ಉನ್ನತೀಕರಿಸಿದ ಶಾಲೆಗಳಿನ್ನು ಸರ್ಕಾರಿ ಪ್ರೌಢಶಾಲೆಗಳು!


Team Udayavani, Jun 25, 2017, 3:45 AM IST

GOVT-SCHOOL-24.jpg

ಹಾವೇರಿ: ರಾಜ್ಯದಲ್ಲಿರುವ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪ್ರಸಕ್ತ ವರ್ಷದಿಂದ “ಸರ್ಕಾರಿ ಪ್ರೌಢಶಾಲೆ (ಆರ್‌.ಎಂ.ಎಸ್‌.ಎ.)’ ಎಂದು ನಾಮಕರಣ ಮಾಡಲಾಗಿದೆ.

ಶಿಕ್ಷಣ ಇಲಾಖೆ ಈ ಕುರಿತು ಜೂ.12ರಂದೇ ನಿರ್ಣಯ ಕೈಗೊಂಡಿದ್ದು, ಆದೇಶ ಈಗ ಶಾಲೆಗಳಿಗೆ ತಲುಪಿ, ಶಾಲೆಗಳ ಹೆಸರು ಬದಲಾವಣೆ ಕಾರ್ಯ ಶುರುವಾಗಿದೆ. ರಾಜ್ಯದಲ್ಲಿ 2014-15ರಿಂದ 2016-17ವರೆಗೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 462 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿತ್ತು. ಹೀಗೆ ಉನ್ನತೀಕರಿಸಿದ ಬಳಿಕ ಅವುಗಳಿಗೆ “ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು’ ಎಂದು ಹೆಸರಿಸಲಾಗಿತ್ತು. ಈಗ ಇಂತಹ ಶಾಲೆಗಳಲ್ಲಿ ಪ್ರೌಢಶಿಕ್ಷಣ ನೀಡುತ್ತಿರುವುದರಿಂದ ಅವುಗಳ ಹೆಸರನ್ನು ಬದಲಾಯಿಸಲು ಇಲಾಖೆ ನಿರ್ಧರಿಸಿದೆ.

ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳ ಹೆಸರನ್ನು ಇಲಾಖೆ ಬದಲಾಯಿಸಿ ಇಂತಹ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ “ಸರ್ಕಾರಿ ಪ್ರೌಢಶಾಲೆ (ಆರ್‌.ಎಂ.ಎಸ್‌.ಎ. ಅಂದರೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ)’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಬದಲಾವಣೆ ಏಕೆ?:
ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿದ ಆರಂಭದ ವರ್ಷ ಅಂದರೆ 2014-15ರಲ್ಲಿ 8ನೇ ತರಗತಿ ಆರಂಭಿಸಲಾಗಿತ್ತು. ಮುಂದಿನ ವರ್ಷಗಳಲ್ಲಿ ಇಲ್ಲಿಯೇ 9 ಹಾಗೂ 10ನೇ ತರಗತಿಯನ್ನೂ ಮುಂದುವರಿಸಿರುವುದರಿಂದ ಉನ್ನತೀಕರಿಸಿದ ಶಾಲೆಗಳು ಈಗ ಪೂರ್ಣ ಪ್ರಮಾಣದ ಪ್ರೌಢಶಾಲೆಗಳಾಗಿ ಮಾರ್ಪಟ್ಟಿವೆ.

ಪ್ರೌಢ ಶಿಕ್ಷಣ ನೀಡುವ ಇಂತಹ ಶಾಲೆಗಳೂ “ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ’ ಎಂಬ ಹೆಸರಿನಿಂದಲೇ ಕರೆಸಿಕೊಳ್ಳುತ್ತಿದ್ದವು.  ಪ್ರೌಢ ಶಿಕ್ಷಣ ನೀಡುವ ಶಾಲೆಗಳನ್ನು ಪ್ರಾಥಮಿಕ ಶಾಲೆಗಳೆಂದು ಕರೆಯುವುದರಿಂದ ಆಗುವ ಆಭಾಸವನ್ನು ತಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಿಂದ ಇಂತಹ ಶಾಲೆಗಳನ್ನು ಸರ್ಕಾರಿ ಪ್ರೌಢಶಾಲೆಗಳೆಂದು ಹೆಸರಿಸಲು ಮುಂದಾಗಿದೆ.

ಫಲಕ ಬದಲಾಯಿಸಲು ಸೂಚನೆ:
ಈಗಾಗಲೇ ಇರುವ “ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ’ ಫಲಕವನ್ನು ತೆಗೆಯಿಸಿ ಹೊಸದಾಗಿ “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಬರೆಸಲು ಇಲಾಖೆ ರಾಜ್ಯದ ಎಲ್ಲ ಶಾಲೆಗಳಿಗೆ ನಿರ್ದೇಶಿಸಿದೆ. ಶಾಲೆ ಹೆಸರಿನ ನಾಮಫಲಕದ ಜತೆಗೆ ಶಾಲೆಯ ಮೊಹರು ಹಾಗೂ ಆಡಳಿತಾತ್ಮಕ ವಿಷಯದಲ್ಲಿ ಈ ಶಾಲೆಗಳನ್ನು “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಬದಲಾಯಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.
ಒಟ್ಟಾರೆ ರಾಜ್ಯದಲ್ಲಿರುವ 462 ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳು ಇನ್ನು ಮುಂದೆ “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಕರೆಸಿಕೊಳ್ಳಲಿವೆ.

ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳ ಹೆಸರನ್ನು “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ಬದಲಾಯಿಸಿಕೊಳ್ಳಲು ಇಲಾಖೆಯಿಂದ ಆದೇಶ ಬಂದಿದ್ದು, ಎಲ್ಲ ಶಾಲೆಗಳಿಗೆ ಫಲಕ, ಮೊಹರು ಬದಲಾವಣೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಜತೆಗೆ ಆಡಳಿತಾತ್ಮಕ ವಿಷಯದಲ್ಲಿ “ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)’ ಎಂದು ನಮೂದಿಸಲು ಸೂಚಿಸಲಾಗಿದೆ.
– ಶಿವನಗೌಡ ಪಾಟೀಲ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.

– ಎಚ್‌.ಕೆ. ನಟರಾಜ
 

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.