ಗುಂಡಗಟ್ಟಿ: ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
Team Udayavani, Oct 13, 2019, 12:46 PM IST
ಹಿರೇಕೆರೂರ: ರಟ್ಟಿಹಳ್ಳಿ ತಾಲೂಕಿನ ಗುಂಡಗಟ್ಟಿ ಗ್ರಾಮದ ಮರಡಿ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯೆ ಸುಮಿತ್ರಾ ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಜಿಪಂ ಸದಸ್ಯೆ ಸುಮಿತ್ರಾ ಪಾಟೀಲ, 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅನುದಾನದಲ್ಲಿ 4 ಲಕ್ಷ ರೂ. ವೆಚ್ಚದಲ್ಲಿ ಮರಡಿ ಆಂಜನೇಯ ಸಮುದಾಯ ಭವನ ನಿರ್ಮಿಸಲಾಗುತ್ತಿದೆ.
ತಾವರಗಿ ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿ ಶೌಚಾಲಯ ನಿರ್ಮಾಣಕ್ಕೆ 2 ಲಕ್ಷ ರೂ.,ಹಿರೇಯಡಚಿ ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿ ಶೌಚಾಲಯ ನಿರ್ಮಾಣಕ್ಕೆ 2 ಲಕ್ಷ ರೂ., ಹಳೇವೀರಾಪುರ ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿ ಶೌಚಾಲಯ ನಿರ್ಮಾಣಕ್ಕೆ 2 ಲಕ್ಷ ರೂ. ಹಾಗೂ ಹಳೇ ನಿಡನೇಗಿಲು ಗ್ರಾಮದ ಪ್ರಾಥಮಿಕ ಶಾಲೆ ಆವರಣದಲ್ಲಿ ಶೌಚಾಲಯ ನಿರ್ಮಾಣಕ್ಕೆ 1.46 ಲಕ್ಷ ರೂ. ನೀಡುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮುಖಂಡರಾದ ಎಸ್.ಎಸ್. ಪಾಟೀಲ, ಈರಣ್ಣ ಬಣಕಾರ, ದತ್ತಾತ್ರೇಯ ರಾಯ್ಕರ್, ಎಂ.ಎಚ್. ಪುಟ್ಟಪ್ಪಗೌಡ್ರ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ