ಮಳೆಗೆ ಶೇಂಗಾ ಬೆಳೆ ನಾಶ-ರೈತನಿಗೆ ಸಂಕಷ್ಟ

ಈ ಬಾರಿಯಾದರೂ ಒಳ್ಳೆಯ ಫಸಲು ತೆಗೆಯುವ ಆಸೆಯಿಂದ ಸಾಲ ಮಾಡಿದ್ದ ಅನ್ನದಾತ

Team Udayavani, Nov 10, 2022, 6:05 PM IST

27

ಬಂಕಾಪುರ: ಈ ಭಾಗದಲ್ಲಿ ಅಕ್ಟೋಬರ್‌ ವರೆಗೆ ಸತತವಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ಕೊಟ್ಟಿಗೇರಿ ನಿವಾಸಿ ಬಸವರಾಜ ಬಂಗಿ ಅವರಿಗೆ ಸೇರಿದ 8 ಎಕರೆ ಹೊಲದಲ್ಲಿ ಬೆಳೆದ ಶೇಂಗಾ ಬೆಳೆ ಸಂಪೂರ್ಣ ನಾಶವಾಗಿದೆ. ಇದಕ್ಕಾಗಿ ಮಾಡಿದ ಸಾಲ ರೈತನ ಬೆನ್ನೇರಿರುವುದರಿಂದ, ಹಿಂಗಾರು ಹಂಗಾಮಿಗೆ ಹೊಲ ಹದಗೊಳಿಸಲು ಹಣವಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಸತತ ಐದಾರು ವರ್ಷಗಳಿಂದ ಸರಿಯಾಗಿ ಬೆಳೆ ಬಾರದೆ, ಕೈಗೆ ಬಂದ ಬೆಳೆಗೆ ಸರಿಯಾದ ಬೆಲೆ ಸಿಗದೇ ರೈತ ಬಸವರಾಜ ಬಂಗಿ ಅವರು, ಈ ಬಾರಿಯಾದರೂ ಒಳ್ಳೆ ಫಸಲು ತೆಗೆಯುವ ಉದ್ದೇಶದಿಂದ ಸಿಕ್ಕ, ಸಿಕ್ಕಲ್ಲಿ ಸಾಲ ಮಾಡಿ, ಆಂಧ್ರಕ್ಕೆ ತೆರಳಿ ಖದರಿ ಲೇಪಾಕ್ಷಿ ತಳಿ ಶೆಂಗಾ ಬಿತ್ತನೆ ಬೀಜವನ್ನು 75 ಸಾವಿರ ಖರ್ಚು ಮಾಡಿ ತಂದು ಬಿತ್ತಿದ್ದರು.

ಗೊಬ್ಬರ, ಔಷಧ, ಆಳಿಗಾಗಿ 50 ಸಾವಿರ ಖರ್ಚು ಮಾಡಿದ್ದರು. 8 ಎಕರೆ ಜಮೀನಿನಲ್ಲಿ ಬೆಳೆದ ಶೇಂಗಾ ಗಿಡ ಕೀಳಿಸಲು 75 ಸಾವಿರ ಖರ್ಚು ಮಾಡಿದ್ದರು. ಕಿತ್ತು ಒಗೆದ ಶೇಂಗಾ ಅಕ್ಟೋಬರ್‌ ಕೊನೆಯ ವಾರದವರೆಗೂ ಸತತ ಸುರಿದ ಮಳೆಯಿಂದಾಗಿ ಮೊಳಕೆಯೊಡೆದು ಸಂಪೂರ್ಣ ನಾಶವಾಗಿದೆ. ಮುಂದಿನ ಬೆಳೆ ಬೆಳೆಯಲು ಹೊಲವನ್ನು ಹಸನು ಮಾಡಲಾಗದೇ ರೈತ ಬಸವರಾಜ ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾನೆ.

ಈಗ ಆತನ ಹೊಲ ಕೆರೆಯಂತಾಗಿದ್ದು, ಕಿತ್ತು ಒಗೆದ ಶೇಂಗಾ ಹೊಲದಲ್ಲಿಯೇ ಕೊಳೆಯುತ್ತಿದೆ. ಈಗಾಗಲೇ ಸಾಲ ಮಾಡಿ ಗಾಯದ ಮೇಲೆ ಬರೆ ಎಳೆದುಕೊಂಡ ರೈತ, ಮುಂದೆ ದುಸ್ಸಾಹಸ ಮಾಡಿ ಪುನಃ ಸಾಲ ಮಾಡಲಾಗದೇ ಕೈಚೆಲ್ಲಿ ಕುಳಿತಿದ್ದಾನೆ. ಇದು ಒಬ್ಬ ಬಸವರಾಜನ ಕತೆಯಲ್ಲ. ರಾಜ್ಯದ ರೈತರ ಸಂಕಷ್ಟದ ಕತೆಯಾಗಿದೆ. ಈಗಾಗಲೇ ಜಿಲ್ಲಾದ್ಯಂತ ನೂರಕ್ಕಿಂತಲೂ ಅಧಿಕ ರೈತರು ಸಾಲ ಬಾಧೆಯಿಂದ ಸಾವನ್ನಪ್ಪಿದ್ದು, ರೈತರ ಸಾವಿನ ಸಂಖ್ಯೆ ಹೆಚ್ಚಾಗುವ ಮೊದಲು, ಭೂತಾಯಿಯನ್ನು ನಂಬಿ ಬದುಕುವ ಸಂಕಷ್ಟದಲ್ಲಿರುವ ರೈತರ ಬಾಳಿಗೆ ಆಸರೆಯಾಗಿ ಸ್ವ ಕ್ಷೇತ್ರದ ಸಿ.ಎಂ.ಬಸವರಾಜ ಬೊಮ್ಮಾಯಿ ಅವರು ನಿಲ್ಲುವರೇ ಎಂದು ರೈತರು ಕಾದು ನೋಡುವಂತಾಗಿದೆ.

ಭೂ ತಾಯಿಯನ್ನೇ ನಂಬಿ ಇಲ್ಲಿಯವರೆಗೂ ವ್ಯವಸಾಯ ಮಾಡಿಕೊಂಡು ಬಂದಿದ್ದೇನೆ. ನಾನು ಈಗ ತುಂಬಾ ಸಂಕಷ್ಟದಲ್ಲಿದ್ದು, ಕೂಡಲೇ ಕಂದಾಯ ಅಧಿಕಾರಿಗಳು ಗಮನ ಹರಿಸಿ, ಸರ್ಕಾರದಿಂದ ಆರ್ಥಿಕ ಸಹಾಯ ಕಲ್ಪಿಸಿ ನನ್ನ ಮುಂದಿನ ಜೀವನಕ್ಕೆ ಆಸರೆಯಾಗಬೇಕು.  –ಬಸವರಾಜ ಬಂಗಿ, ರೈತ

ಬಸವರಾಜ ಬಂಗಿ ಅವರು ಬಾಳ ಕಷ್ಟದಲ್ಲಿದ್ದಾರ್ರಿ.. ಅವರ ಹೋಲದಾಗ ಕಿತ್ತೂಗೆದ ಶೇಂಗಾನ ಹಂಗ ಒಯ್ಯಂದ್ರೂ ಯಾರೂ ಒಯ್ಯವಲ್ರರೀ. ಹೊಲ ಹಸನ ಮಾಡಾಕೂ ಅವರ ಕೈಯ್ನಾಗ ದುಡ್ಡಿಲ್ರಿ. ಅಧಿಕಾರಿಗಳು ಬಂದು ನೋಡಿ ಅವರಿಗೆ ಸಹಾಯ ಮಾಡಬೇಕು.  –ನಾಗರಾಜ ಹಾದಿ, ರೈತ 

ಸದಾಶಿವ ಹಿರೇಮಠ

ಟಾಪ್ ನ್ಯೂಸ್

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!

6-health

ಮಕ್ಕಳಲ್ಲಿ ಅನ್ಯವಸ್ತುಗಳ ಶ್ವಾಸಾಂಗ ಪ್ರವೇಶ: ಹೆತ್ತವರಿಗೆ ಮಾಹಿತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಯಾರಿಗೂ ಹೆದರುವುದಿಲ್ಲ: ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ

ನಾನು ಯಾರಿಗೂ ಹೆದರುವುದಿಲ್ಲ: ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ

ಮನುಷ್ಯನ ಬೆಳವಣಿಗೆಗೆ ಜನಪದವೇ ಜೀವಾಳ: ಸಿಎಂ

ಮನುಷ್ಯನ ಬೆಳವಣಿಗೆಗೆ ಜನಪದವೇ ಜೀವಾಳ: ಸಿಎಂ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಪಕ್ಕಾ: ಸಿ.ಟಿ.ರವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಪಕ್ಕಾ: ಸಿ.ಟಿ.ರವಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ganesh kuru

ಎಲ್ಲೇ ಸ್ಪರ್ಧೆ ಮಾಡಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ : ಶಾಸಕ ಜೆ.ಎನ್.ಗಣೇಶ್

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

TDY-20

ಬಂಧಿಸಿರುವ ಮಹಾರಾಷ್ಟ್ರದ ಹಸುಕರುಗಳ ಬಿಡುಗಡೆ ಮಾಡಲು ಮನವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.