ಸರ್ಕಾರಿ ಕೊಳವೆ ಬಾವಿ ಶುಂಠಿ ಬೆಳೆಗೆ ಬಳಕೆ

•ನೀರಿನ ಸಮಸ್ಯೆ ಪರಿಹರಿಸಲು ವಿಫಲವಾದರೆ ಕ್ರಮ •ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ

Team Udayavani, Jun 29, 2019, 3:15 PM IST

hv-tdy-4..

ಬ್ಯಾಡಗಿ: ತಾಲೂಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸದಸ್ಯ ಶಾಂತಪ್ಪ ದೊಡ್ಮನಿ ಎಇಇ ಶಂಕರ ಚವಾಣ ಅವರನ್ನು ತರಾಟೆ ತೆಗೆದುಕೊಂಡರು.

ಬ್ಯಾಡಗಿ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ಗುಡ್ಡದ ಮಲ್ಲಾಪುರದಲ್ಲಿ ಸರ್ಕಾರಿ ಕೊಳವೆ ಬಾವಿಯೊಂದನ್ನು ಖಾಸಗಿ ವ್ಯಕ್ತಿಗಳು ಶುಂಠಿ ಬೆಳೆಯುವ ಹೊಲಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಅದನ್ನು ಸ್ಥಗಿತಗೊಳಿಸಿ ಗ್ರಾಮದ ಮೇಲ್ಮಟ್ಟದ ಜಲಾಗಾರಕ್ಕೆ ನೀರು ಪೂರೈಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಅಧ್ಯಕ್ಷೆ ಸವಿತಾ ಸುತ್ತಕೋಟಿ ತರಾಟೆ ತಗೆದುಕೊಂಡರು.

ತಾಲೂಕು ಪಂಚಾಯತ್‌ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯದ ಕುರಿತು ಗಮನ ಸೆಳೆದ ಸದಸ್ಯ ಶಾಂತಪ್ಪ ದೊಡ್ಮನಿ, ಮಳೆಯಿಲ್ಲದೆ ಜನ-ಜಾನುವಾರು ಕುಡಿಯುವ ನೀರಿಗಾಗಿ ತೊಂದರೆ ಪಡುತ್ತಿರುವ ಈ ದಿನಗಳಲ್ಲಿ ಸರ್ಕಾರಿ ಕೊಳವೆಬಾವಿಯೊಂದರ ದುರ್ಬಳಕೆಯಾಗುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ಆರೋಪಿಸಿದರು.

ಸದಸ್ಯ ಪ್ರಭುಗೌಡ ಪಾಟೀಲ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಹಾಗಂತಲೇ ಕೊಳವೆಬಾವಿಯನ್ನು ಗ್ರಾಮಸ್ಥರ ಅನುಕೂಲಕ್ಕಾಗಿ ಕೊರೆಸಲಾಗಿದೆ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಪ್ರಭಾವ ಬೀರುವ ಮೂಲಕ ಹಿರೇಕೆರೂರು ಹೆಸ್ಕಾಂ ವಿಭಾಗದಿಂದ ಅನಧಿಧೀಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದು ನೀರನ್ನು ಖಾಸಗಿ ಜಮೀನುಗಳಿಗೆ ಹರಿಸಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಗಳ ಗಮನಕ್ಕೆ ತರುವ ಮೂಲಕ ಹಿರೇಕೆರೂರು ಹೆಸ್ಕಾಂ ಸಿಬ್ಬಂದಿ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸವಾಗಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ನೀರು ಪೂರೈಕೆ ಎಇಇ ಶಂಕರ ಚವಾಣ, ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದ್ದು, ಗುಡ್ಡದ ಮಲ್ಲಾಪುರ ಶ್ರೀಮಠದ ಧರ್ಮಾಧಿಕಾರಿಗಳು ಹೊಲಕ್ಕೆ ನೀರು ಬಿಡುವುದನ್ನು ನಿಲ್ಲಿಸುತ್ತೇನೆ ಎಂದು ಮೌಖೀಕ ಭರವಸೆ ನೀಡಿದ್ದಾರೆ. ಮಾತಿನಂತೆ ನಡೆದುಕೊಳ್ಳುವ ವಿಶ್ವಾಸವಿಟ್ಟು ಮರಳಿ ಬಂದಿದ್ದೇನೆ ಎಂದರು.

ಸ್ಥಾಯಿಸಮಿತಿ ಅಧ್ಯಕ್ಷ ವೈ.ಎನ್‌. ಕರೇಗೌಡ್ರ ಮಾತನಾಡಿ, ವಿವಿಧ ವಸತಿ ಯೋಜನೆಯಡಿ ಬಡ ಫಲಾನುಭವಿಗಳಿಗೆ ಮಂಜೂರಾದ ಮನೆಗಳ ಕಾರ್ಯಾದೇಶ ಯಾವೊಬ್ಬ ಪಿಡಿಒಗಳೂ ಉಚಿತವಾಗಿ ಕೊಡುತ್ತಿಲ್ಲ. ಹಣ ಕೊಟ್ಟವರಿಗಷ್ಟೇ ಕಾರ್ಯಾದೇಶ ನೀಡಲಾಗುತ್ತಿದೆ. ಇಲ್ಲದಿದ್ದರೇ ಬ್ಲಾಕ್‌ ಆಗಿದೆ ಎಂದು ಕುಂಟುನೆಪ ಹೇಳಿ ಕಳುಹಿಸುತ್ತಿದ್ದಾರೆ. ಇದರಿಂದ ಫಲಾನುಭವಿಗಳಿಗೆ ಗೊತ್ತಿಲ್ಲದಂತೆ ಅವರ ಹೆಸರಿಗೆ ಬಂದಂತಹ ಮನೆಗಳು ಹಿಂದಕ್ಕೆ ಮರಳುತ್ತಿವೆ. ಇನ್ನೂ ಕೆಲವರಿಗೆ ಮನೆ ನಿರ್ಮಿಸಿಕೊಳ್ಳಲು ಮೌಖೀಕವಾಗಿ ತಿಳಿಸಲಾಗುತ್ತಿದ್ದು, ಮನೆ ನಿರ್ಮಿಸಿಕೊಂಡಿದ್ದವರಿಗೆ ಹಣ ನೀಡದೇ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು.

ಲೋಕೋಪಯೋಗಿ ಇಲಾಖೆ ಮೇಲಿನ ಚರ್ಚೆ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಎನ್‌.ಕರೇಗೌಡ್ರ ಮಾತನಾಡಿ, ಕದಮನಹಳ್ಳಿ ಹಾಗೂ ಗುಂಡೇನಹಳ್ಳಿ ಗ್ರಾಮಗಳ ಮಧ್ಯೆ ರಸ್ತೆ ತಿರುವೊಂದು ಅಪಾಯಕ್ಕೆ ಆಹ್ವಾನಿಸುತ್ತಿದೆ. ಶಾಲಾ ಮಕ್ಕಳನ್ನು ಹೊತ್ತೂಯ್ಯುವ ಸಂದರ್ಭದಲ್ಲಿ ಸಾರಿಗೆ ಬಸ್‌ ಎರಡು ಬಾರಿ ರಸ್ತೆ ಬಿಟ್ಟು ನೆಲಕ್ಕಳಿದಿದೆ. ಹೀಗಿದ್ದರೂ ಸಹ ತಿರುವು ಸರಳೀಕರಣಗೊಳಿಸುವ ಕುರಿತು ಕಳೆದ 6 ತಿಂಗಳ ಹಿಂದೆಯೇ ಮಾನ್ಯ ಶಾಸಕರು ಅಂದಾಜು ಪತ್ರಿಕೆ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರೂ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ತರಾಟೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಎಂಜಿನಿಯರ್‌ ಕೆ.ರಾಜಪ್ಪ, ಮೇಲಧಿಕಾರಿಗಳಿಂದ ಯಾವುದೇ ಸೂಚನೆ ಸಿಗದ ಹಿನ್ನೆಲೆಯಲ್ಲಿ ಯೋಜನಾ ಪ್ರತಿ ಸಿದ್ಧಪಡಿಸಿಲ್ಲ. ಅಷ್ಟಕ್ಕೂ ಈ ರಸ್ತೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಭೆಗೆ ತಿಳಿಸಿದರು. ಇದರಿಂದ ಮತ್ತಷ್ಟು ಗರಂ ಆದ ಕರೇಗೌಡ್ರ ‘ಹಾಗಿದ್ದರೇ ಇಷ್ಟು ದಿವಸ ಮಲಗಿದ್ದೀರೇನ್ರಿ? ಇಲ್ಲಿ ಯಾರೂ ದನ ಕಾಯೋರಿಲ್ಲಾ’ ಇಂತಹ ಹೇಳಿಕೆ ನೀಡಲು ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಚಿಕ್ಕಬಾಸೂರ ಗ್ರಾಪಂ ಅಧ್ಯಕ್ಷೆ ಕುಸಮಾ ಹಂಜೇರ ಮಾತನಾಡಿ, ಗ್ರಾಮ ಪಂಚಾಯತ್‌ ಜಾಗವನ್ನು ಒತ್ತುವರಿ ಮಾಡಿದ್ದ ಕೆಲ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಒತ್ತುವರಿ ಮರಳಿ ಪಡೆಯಲು ಗ್ರಾಪಂಗೆ ಅಧಿಕಾರವಿಲ್ಲವೇ ಎಂದು ಪ್ರಶ್ನಿಸಿದರು. ಕೂಡಲೇ ನೆನೆಗುದಿಗೆ ಬಿದ್ದಿರುವ ಪ್ರಕರಣಗಳನ್ನು ಪೂರ್ಣಗೊಳಿಸಿಕೊಡ ಬೇಕು ಮತ್ತು ಪಂಚಾಯಿತಿ ಹಸ್ತಾಂತರ ಮಾಡಿಕೊಡುವಂತೆ ಮನವಿ ಮಾಡಿದರು.

ಉಪಾಧ್ಯಕ್ಷೆ ಶಾಂತಮ್ಮ ದೇಸಾಯಿ ಸೇರಿದಂತೆ, ಸದಸ್ಯರಾದ ಗುಡ್ಡಪ್ಪ ಕೋಳೂರು, ಶಶಿಕಲಾ ಹಲಗೇರಿ, ಪೂರ್ಣಿಮಾ ಆನ್ವೇರಿ, ಸಾವಿತ್ರಾ ಕೋಡದ, ಪಾರ್ವತಮ್ಮ ಮುದುಕಮ್ಮನವರ, ಲಕ್ಷಣ ಮೇಗಳಮನಿ, ಲಲಿತಾ ಲಮಾಣಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.