ನಾಮಪತ್ರ ವಾಪಸಾತಿಗೆ ಕೈ-ಕಮಲ ಕಸರತ್ತು
|ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ|ಗೆಲುವಿಗಾಗಿ ಪಕ್ಷಗಳ ಹರಸಾಹಸ
Team Udayavani, Oct 13, 2021, 1:16 PM IST
ಹಾವೇರಿ: ಜಿಲ್ಲೆಯ ಹಾನಗಲ್ಲ ಕ್ಷೇತ್ರದ ಉಪಚುನಾವಣೆಯ ನಾಮಪತ್ರ ಸಲ್ಲಿಕೆ, ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಬುಧವಾರ ಕೊನೆಯ ದಿನವಾಗಿದ್ದರಿಂದ ತಮ್ಮ ಗೆಲುವಿಗೆ ಮಗ್ಗಲು ಮುಳ್ಳಾಗುವ ಪಕ್ಷೇತರ ಅಭ್ಯರ್ಥಿಗಳ ಮನವೊಲಿಸಿ ಕಣದಿಂದ ಹಿಂತೆಗೆಸಲು ಪ್ರಮುಖ ರಾಜಕೀಯ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ.
ಹಾನಗಲ್ಲ ಉಪಚುನಾವಣೆಯಲ್ಲಿ ಶತಾಯ-ಗತಾಯ ಗೆಲುವು ಸಾಧಿಸುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮದೇ ಯತ್ನ, ಶ್ರಮಕ್ಕೆ ಮುಂದಾಗುತ್ತಿವೆ. ನಾಮಪತ್ರ ಹಿಂಪಡೆಯುವುದು ಇದರ ಒಂದು ಭಾಗವಾಗಿದೆ. ಆ ಕಾರಣಕ್ಕಾಗಿಯೇ ನಾಮಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಬಾಕಿ ಇದ್ದು, ನಾಮಪತ್ರ ಹಿಂಪಡೆಯುವ ನಿಟ್ಟಿನಲ್ಲಿ ಪಕ್ಷಗಳಿಂದ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿಗಳ ಮನವೊಲಿಕೆ ಯತ್ನ ನಡೆಸಿದರೆ, ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ಸಿನಿಂದ ವಿವಿಧ ಆಮಿಷ ಯತ್ನಗಳು ನಡೆದಿವೆ ಎಂದೇ ಹೇಳಲಾಗುತ್ತಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಪಕ್ಷೇತರರ ಸವಾಲು ಎದುರಾಗಿದೆ. ಇದನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಲವು ರೀತಿಯ ಯತ್ನಗಳಿಗೆ ಮುಂದಾಗಿದ್ದಾರೆ. ಪಕ್ಷೇತರರ ಮನವೊಲಿಸುವ, ಒತ್ತಡ ತರುವ ಕಾರ್ಯ ನಡೆಯುತ್ತಿದೆ. ಆದರೆ, ಪಕ್ಷೇತರರಾಗಿ ಕಣಕ್ಕಿಳಿದಿರುವವರು ಮಾತ್ರ ನಾನಾ ಬೇಡಿಕೆಗಳನ್ನಿಟ್ಟು ಅಭ್ಯರ್ಥಿಗಳಿಗೆ ಚಳ್ಳೆ ಹಣ್ಣು ತಿನ್ನಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮನವೊಲಿಕೆ ಕಸರತ್ತು ಜೋರು: ಉಪಚುನಾವಣೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರತಿಷ್ಠೆಯಾಗಿ ಪರಿಗಣಿಸಿದ್ದರಿಂದ ಶತಾಯ-ಗತಾಯ ಗೆಲ್ಲಲ್ಲು ರಣತಂತ್ರ ಹೆಣೆಯುತ್ತಿವೆ. ಬಿಜೆಪಿಯಿಂದ ಸಿಎಂ ಹಾಗೂ ಮಾಜಿ ಸಿಎಂ ಸೇರಿ ಎಲ್ಲರೂ ಹಾನಗಲ್ಲ ಕ್ಷೇತ್ರವನ್ನು ಮರಳಿ ಪಡೆಯಲು ಎಲ್ಲ ರೀತಿಯ ತಂತ್ರಗಳನ್ನು ಹೆಣೆಯಲಿದ್ದಾರೆ. ಅದರಂತೆ ಕಾಂಗ್ರೆಸ್ನಿಂದ ಮಾಜಿ ಸಿಎಂ, ಕೆಪಿಸಿಸಿ ಅಧ್ಯಕ್ಷರು ಸೇರಿ ಘಟಾನುಘಟಿಗಳೆಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ತಂತ್ರ ರೂಪಿಸಿದ್ದಾರೆ. ಹೀಗಾಗಿ, ಚುನಾವಣೆ ಗೆಲ್ಲಲು ತಮ್ಮ ಬತ್ತಳಿಕೆಯಲ್ಲಿರುವ ಎಲ್ಲ ಅಸ್ತ್ರಗಳನ್ನು ಇಲ್ಲಿ ಪ್ರಯೋಗಿಸಲು ಸಜ್ಜಾಗಿದ್ದಾರೆ. ಇದರ ಮೊದಲ ಪ್ರಯತ್ನವಾಗಿ ತಮ್ಮ ಅಭ್ಯರ್ಥಿಗಳಿಗೆ ಮಗ್ಗಲ ಮುಳ್ಳಾಗುವಂತಹವರನ್ನು ಬಂಡಾಯವಾಗಿ ಕಣಕ್ಕಿಳಿದಿರುವವರನ್ನು ಕಣದಿಂದ ಹಿಂದೆ ಸರಿಸುವ ಕಸರತ್ತು ಜೋರಾಗಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ