ಬರಗಾಲ ಗುಳೆ ತಡೆಗೆ ಖಾತ್ರಿ ಕೆಲಸ

•ಜಿಪಂ ಸಿಇಒ ಕೆ. ಲೀಲಾವತಿ ಮಾಹಿತಿ •ಜಿಲ್ಲೆಗೆ 42 ಲಕ್ಷ ಮಾನವ ದಿನಗಳ ಸೃಜನೆಯ ಗುರಿ

Team Udayavani, May 17, 2019, 5:06 PM IST

haveri-tdy-3..

ಹಾವೇರಿ: ಹೊಸಕಿತ್ತೂರಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಯನ್ನು ಜಿಪಂ ಸಿಇಓ ಲೀಲಾವತಿ ವೀಕ್ಷಿಸಿದರು.

ಹಾವೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಪ್ರಸಕ್ತ 2019-20ನೇ ಸಾಲಿಗೆ ಜಿಲ್ಲೆಗೆ 42 ಲಕ್ಷ ಮಾನವ ದಿನಗಳ ಸೃಜನೆ ಗುರಿಯನ್ನು ಹೊಂದಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಯಾರೂ ಗುಳೆ ಹೋಗದಂತೆ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಲು ಕುಟುಂಬಗಳಿಗೆ ಸ್ಥಳೀಯವಾಗಿ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಲೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಏಳು ತಾಲೂಕುಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ಎಲ್ಲ ಅನುಷ್ಠಾನ ಅಧಿಕಾರಿಗಳಿಗೆ ಜನರು ಉದ್ಯೋಗದ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ನಿರ್ದೇಶನ ನೀಡಲಾಗಿದೆ. ಈಗಾಗಲೇ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಮೇ 6ವರೆಗೆ 25,872 ಕುಟುಂಬಗಳು ಬೇಡಿಕೆ ಸಲ್ಲಿಸಿದ್ದು, 24,833 ಕುಟುಂಬಗಳಿಗೆ ಉದ್ಯೋಗ ಒದಗಿಸಿ 2.36 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಒಂದರಿಂದ ಎರಡು ಸಮುದಾಯ ಆಧಾರಿತ ಮತ್ತು ಕನಿಷ್ಠ 50 ವೈಯಕ್ತಿಕ ಕಾಮಗಾರಿಗಳನ್ನು ಪ್ರಾರಂಭಿಸಲು ಮತ್ತು ಪ್ರಗತಿಯಲ್ಲಿ ಇಡಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಉದ್ಯೋಗ ಬೇಡಿಕೆಗೆ ಸಂಬಂಧಿಸಿ ಗ್ರಾಮ ಪಂಚಾಯಿತಿಗಳಲ್ಲಿ ನಮೂನೆ-6ನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮ ಪಂಚಾತಿತಿ ಅಭಿವೃದ್ಧಿ ಅಧಿಕಾರಿಗಳು ಅಥವಾ ಆಯಾ ತಾಲೂಕು ಪಂಚಾಯಿತಿ ಅಥವಾ ಜಿಲ್ಲಾ ಪಂಚಾಯಿತಿ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಒದಗಿಸುವುದು, ನೈಸರ್ಗಿಕ ಸಂಪನ್ಮೂಲ ಬಲಪಡಿಸುವುದು, ವಲಸೆ ತಡೆಗಟ್ಟುವುದು, ಆರ್ಥಿಕ ಭದ್ರತೆ ಒದಗಿಸುವುದು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಬರಗಾಲ ನಿಮಿತ್ತ ಜನರಿಗೆ ಉದ್ಯೊಗ ಒದಗಿಸುವ ಸಲುವಾಗಿ 252 ಕೆರೆಗಳನ್ನು ಗುರುತಿಸಲಾಗಿದ್ದು (ಜಲಾಮೃತ ಯೋಜನೆಯಡಿ) ಉದ್ಯೋಗ ಬೇಡಿ ಬಂದಲ್ಲಿ ತಕ್ಷಣ ಉದ್ಯೋಗ ಒದಗಿಸಲಾಗುವುದು. ಜನರಿಗೆ ಕೆರೆ ಹೂಳೆತ್ತುವ, ರಸ್ತೆ ನಿರ್ಮಾಣ, ಶಾಲಾ ಕಾಂಪೌಂಡ್‌, ಶಾಲಾ ಆಟದ ಮೈದಾನ, ಅರಣ್ಯ ಸಸಿ ನೆಡುವ, ಸಸಿ ನಿರ್ವಹಣೆ, ದನದೊಡ್ಡಿ, ರೇಷ್ಮೆ ಬೆಳೆ, ತೋಟಗಾರಿಕೆ, ಮನೆ ನಿರ್ಮಾಣ, ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ನಾಲಾ ದುರಸ್ತಿ, ಗೋಕಟ್ಟೆ ನಿರ್ಮಾಣ ಇನ್ನು ಹಲವಾರು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ (ಆರ್ಥಿಕ ವರ್ಷಕ್ಕೆ ನಿಗದಿಪಡಿಸಿದಂತೆ), ಉದ್ಯೋಗ ಚೀಟಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ಪಡೆಯಬೇಕು. ಉದ್ಯೋಗಕ್ಕಾಗಿ ನಮೂನೆ -6ರಲ್ಲಿ ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಕೆಲಸ ಖಾತರಿ, ಕೂಲಿ ಹಣವನ್ನು ಕೆಲಸ ನಿರ್ವಹಿಸಿದ ನಂತರ 15 ದಿನಗಳೊಳಗಾಗಿ ಬ್ಯಾಂಕ್‌ ಖಾತೆಗೆ ಕಡ್ಡಾಯವಾಗಿ ನೀಡಲಾಗುವುದು. ವೃದ್ಧರು ಮತ್ತು ವಿಕಲಚೇತನರಿಗೆ ಕೆಲಸದ ಪರಿಣಾಮದಲ್ಲಿ ಶೇ. 50 ರಿಯಾಯಿತಿ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಉದ್ಯೋಗ ಚೀಟಿ ನೀಡಲಾಗುವುದು.

ಗ್ರಾಮ ಪಂಚಾಯಿತಿಗಳಿಂದ ವೈಯಕ್ತಿಕ ಕಾಮಗಾರಿಗಳಾದ ಕುರಿ, ದನದ ದೊಡ್ಡಿ (ಎಸ್‌ಸಿ ಮತ್ತು ಎಸ್‌ಟಿ ಕುಟುಂಬಗಳಿಗೆ ಮತ್ತು ಪ್ಯಾಕೇಜ್‌ ಮಾದರಿಯಲ್ಲಿ ಅನುಷ್ಠಾನಿಸಿದರೆ ಸಾಮಾನ್ಯ ಕುಟುಂಬಗಳಿಗೂ), ಭೂ-ಅಭಿವೃದ್ಧಿ ಮತ್ತು ಒಡ್ಡು, ಬದು ನಿರ್ಮಾಣ, ಇಂಗು ಗುಂಡಿ (ಕೊಳವೆ ಬಾವಿ ಮರುಪೂರಣ ಘಟಕ), ಹಂದಿ ದೊಡ್ಡಿ, ಕೊಳವೆ ಬಾವಿ ಮರುಪೂರಣ ಘಟಕ ಹಾಗೂ ಸಮುದಾಯ ಕಾಮಗಾರಿಗಳಾದ ಕೆರೆ ಅಭಿವೃದ್ಧಿ ಕಾಮಗಾರಿ (ಕೆರೆ ಹೂಳೆತ್ತುವುದು ಮತ್ತು ಪಿಚ್ಚಿಂಗ್‌), ಆಟದ ಮೈದಾನ ಅಭಿವೃದ್ಧಿ, ಸ್ಮಶಾನ ಅಭಿವೃದ್ಧಿ, ಗ್ರಾಮೀಣ ಗೋದಾಮು, ಮಲ್ಟಿ ಆರ್ಚ್‌ ಚೆಕ್‌ ಡ್ಯಾಂ, ಗ್ರಾಮೀಣ ಉದ್ಯಾನವನ ನಿರ್ಮಾಣ, ಅಂಗನವಾಡಿ ಕೇಂದ್ರ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ), ನಮ್ಮ ಹೊಲ ನಮ್ಮ ದಾರಿ (ಮಣ್ಣು ರಸ್ತೆ 200 ಮೀ.ಗೆ), ರೈತರ ಕಣ, ಸಂತೆ ಕಟ್ಟೆ, ಶಾಲಾ ಶೌಚಾಲಯ (ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ), ಶಾಲಾ ಕಾಂಪೌಂಡ, ಸಂಜೀವಿನಿ ಶೆಡ್‌, ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ, ಗೋಬರ್‌ ಗ್ಯಾಸ್‌ ಗುಂಡಿ ತೆಗೆಯುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ, ವಾಲ್ ಪೂಲ್ ಮಾದರಿ, ರಿರ್ಚಾ ವೆಲ್, ಇಂಜಕ್ಷನ್‌ ರೀಚಾರ್ಜ್‌ ವೆಲ್, ಕಲ್ಲು ತಡೆ, ಕುಡಿಯುವ ನೀರಿನ ಬೋರವೆಲ್ ರಿಚಾರ್ಜ್‌ ಪಿಟ್, ಸಮುದಾಯ ದನದ ದೊಡ್ಡಿ ನಿರ್ಮಾಣ ಮಾಡಲಾಗುವುದು ಎಂದರು.

ಈ ಯೋಜನೆಯಡಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ವತಿಯಿಂದ ಹಂದಿ ಶೆಡ್ಡು, ಅಜೋಲ ತೊಟ್ಟಿ, ಅರಣ್ಯ ಇಲಾಖೆ ವತಿಯಿಂದ ಸ್ವಂತ ಜಮೀನು ಮತ್ತು ಬದುಗಳಲ್ಲಿ ಸಿಲ್ವರ್‌, ಹೆಬ್ಬೇವು, ಹಲಸು, ಸಾಗವಾನಿ, ತೇಗ, ಮುಂತಾದ ಗಿಡಗಳನ್ನು, ಮೀನುಗಾರಿಕೆ ಇಲಾಖೆಯಿಂದ ಮೀನು ಕೃಷಿ ಹೊಂಡ, ರೇಷ್ಮೆ ಇಲಾಖೆಯಿಂದ ಹಿಪ್ಪು ನೆರಳೆ ನರ್ಸರಿ, ಹಿಪ್ಪು ನೆರಳೆ ನಾಟಿ ಜೋಡಿಸಾಲು ಪದ್ಧತಿ, ಹಿಪ್ಪು ನೆರಳೆ ಮರಗಡ್ಡಿ ವಿಧಾನ, ಕೃಷಿ ಇಲಾಖೆಯಿಂದ ಎರೆಹುಳು ತೊಟ್ಟಿ, ಭೂ ಅಭಿವೃದ್ಧಿ, ಕೃಷಿ ಹೊಂಡ ನಿರ್ಮಾಣಕ್ಕೆ ಅವಕಾಶವಿದೆ ಎಂದು ಜಿಪಂ ಸಿಇಓ ಲೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.