ಸೋರುತಿಹವು ಸರ್ಕಾರಿ ನೌಕರರ ವಸತಿ ಗೃಹಗಳು


Team Udayavani, Oct 12, 2019, 2:15 PM IST

hv-tdy-1

ಹಾವೇರಿ: ಒಡೆದ ಹೆಂಚುಗಳು, ಬಿರುಕು ಬಿಟ್ಟ ಮನೆ ಗೋಡೆ, ಜರಡಿಯಂತಾದ ಛಾವಣಿಯಿಂದ ಮಳೆ ಬಂದಾಗಲೆಲ್ಲ ನೀರು ಸೋರುವುದು, ಇದನ್ನು ತಪ್ಪಿಸಲು ಮನೆತುಂಬ ಪಾತ್ರೆಗಳನ್ನಿಟ್ಟು ನೀರು ಹಿಡಿಯುವ ಕೆಲಸದಲ್ಲಿ ನಿರತರಾಗುವ ಮನೆ ಮಂದಿ….ಅಷ್ಟಕ್ಕೂ ಇದು ಯಾವುದೋ ಗುಡಿಸಿಲಿನ ದುಸ್ಥಿತಿಯಲ್ಲ; ಸರ್ಕಾರಿ ನೌಕರರ ವಸತಿ ಗೃಹಗಳ ದಯನೀಯ ಸ್ಥಿತಿ.!

ಇದು ಆಶ್ಚರ್ಯ ಎನಿಸಿದರೂ ಕಹಿಸತ್ಯ. ದೀಪದ ಕೆಳಗೆ ಕತ್ತಲೆ ಎನ್ನುವ ಗಾದೆಯಂತೆ ಸ್ಥಳೀಯ ವಿದ್ಯಾ ನಗರದಲ್ಲಿರುವ ಲೋಕೋಪಯೋಗಿ ಇಲಾಖೆ ಸೇರಿದ ವಸತಿ ಗೃಹಗಳು ನಿರ್ವಹಣೆ ಕೊರತೆಯಿಂದ ನೌಕರರು ಇಂಥ ಹಾಳಾದ ಮನೆಗಳಲ್ಲಿಯೇ ಬದುಕು ಸಾಗಿಸುತ್ತಿದ್ದಾರೆ.

ಹೆಂಚು ಒಡೆದಿರುವುದರಿಂದ ಮೇಲೆ ಸ್ವಂತ ಖರ್ಚಿನಲ್ಲಿ ಪ್ಲಾಸ್ಟಿಕ್‌ ಹೊದಿಕೆ ಹಾಕಿಕೊಂಡು, ಸಣ್ಣ ಪುಟ್ಟ ದುರಸ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಹಂಚಿಕೆಯಾಗದ ಮನೆಗಳಂತೂ ಪಾಳುಬಿದ್ದು ಮನೆ ತುಂಬ ಜೇಡರ ಬಲೆ, ಧೂಳು ತುಂಬಿಕೊಂಡಿದೆ. ಮನೆ ಸುತ್ತ ಆಳೆತ್ತರ ಗಿಡ-ಗಂಟಿ, ಪೊದೆ ಬೆಳೆದು ವಿಷಜಂತುಗಳ ಆವಾಸ ಸ್ಥಾನವಾಗಿದೆ. ಇಂಥ ಮನೆಯಗಳ ಪಕ್ಕದವರು ನಿತ್ಯ ವಿಷಜಂತುಗಳು ಕಚ್ಚುವ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಅಭಿವೃದ್ಧಿಗೆ ಉದಾಸೀನ: ವಸತಿಗೃಹಗಳನ್ನು ನಿರ್ಮಿಸಿ ಸುಮಾರು 50ರಿಂದ 60 ವರ್ಷಗಳಾಗಿದ್ದು, ಹೆಂಚುಗಳು ಒಡೆದು ಹೋಗಿವೆ. ಇದರಿಂದಾಗಿ ಮಳೆಗಾಲದ ಸಂದರ್ಭದಲ್ಲಿ ಮನೆಗಳು ಸೋರುತ್ತಿವೆ. ಈಗಂತೂ ನಿತ್ಯ ಸಂಜೆ ಮಳೆ ಸುರಿಯುತ್ತಿದ್ದು ಮಳೆ ನೀರು ಸೋರುವಲ್ಲಿ ಪಾತ್ರೆಗಳನ್ನು ಇಡುವುದು ಸಾಮಾನ್ಯವಾಗಿದೆ. ವಸತಿ ಗೃಹಗಳಿಗೆ ವಿದ್ಯುದೀಕರಣ ಮಾಡಿ ಸುಮಾರು ವರ್ಷಗಳೇ ಕಳೆದಿದ್ದು, ಅಲ್ಲಲ್ಲಿ ತಂತಿಗಳು ತುಂಡುಗಳಾಗಿವೆ. ಪಿಡಬ್ಲ್ಯೂ ಡಿ ಇಲಾಖೆ ವಸತಿ ನಿಲಯಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇಲಾಖೆ ದಿವ್ಯ ನಿರ್ಲಕ್ಷ್ಯ ತೋರಿದ್ದು ವಸತಿ ಗೃಹಗಳ ನಿವಾಸಿಗರು ತೊಂದರೆ ಅನುಭವಿಸುವಂತಾಗಿದೆ.

ಅನುದಾನ ದುರ್ಬಳಕೆ: ವಸತಿ ಗೃಹಗಳ ಪ್ರತಿಯೊಂದು ಮನೆಗಳಿಗೆ ಸುಣ್ಣ, ಬಣ್ಣ, ವಿದ್ಯುತ್‌, ಒಡೆದ ಹೆಂಚುಗಳ ನಿರ್ವಹಣೆಗೆ ವರ್ಷಕ್ಕೆ ಇಂತಿಷ್ಟು ಅನುದಾನವನ್ನು ನೀಡಲಾಗುತ್ತದೆ. ಆದರೆ, ಗುತ್ತಿಗೆದಾರರು ಅನುದಾನವನ್ನು ಸಮರ್ಪಕ ಬಳಕೆ ಮಾಡದೇ ಕೆಲವೊಂದು ಮನೆಗಳಿಗೆ ಮಾತ್ರ ಸುಣ್ಣ, ಬಣ್ಣ ಬಳೆದು ಕೈತೊಳೆದುಕೊಳ್ಳುತ್ತಿದ್ದಾರೆ. ಉಳಿದ ವಸತಿ ಗೃಹಗಳ ದುರಸ್ತಿ ಕಾರ್ಯಕ್ಕೆ ಅನುದಾನದ ಕೊರತೆಯಿದ್ದು, ಮುಂದಿನ ವರ್ಷ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂಬ ಉತ್ತರ ನೀಡುತ್ತಾರೆ ಎಂಬುದು ವಸತಿ ಗೃಹಗಳ ನಿವಾಸಿಗಳ ಆರೋಪ. ಒಟ್ಟಾರೆ ಸರ್ಕಾರಿ ನೌಕರರಿಗಾಗಿ ಇರುವ ವಸತಿ ಗೃಹಗಳನ್ನು ಸಮರ್ಪಕವಾಗಿ ದುರಸ್ತಿಗೊಳಿಸಿ, ಮೂಲಸೌಲಭ್ಯ ಕಲ್ಪಿಸಿ ಅನುಕೂಲ ಮಾಡಿಕೊಡಬೇಕು ಎಂಬುದು ವಸತಿ ಗೃಹಗಳಲ್ಲಿ ವಾಸವಿರುವ ನೌಕರ, ಸಿಬ್ಬಂದಿಗಳ ಆಗ್ರಹವಾಗಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.