ಗುಲಾಬಿ ಆಂದೋಲನಕ್ಕೆ ಚಾಲನೆ
Team Udayavani, Dec 14, 2020, 6:29 PM IST
ಶಿಗ್ಗಾವಿ: ತಾಲೂಕು ಆಡಳಿತ, ತಾಪಂ,ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಪಟ್ಟಣದ ಪಾನಶಾಪ್ ಗಳಿಗೆ ತಹಶೀಲ್ದಾರ್ ಪ್ರಕಾಶ ಕುದರಿ ಗುಲಾಬಿ ಹೂವು ನೀಡುವ ಮೂಲಕ ಗುಲಾಬಿ ಆಂದೋಲನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ತಂಬಾಕು ಹಾಗೂ ತಂಬಾಕು ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದಮೇಲೆ ಹಲವಾರು ರೀತಿಯದುಷ್ಪರಿಣಾಮ ಬೀರುತ್ತವೆ. ಅಲ್ಲದೇ, ಯುವ ಜನಾಂಗಕ್ಕೆ ತಂಬಾಕಿನಿಂದಾಗುವದುಷ್ಪರಿಣಾಮಗಳ ಬಗ್ಗೆ ಜಾಗೃತಿಮೂಡಿಸಬೇಕು. ಜೊತೆಗೆ ಯುವ ಜನಾಂಗ ಈ ದುಶ್ಚಟಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಹನುಮಂತಪ್ಪ ಕುಡಚಿ ಮಾತನಾಡಿ, ಸಿಗರೆಟ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದಲ್ಲದೇ,ಇನ್ನೊಬ್ಬರ ಆರೋಗ್ಯ ಕೂಡಾಹಾಳಾಗುತ್ತದೆ. ಇದರಿಂದಾಗಿನಾವೆಲ್ಲರೂ ಪರೋಕ್ಷವಾಗಿ ತಂಬಾಕು ಸೇವನೆಗೆ ಒಳಗಾಗುತ್ತಿದ್ದೇವೆ. ಪ್ರಚಲಿತ ದಿನಗಳಲ್ಲಿ ಗರ್ಭಿಣಿಯರು ತಂಬಾಕು ಸೇವನೆಯಿಂದ ಮಹಿಳೆಯರಲ್ಲಿ ನಿರ್ಜೀವ ಜನನ, ಅವಧಿ ಪೂರ್ಣ ಜನನ ಹಾಗೂ ಕಡಿಮೆ ತೂಕ ಇರುವ ಮಕ್ಕಳು ಮತ್ತು ಜನನವಾದರು ಅಂಗವಿಕಲರಾಗಿ ಹುಟ್ಟುವ ಮಕ್ಕಳ ಪ್ರಮಾಣ ಜಾಸ್ತಿಯಾಗಿರುತ್ತದೆ ಎಂದರು.
ತಂಬಾಕಿನ ಕಾನೂನು ಅರಿವು ಕೋಟ್ಪಾ 2003ರ ಬಗ್ಗೆ ಸೆಕ್ಷನ್ 4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿಧೂಮಪಾನ ನಿಷೇಧ ಮಾಡಲಾಗಿದೆ. ಈ ಕಾನೂನು ಉಲ್ಲಂಘಿಸಿದ ವ್ಯಕ್ತಿಗೆ200ರೂ. ದಂಢ ವಿ ಧಿಸಲಾಗುವುದು.ಸೆಕ್ಷನ್ 5ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇಧಿಸಲಾಗಿದೆ. ಸೆಕ್ಷನ್ 7ರ ಪ್ರಕಾರಸಿಗರೆಟ ಮತ್ತು ಇತರ ತಂಬಾಕುಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೇ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧಕ್ಕೆ ತುತ್ತಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಬಸವರಾಜ ಹಳಬಣ್ಣವರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಯ್ಯ ಚಿಕ್ಕಮಠ, ಸಿಡಿಪಿಒ ನೀತಾ ವಾಡಕರ,ಆಹಾರ ಸುರಕ್ಷತಾ ಅಧಿ ಕಾರಿ ಜಿ.ವ್ಹಿ.ಕುಂದಗೋಳ, ಪುರಸಭೆ ಆರೋಗ್ಯನಿರೀಕ್ಷಕ ಕಮದೋಡ, ಹಿರಿಯ ಆರೋಗ್ಯ ಸಹಾಯಕ ಶ್ರೀಕಾಂತ ಸರ್ಜಾಪೂರ, ಪ್ರಭಾರಿ ಎಲ್ಎಚ್ವ್ಹಿ ಸರೋಜಾ ಹರಿಜನ, ಮಲ್ಲಿಕಾರ್ಜುನ ಬಿ., ವ್ಹಿ.ಎಲ್.ಶಿರೂರ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ