ಕಾರ್ಮಿಕರಿಗೆ ಧಾನ್ಯ ವಿತರಣೆ
Team Udayavani, May 27, 2020, 6:31 AM IST
ಹಾವೇರಿ: ಲಾಕ್ಡೌನ್ನಿಂದ ತೊಂದರೆಯಲ್ಲಿರುವ ಕಾರ್ಮಿಕರಿಗೆ ಸರ್ಕಾರದಿಂದ ಬಂದ ಆಹಾರಧಾನ್ಯದ ಕಿಟ್ಗಳನ್ನು ಶಾಸಕ ನೆಹರು ಓಲೇಕಾರ ವಿತರಿಸಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಕಿಟ್ ವಿತರಿಸಿ ಮಾತನಾಡಿದ ಅವರು, ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿರುವ ಕಾರ್ಮಿಕರಿಗೆ ವಿತರಣೆ ಮಾಡಲು ಸರ್ಕಾರದಿಂದ ನಾಲ್ಕು ಸಾವಿರ ಕಿಟ್ಗಳು ಬಂದಿದೆ. ಈಗಾಗಲೇ 400 ಕಿಟ್ಗಳನ್ನು ವಿತರಣೆ ಮಾಡಲಾಗಿದ್ದು ಇನ್ನುಳಿದ ಕಿಟ್ಗಳನ್ನು ಇನ್ನೆರಡು ದಿನಗಳಲ್ಲಿ ಅರ್ಹರಿಗೆ ವಿತರಿಸಲಾಗುವುದು ಎಂದರು. ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಕಾರ್ಮಿಕರಿಗೆ, ಮಹಿಳಾ ಟೇಲರ್ ಹಾಗೂ ಇತರ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು. ತಹಶೀಲ್ದಾರ್ ಶಂಕರ್ ಜಿ.ಎಸ್, ಸಗರಸಭೆ ಆಯುಕ್ತ ಬಸವರಾಜ ಜಿದ್ದಿ ಮತ್ತಿತರರು ಇದ್ದರು.