ಜಿಪಂ-ತಾಪಂ ಮೀಸಲು ಪ್ರಕಟ ­

ಕುತೂಹಲ ಕೆರಳಿಸಿದ ಚುನಾವಣಾ ಆಯೋಗದ ನಡೆ ­!ಸದ್ಯ ಚುನಾವಣೆ ಅನುಮಾನ

Team Udayavani, May 2, 2021, 7:36 PM IST

fyhrtyr

ಹಾವೇರಿ: ಕೊರೊನಾ ಎರಡನೇ ಅಲೆ ನಡುವೆಯೇ ಜಿಪಂ, ತಾಪಂ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ತಯಾರಿ ನಡೆಸಿರುವ ರಾಜ್ಯ ಚುನಾವಣಾ ಆಯೋಗ, ಜಿಲ್ಲೆಯ ಜಿಪಂ-ತಾಪಂ ಕ್ಷೇತ್ರಗಳ ವರ್ಗವಾರು ಮೀಸಲಾತಿ ಕೋಷ್ಠಕ ಪ್ರಕಟಿಸಿದೆ.

ಕಳೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ 34 ಸ್ಥಾನಗಳು ಇದ್ದವು. ಈ ಸಾರಿ ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರ ವಿಂಗಡಿಸಿ 38ಕ್ಷೇತ್ರಗಳನ್ನು ನಿಗದಿಪಡಿಸಲಾಗಿದೆ. ಸದ್ಯ ಚುನಾವಣಾ ಆಯೋಗ ಹೊರಡಿಸಿರುವ ವರ್ಗವಾರು ಮೀಸಲಾತಿ ಕೋಷ್ಠಕದನ್ವಯ ಒಟ್ಟು 38ಕ್ಷೇತ್ರಗಳ ಪೈಕಿ 19 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಅನುಸೂಚಿತ ಜಾತಿಗೆ 6ಸ್ಥಾನಗಳಿದ್ದು, ಅದರಲ್ಲಿ 3ಮಹಿಳೆಯರಿಗೆ, ಅನುಸೂಚಿತ ಪಂಗಡದಲ್ಲಿ ಮೀಸಲಿರುವ 4ಸ್ಥಾನಗಳ ಪೈಕಿ 2 ಮಹಿಳೆಯರಿಗೆ, ಹಿಂದುಳಿದ ಅ ವರ್ಗಕ್ಕೆ ಮೀಸಲಿಟ್ಟಿರುವ 7ಸ್ಥಾನಗಳಲ್ಲಿ 4 ಮಹಿಳೆಯರಿಗೆ ಮೀಸಲಾಗಿವೆ.

ಹಿಂದುಳಿದ ಬ ವರ್ಗಕ್ಕೆ ಮೀಸಲಾಗಿರುವ ಎರಡು ಸ್ಥಾನಗಳಲ್ಲಿ ಒಂದು ಮಹಿಳೆಯರ ಪಾಲಾಗಿದೆ. ಒಟ್ಟು 19ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಿದ್ದು, ಅದರಲ್ಲಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲ್ಪಟ್ಟಿವೆ.

4 ನೂತನ ಜಿಪಂ ಕ್ಷೇತ್ರಗಳ ರಚನೆ:

ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು ಹಾಗೂ ಹಾನಗಲ್ಲ ತಾಲೂಕುಗಳಲ್ಲಿ ತಲಾ ಒಂದು ಜಿಪಂ ಕ್ಷೇತ್ರಗಳನ್ನು ಹೆಚ್ಚಿಸಿ ಆಯೋಗ ಅಧಿ ಸೂಚನೆ ಹೊರಡಿಸಿದೆ. ಹಾವೇರಿ ತಾಲೂಕಿನ ಕರ್ಜಗಿ, ಹಾನಗಲ್ಲ ತಾಲೂಕಿನ ಕುಸನೂರು, ರಾಣಿಬೆನ್ನೂರು ತಾಲೂಕಿನ ಕೋಡಿಯಾಲ, ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಹೊಸದಾಗಿ ಜಿಪಂ ಕ್ಷೇತ್ರಗಳು ರಚನೆಯಾಗಿವೆ.

ಮತದಾರರ ಪಟ್ಟಿ ಪ್ರಕಟವೂ ವಿಳಂಬ:

ಜಿಪಂ, ತಾಪಂ ಚುನಾವಣೆಗೆ ಸಂಬಂಧಿ ಸಿದ ಮತದಾರರ ಪಟ್ಟಿಯನ್ನು ಏ.30ರಂದು ಪ್ರಕಟಿಸಲು ಚುನಾವಣಾ ಆಯೋಗ ಜಿಲ್ಲಾ ಧಿಕಾರಿಗಳಿಗೆ ಸೂಚನೆ ನೀಡಿತ್ತು. ಆದರೆ, ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಘೋಷಣೆಯಾಗಿರುವುದರಿಂದ ಮತದಾರರ ಪಟ್ಟಿಯ ಮುದ್ರಣಕ್ಕೆ, ಇತರೆ ಸರಬರಾಜಿಗೆ ಹಾಗೂ ಇತರೆ ಕಾರ್ಯಗಳಿಗೆ ಅಡ್ಡಿಯಾಗಿದೆ. ಇದರಿಂದ ಏ.30ರಂದು ಪ್ರಕಟಿಸಬೇಕಿದ್ದ ಅಂತಿಮ ಮತದಾರರ ಪಟ್ಟಿಯನ್ನು ಮೇ 15ಕ್ಕೆ ಮುಂದೂಡಲಾಗಿದೆ ಎಂದು ಆಯೋಗದ ಅ ಧೀನ ಕಾರ್ಯದರ್ಶಿಗಳು ಜಿಲ್ಲಾ  ಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ಚುನಾವಣೆ ಅನುಮಾನ:

ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಚುನಾವಣೆ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಸಾಧ್ಯವಾಗಲ್ಲ. ಆದರಿಂದ ಮೇ-ಜೂನ್‌ನಲ್ಲಿ ನಡೆಯಬೇಕಿದ್ದ ಜಿಪಂ-ತಾಪಂ ಚುನಾವಣೆಯನ್ನು ಮುಂದೂಡುವ ಅನಿವಾರ್ಯತೆ ಇದೆ. ಹೀಗಾಗಿ, ಮುಂದಿನ 6ತಿಂಗಳ ಅವಧಿ ಗೆ ಮುಂದೂಡುವ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಸದ್ಯ ಚುನಾವಣೆ ನಡೆಯುವುದು ಅನುಮಾನ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.