ಮಳೆಗೆ ಶೇಂಗಾ ಬೆಳೆ ನಾಶ-ರೈತನಿಗೆ ಸಂಕಷ್ಟ

ಈ ಬಾರಿಯಾದರೂ ಒಳ್ಳೆಯ ಫಸಲು ತೆಗೆಯುವ ಆಸೆಯಿಂದ ಸಾಲ ಮಾಡಿದ್ದ ಅನ್ನದಾತ

Team Udayavani, Nov 10, 2022, 6:05 PM IST

27

ಬಂಕಾಪುರ: ಈ ಭಾಗದಲ್ಲಿ ಅಕ್ಟೋಬರ್‌ ವರೆಗೆ ಸತತವಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ಕೊಟ್ಟಿಗೇರಿ ನಿವಾಸಿ ಬಸವರಾಜ ಬಂಗಿ ಅವರಿಗೆ ಸೇರಿದ 8 ಎಕರೆ ಹೊಲದಲ್ಲಿ ಬೆಳೆದ ಶೇಂಗಾ ಬೆಳೆ ಸಂಪೂರ್ಣ ನಾಶವಾಗಿದೆ. ಇದಕ್ಕಾಗಿ ಮಾಡಿದ ಸಾಲ ರೈತನ ಬೆನ್ನೇರಿರುವುದರಿಂದ, ಹಿಂಗಾರು ಹಂಗಾಮಿಗೆ ಹೊಲ ಹದಗೊಳಿಸಲು ಹಣವಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಸತತ ಐದಾರು ವರ್ಷಗಳಿಂದ ಸರಿಯಾಗಿ ಬೆಳೆ ಬಾರದೆ, ಕೈಗೆ ಬಂದ ಬೆಳೆಗೆ ಸರಿಯಾದ ಬೆಲೆ ಸಿಗದೇ ರೈತ ಬಸವರಾಜ ಬಂಗಿ ಅವರು, ಈ ಬಾರಿಯಾದರೂ ಒಳ್ಳೆ ಫಸಲು ತೆಗೆಯುವ ಉದ್ದೇಶದಿಂದ ಸಿಕ್ಕ, ಸಿಕ್ಕಲ್ಲಿ ಸಾಲ ಮಾಡಿ, ಆಂಧ್ರಕ್ಕೆ ತೆರಳಿ ಖದರಿ ಲೇಪಾಕ್ಷಿ ತಳಿ ಶೆಂಗಾ ಬಿತ್ತನೆ ಬೀಜವನ್ನು 75 ಸಾವಿರ ಖರ್ಚು ಮಾಡಿ ತಂದು ಬಿತ್ತಿದ್ದರು.

ಗೊಬ್ಬರ, ಔಷಧ, ಆಳಿಗಾಗಿ 50 ಸಾವಿರ ಖರ್ಚು ಮಾಡಿದ್ದರು. 8 ಎಕರೆ ಜಮೀನಿನಲ್ಲಿ ಬೆಳೆದ ಶೇಂಗಾ ಗಿಡ ಕೀಳಿಸಲು 75 ಸಾವಿರ ಖರ್ಚು ಮಾಡಿದ್ದರು. ಕಿತ್ತು ಒಗೆದ ಶೇಂಗಾ ಅಕ್ಟೋಬರ್‌ ಕೊನೆಯ ವಾರದವರೆಗೂ ಸತತ ಸುರಿದ ಮಳೆಯಿಂದಾಗಿ ಮೊಳಕೆಯೊಡೆದು ಸಂಪೂರ್ಣ ನಾಶವಾಗಿದೆ. ಮುಂದಿನ ಬೆಳೆ ಬೆಳೆಯಲು ಹೊಲವನ್ನು ಹಸನು ಮಾಡಲಾಗದೇ ರೈತ ಬಸವರಾಜ ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾನೆ.

ಈಗ ಆತನ ಹೊಲ ಕೆರೆಯಂತಾಗಿದ್ದು, ಕಿತ್ತು ಒಗೆದ ಶೇಂಗಾ ಹೊಲದಲ್ಲಿಯೇ ಕೊಳೆಯುತ್ತಿದೆ. ಈಗಾಗಲೇ ಸಾಲ ಮಾಡಿ ಗಾಯದ ಮೇಲೆ ಬರೆ ಎಳೆದುಕೊಂಡ ರೈತ, ಮುಂದೆ ದುಸ್ಸಾಹಸ ಮಾಡಿ ಪುನಃ ಸಾಲ ಮಾಡಲಾಗದೇ ಕೈಚೆಲ್ಲಿ ಕುಳಿತಿದ್ದಾನೆ. ಇದು ಒಬ್ಬ ಬಸವರಾಜನ ಕತೆಯಲ್ಲ. ರಾಜ್ಯದ ರೈತರ ಸಂಕಷ್ಟದ ಕತೆಯಾಗಿದೆ. ಈಗಾಗಲೇ ಜಿಲ್ಲಾದ್ಯಂತ ನೂರಕ್ಕಿಂತಲೂ ಅಧಿಕ ರೈತರು ಸಾಲ ಬಾಧೆಯಿಂದ ಸಾವನ್ನಪ್ಪಿದ್ದು, ರೈತರ ಸಾವಿನ ಸಂಖ್ಯೆ ಹೆಚ್ಚಾಗುವ ಮೊದಲು, ಭೂತಾಯಿಯನ್ನು ನಂಬಿ ಬದುಕುವ ಸಂಕಷ್ಟದಲ್ಲಿರುವ ರೈತರ ಬಾಳಿಗೆ ಆಸರೆಯಾಗಿ ಸ್ವ ಕ್ಷೇತ್ರದ ಸಿ.ಎಂ.ಬಸವರಾಜ ಬೊಮ್ಮಾಯಿ ಅವರು ನಿಲ್ಲುವರೇ ಎಂದು ರೈತರು ಕಾದು ನೋಡುವಂತಾಗಿದೆ.

ಭೂ ತಾಯಿಯನ್ನೇ ನಂಬಿ ಇಲ್ಲಿಯವರೆಗೂ ವ್ಯವಸಾಯ ಮಾಡಿಕೊಂಡು ಬಂದಿದ್ದೇನೆ. ನಾನು ಈಗ ತುಂಬಾ ಸಂಕಷ್ಟದಲ್ಲಿದ್ದು, ಕೂಡಲೇ ಕಂದಾಯ ಅಧಿಕಾರಿಗಳು ಗಮನ ಹರಿಸಿ, ಸರ್ಕಾರದಿಂದ ಆರ್ಥಿಕ ಸಹಾಯ ಕಲ್ಪಿಸಿ ನನ್ನ ಮುಂದಿನ ಜೀವನಕ್ಕೆ ಆಸರೆಯಾಗಬೇಕು.  –ಬಸವರಾಜ ಬಂಗಿ, ರೈತ

ಬಸವರಾಜ ಬಂಗಿ ಅವರು ಬಾಳ ಕಷ್ಟದಲ್ಲಿದ್ದಾರ್ರಿ.. ಅವರ ಹೋಲದಾಗ ಕಿತ್ತೂಗೆದ ಶೇಂಗಾನ ಹಂಗ ಒಯ್ಯಂದ್ರೂ ಯಾರೂ ಒಯ್ಯವಲ್ರರೀ. ಹೊಲ ಹಸನ ಮಾಡಾಕೂ ಅವರ ಕೈಯ್ನಾಗ ದುಡ್ಡಿಲ್ರಿ. ಅಧಿಕಾರಿಗಳು ಬಂದು ನೋಡಿ ಅವರಿಗೆ ಸಹಾಯ ಮಾಡಬೇಕು.  –ನಾಗರಾಜ ಹಾದಿ, ರೈತ 

ಸದಾಶಿವ ಹಿರೇಮಠ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.