕೌಶಲ್ಯ. ಇದನ್ನು ರೂಢಿಸಿಕೊಂಡಾಗ ಕರ್ತವ್ಯ ನಿರ್ವಹಣೆಯಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಐದು ಎಕರೆ ನಿವೇಶನ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಮಾನ ವೇತನಕ್ಕಾಗಿ ನೌಕರರ ಸಂಘದ ಕೋರಿಕೆಯಂತೆ ವೇತನಕ್ಕೆ ಆಯೋಗ ರಚನೆಗೆ ಘೋಷಣೆ ಮಾಡಿದೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು 25 ಸಾವಿರ ರೂ.ಗೆ ಹೆಚ್ಚಳ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿ ಪ್ರದಾನ: 2020-21ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಬ್ಯಾಡಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್‌.ತಿಮ್ಮಾರಡ್ಡಿ, ದೇವಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಮಂಜುನಾಥ ಜನಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸೂಪರಿಂಟೆಂಡೆಂಟ್‌ ರಮೇಶ ಹರಿಜನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಪರಿಂಟೆಂಡೆಂಟ್‌ ಯಲ್ಲಪ್ಪ ಪೂಜಾರ, ರಾಣಿಬೆನ್ನೂರ ತಹಶೀಲ್ದಾರ್‌ ಕಚೇರಿ ಗ್ರಾಮಲೆಕ್ಕಾಧಿಕಾರಿ ಅಶೋಕ ಅರಳೇಶ್ವರ, ಹಾವೇರಿ ಸಹಾಯಕ ಪೊಲೀಸ್‌ ಅಧೀಕ್ಷಕರ ಕಚೇರಿ ಪ್ರಥಮ ದರ್ಜೆ ಸಹಾಯಕ ಅನ್ವರಸಾಬ ಬುಡ್ನೆಸಾಬನವರ, ಜಿಲ್ಲಾಧಿಕಾರಿ ಕಚೇರಿಯ ಡಿ ಗ್ರೂಪ್‌ ನೌಕರ ನಾಗರಾಜ ಸೋಮಕ್ಕಳವರ ಹಾಗೂ ಹಿರೇಕೆರೂರು ತಹಶೀಲ್ದಾರ್‌ ಕಚೇರಿ ಡಿ ಗ್ರೂಪ್‌ ನೌಕರ ಜಿ.ಆರ್‌.ಕಿಳ್ಳಿ ಅವರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪ್ರಶಸ್ತಿ ಪ್ರದಾನ ಮಾಡಿದರು.

2021-22ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಹಾನಗಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್‌ಕುಮಾರ ಬಿ., ಹಿರೇಕೆರೂರು ತಾಲೂಕು ಪಂಚಾಯಿತಿಯ ಜೆ.ಜಿ. ಪರಶುರಾಮ ಎಚ್‌ .ನಾಗರಾಳ, ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೇದಾರ್‌ ಸಿ.ಎಸ್‌.ಜಾಧವ, ಹೂವಿನಶಿಗ್ಲಿ ಗ್ರಾಪಂ ಪಿಡಿಒ ರಮೇಶ ಹುಲಸೋಗಿ, ಆರೋಗ್ಯ ಇಲಾಖೆ ವಾಹನ ಚಾಲಕ ಪುಂಡಲಿಕ ಬುಲುಬಲೆ, ಹಿರೇಕೆರೂರು ತಹಶೀಲ್ದಾರ್‌ ಕಚೇರಿ ಗ್ರಾಮ ಲೆಕ್ಕಾಧಿಕಾರಿ ಸುಮಾ ಕೆಂಚಿಕೊಪ್ಪ, ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್‌ ನೌಕರಾದ ಲಲಿತಾ ದುಗಲದ ಹಾಗೂ ಹಾವೇರಿ ತಹಶೀಲ್ದಾರ್‌ ಕಚೇರಿ ಡಿ ಗ್ರೂಪ್‌ ನೌಕರ ಜಾಫರಸಾಬ್‌ ಹುಬ್ಬಳ್ಳಿ ಅವರಿಗೆ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ ರೋಷನ್‌, ಅಪರ ಜಿಲ್ಲಾಧಿಕಾರಿ ಡಾ|ಎನ್‌.ತಿಪ್ಪೇಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಅಬಕಾರಿ ಆಯುಕ್ತರಾದ ಶೈಲಜಾ, ಡಿಎಚ್‌ಒ ಡಾ|ಎಚ್‌.ಎಸ್‌.ರಾಘವೇಂದ್ರಸ್ವಾಮಿ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಬ್ಯಾಡಗಿ ತಹಶೀಲ್ದಾರ್‌ ರವಿ ಕೊರವರ, ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.