ʼಬಸವಣ್ಣನ ಕಲ್ಯಾಣ ನಗರಕ್ಕೆ ಬಂದಷ್ಟು ಖುಷಿಯಾಗಿದೆ’

ಪುರ ಪ್ರವೇಶ-ಗುರುವಂದನೆ ಸಮಾರಂಭದಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಮಹಾಸ್ವಾಮೀಜಿ ನುಡಿ

Team Udayavani, Aug 21, 2022, 3:15 PM IST

17

ಬಂಕಾಪುರ: ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು, ಶಿಸ್ತು ಬದ್ಧವಾಗಿ ಹಳೆ ಬೇರು ಹೊಸ ಚಿಗುರಿನಂತೆ ಪರಿಶುದ್ಧವಾದ ಎಳನೀರು ನೀಡಿ, ಬೈಕ್‌ ರ್ಯಾಲಿ ಮೂಲಕ ನಮ್ಮನ್ನು ಪುರಪ್ರವೇಶ ಮಾಡಿಕೊಂಡಿರುವ ರೀತಿ ಎಲ್ಲಿಲ್ಲದ ಸಂತಸ ತಂದಿದೆ. ಅಣ್ಣ ಬಸವಣ್ಣನವರ ಕಲ್ಯಾಣ ನಗರಕ್ಕೆ ಬಂದಷ್ಟು ಖುಷಿಯಾಗಿದೆ ಎಂದು ಶ್ರೀ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ಫಕೀರೇಶ್ವರ ಮಠದಲ್ಲಿ ನಡೆದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪುರ ಪ್ರವೇಶದ ನಂತರ ನಡೆದ ಗುರುವಂದನೆ, ಸತ್ಸಂಗ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಮನುಷ್ಯನಿಗೆ ಆಸ್ತಿ, ಅಂತಸ್ತು, ಐಶ್ವರ್ಯ, ಅಧಿಕಾರ ಮುಖ್ಯವಲ್ಲ. ನಯ, ವಿನಯ, ಸಂಸ್ಕೃತಿ, ಸಂಸ್ಕಾರಗಳು ಮುಖ್ಯವಾಗಿವೆ. ಶ್ರೀ ಫಕೀರೇಶ್ವರ ಮಠ ಭಾವೈಕ್ಯತೆಯ ಮಠವಾಗಿದ್ದು, ಹಿಂದೂ, ಮುಸಲ್ಮಾನ ಬಾಂಧವರ ಸಾಮರಸ್ಯದ ಸಂಕೇತವಾಗಿದೆ. ಭಕ್ತರ ಆಶೋತ್ತರಗಳನ್ನು ಈಡೇರಿಸುವ ಶಕ್ತಿ ಶಿರಹಟ್ಟಿ ಫಕೀರೇಶ್ವರ ಕರ್ತೃ ಗದ್ದುಗೆಗೆ ಇದೆ. ಹಿಂದೂಗಳಿಗೆ ಶಿವನಾಗಿ, ಮುಸಲ್ಮಾನರಿಗೆ ಅಲ್ಲಾನಾಗಿ ಈ ಕಲಿಯುಗದಲ್ಲೂ ಪ್ರತ್ಯಕ್ಷ ದೈವವಾಗಿ ಅನೇಕ ಪವಾಡಗಳನ್ನು ಮಾಡುವ ಮೂಲಕ ಭಕ್ತರ ಕಷ್ಟಕಾರ್ಪಣ್ಯಗಳನ್ನು ದೂರ ಮಾಡುವ ಶಕ್ತಿ ಪಡೆದವರಾಗಿದ್ದಾರೆ. ಅಂತಹ ಪವಿತ್ರ ಭಾವೈಕ್ಯತೆ ಸಾರುವ ಮಠಕ್ಕೆ ಶ್ರೀ ಜ| ಫಕೀರ ಸಿದ್ಧರಾಮ ಸ್ವಾಮೀಜಿಗಳು ನನ್ನನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿರುವುದು ನನಗೆ ಜವಾಬ್ದಾರಿ ಹೆಚ್ಚಿಸಿದಂತಾಗಿದೆ ಎಂದರು.

ಜಗದ್ಗುರುಗಳು ನನ್ನ ಮೇಲಿರಿಸಿದ ವಿಶ್ವಾಸಕ್ಕೆ, ಅವರ ಮನಸ್ಸಿಗೆ ನೋವಾಗದಂತೆ, ಭಕ್ತರ ನಿರೀಕ್ಷೆ ಹುಸಿಯಾಗದಂತೆ ನನ್ನನ್ನು ನಡೆಸಿಕೋ ಎಂದು ಆ ಫಕೀರ ಕತೃì ಜಗದ್ಗುರುಗಳವರಲ್ಲಿ ಬೇಡಿಕೊಳ್ಳುವುದಾಗಿ ಹೇಳಿದರು.

ಸವಣೂರ ಕಲ್ಮಠದ ಶ್ರೀ ಮಹಾಂತಸ್ವಾಮಿಗಳು ಮಾತನಾಡಿ, ಶ್ರೀ ಫಕೀರೇಶ್ವರ ಮಠದ ಪರಂಪರೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದ್ವೇಷ ಬಿಡು ಪ್ರೀತಿ ಮಾಡು ಎಂಬ ಅವರ ವೇದವಾಕ್ಯ ಮಾನವ ಸಂಕುಲನದ ಹಿರಿಮೆ ಹೆಚ್ಚಿಸಿದಂತಾಗಿದೆ. ಶ್ರೀ ಫಕೀರ ಸಿದ್ಧರಾಮ ಜಗದ್ಗುರುಗಳವರು ಉತ್ತರಾಧಿಕಾರಿಗಳನ್ನಾಗಿ ಶ್ರೀ ದಿಂಗಾಲೇಶ್ವರ ಸ್ವಾಮಿಗಳವರನ್ನು ಆಯ್ಕೆ ಮಾಡಿಕೊಂಡಿರುವುದು ಶ್ರೀ ಮಠದ ಹಿರಿಮೆ ಹೆಚ್ಚಿಸಿದಂತಾಗಿದೆ ಎಂದು ಹೇಳಿದರು.

ಶ್ರೀ ಜ|ಫಕೀರೇಶ್ವರ ವಿಶ್ವಸ್ಥ ಸಮಿತಿ ಅಧ್ಯಕ್ಷ ಮೇಘರಾಜ ಕೂಲಿ ಮಾತನಾಡಿದರು. ಅರಳೆಲೆ ಮಠದ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ ಅಧ್ಯಕತೆ ವಹಿಸಿದ್ದರು.

ಸದಾಶಿವಪೇಟೆ ಶ್ರೀ ಗದಿಗೇಶ್ವರ ಸ್ವಾಮೀಜಿ, ಶ್ರೀ ಶಿವದೇವ ಶರಣರು, ಕೆಂಡದಮಠದ ಶ್ರೀ ಸಿದ್ದಯ್ಯಸ್ವಾಮೀಜಿ, ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ಸೇವಾರ್ಥಿಗಳಾದ ದೇವರಾಜ ರಾಮಣ್ಣವರ, ಈರಣ್ಣ ಕೂಲಿ, ವಿರೂಪಾಕ್ಷಿ ಕೆರಿಗೌಡ್ರ, ಬಸವರಾಜ ಕೂಲಿ, ಸಿದ್ದಪ್ಪ ಬಾರಿಗಿಡದ, ಫಕ್ಕೀರೇಶ ಬೆಂಚಳ್ಳಿ, ಫಕ್ಕೀರಯ್ಯ ಕಟಗಿಮಠ, ಶಿವಣ್ಣ ಸೊಲಬಣ್ಣವರ, ವಿನಾಯಕ ಕೂಲಿ, ಜಯಾ ವನಹಳ್ಳಿ, ಫಕ್ಕೀರೇಶ ಹಿರೇಮಠ, ಮಣಿಕಂಠ ಕಟಗಿಮಠ, ಈರಣ್ಣ ಕರಿಮಾಳಮಠ, ಗಂಗಾಧರ ಮಾ.ಪ.ಶೆಟ್ಟರ, ಮುಖೇಶ ಜೈನ್‌ ಇತರರಿದ್ದರು.

ಶ್ರೀ ಜ|ಫಕೀರ ಸಿದ್ಧರಾಮ ಸ್ವಾಮೀಜಿಗೆ 2023ಕ್ಕೆ 75 ವಸಂತಗಳು ತುಂಬಲಿವೆ. ಅವರ ಅಮೃತ ಮಹೋತ್ಸವದ ಸವಿನೆನಪಿಗಾಗಿ ಸುವರ್ಣ ತುಲಾಭಾರ ಸೇವೆ ಮಾಡಲು ತೀರ್ಮಾನಿಸಲಾಗಿದೆ. ಅದರಿಂದ ಬರುವ ಆದಾಯವನ್ನು ಬಡ ಮಕ್ಕಳ ಉಚಿತ ಶಿಕ್ಷಣಕ್ಕೆ ಬಳಸಲಾಗುವುದು. –ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.