ಶುಭ ಕಾರ್ಯಗಳಿಗೆ ಕವಿದ “ಕೊರೊನಾ ಕಾರ್ಮೋಡ’


Team Udayavani, May 3, 2021, 8:37 PM IST

3-13

„ವೀರೇಶ ಮಡ್ಲೂರು

ಹಾವೇರಿ: ಕೊರೊನಾ ಎರಡನೇ ಅಲೆ ಗೃಹಪ್ರವೇಶ, ಮದುವೆ ಮುಂತಾದ ಶುಭ ಕಾರ್ಯಗಳ ಮೇಲೆ ಕಾರ್ಮೋಡ ಕವಿಯುವಂತೆ ಮಾಡಿದೆ. ಈ ವರ್ಷವಾದರೂ ಮದುವೆಗಳನ್ನು ಅದ್ಧೂರಿಯಾಗಿ ಮಾಡಬಹುದೆಂದುಕೊಂಡು ತಿಂಗಳುಗಟ್ಟಲೇ ಮೊದಲೇ ತಯಾರಿ ಮಾಡಿಕೊಂಡವರಿಗೆ ಕೊರೊನಾ ಕರ್ಫ್ಯೂ ನಿರಾಸೆ ಮೂಡಿಸಿದೆ.

ಕೊರೊನಾ ಕಾಟದಿಂದ ಕಳೆದ ವರ್ಷ ಮದುವೆ ಮುಂದೂಡಿದ್ದವರಿಗೆ ಈ ವರ್ಷವೂ ಭೀತಿ ತಪ್ಪದಂತಾಗಿದೆ. ಮದುವೆ, ಗೃಹಪ್ರವೇಶ ಮುಂತಾದ ಮಂಗಳ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಂಡವರು ಏನು ಮಾಡಬೇಕೆಂದು ತೋಚದೇ ಗೊಂದಲದಲ್ಲಿ ಸಿಲುಕಿದ್ದಾರೆ. ಈ ಸೀಸನ್‌ ನಂಬಿ ಜೀವನ ಕಟ್ಟಿಕೊಂಡವರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.

ತಪ್ಪದ ಕೊರೊನಾ ಕಾಟ: ಪ್ರಸಕ್ತ ಮೇ ತಿಂಗಳಲ್ಲಿ ಮದುವೆ ಸಮಾರಂಭಗಳು ಹೆಚ್ಚು. ಈ ಅವ ಧಿಯಲ್ಲಿಯೇ ಹೆಚ್ಚಿನ ಮುಹೂರ್ತ ಇರುತ್ತವೆ. ಮಕ್ಕಳಿಗೆ ಬೇಸಿಗೆ ರಜೆ ಎಂಬ ಕಾರಣದಿಂದ ಅನೇಕ ಕುಟುಂಬಗಳು ಕಾರ್ಯಕ್ರಮ ಆಯೋಜನೆ ಮಾಡಿಕೊಂಡಿರುತ್ತವೆ. ಈ ನಿಟ್ಟಿನಲ್ಲಿ ಮೇ ತಿಂಗಳಲ್ಲಿ ನಿಗದಿಯಾಗಿದ್ದ ನೂರಾರು ಮದುವೆ ಸಮಾರಂಭಗಳಿಗೆ ಕೊರೊನಾ ಕಾಟ ಎದುರಾಗಿದೆ. ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿ ನಿಬಂಧನೆ ವಿಧಿಸಿದೆ. ಇದರಿಂದ ಈಗಾಗಲೇ ಮದುವೆ ಇನ್ನಿತರೆ ಸಮಾರಂಭ ನಿಗದಿ ಮಾಡಿಕೊಂಡವರು ಗೊಂದಲದಲ್ಲಿ ಮುಳುಗಿದ್ದಾರೆ. ಕಳೆದ ಡಿಸೆಂಬರ್‌ ಬಳಿಕ ಕಲ್ಯಾಣ ಮಂಟಪಗಳಲ್ಲಿ ಮದುವೆ ಸಮಾರಂಭಗಳು ಅದ್ಧೂರಿಯಾಗಿ ನಡೆದಿದ್ದವು. ಎಲ್ಲವೂ ಸರಿಯಾಯಿತೆಂದುಕೊಂಡು ಶುಭ ಸಮಾರಂಭಗಳನ್ನು ನಿಗದಿ ಮಾಡಿದ್ದರು. ಈಗಾಗಲೇ ಅನೇಕರು ಮೇ ತಿಂಗಳಲ್ಲಿ ವಿವಾಹ ನಿಗದಿ ಮಾಡಿಕೊಂಡು ಮುಂಗಡ ಹಣ ಕೊಟ್ಟು ಕಲ್ಯಾಣ ಮಂಟಪಗಳನ್ನು ಬುಕ್ಕಿಂಗ್‌ ಮಾಡಿಕೊಂಡಿದ್ದರು. ಸದ್ಯ ಕೊರೊನಾ ಹೆಚ್ಚುತ್ತಿರುವುದರಿಂದ ಕೆಲವರು ಮುಂದಿನ ದಿನಗಳಲ್ಲಿ ಇಟ್ಟುಕೊಂಡರಾಯಿತೆಂದು ಶುಭ ಕಾರ್ಯಗಳನ್ನು ಮುಂದಕ್ಕೆ ಹಾಕುತ್ತಿದ್ದಾರೆ.

ಗೊಂದಲದಲ್ಲಿ ಆಯೋಜಕರು: ಮೇ ತಿಂಗಳಲ್ಲಿ ಮದುವೆ ನಿಗದಿ ಮಾಡಿಕೊಂಡವರು ಗೊಂದಲದಲ್ಲಿ ಮುಳುಗುವಂತಾಗಿದೆ. ಸರ್ಕಾರ ನಿಗದಿಪಡಿಸಿದಷ್ಟೇ ಜನರನ್ನು ಹೇಗೆ ಆಮಂತ್ರಿಸಬೇಕು? ಅದಕ್ಕಿಂತ ಹೆಚ್ಚು ಜನ ಬಂದರೆ ಸಮಸ್ಯೆಯಾದೀತೇ? ಎಷ್ಟು ಜನರಿಗೆ ಅಡುಗೆ ಸಿದ್ಧಪಡಿಸಬೇಕು? ಎಂಬಿತ್ಯಾದಿ ಗೊಂದಲ ಶುರುವಾಗಿದೆ. ಮುಂದಿನ ದಿನಗಳಲ್ಲಿ ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ಹೋಗಲು ನಿರ್ಬಂಧ ವಿಧಿ ಸಿದರೆ ಏನು ಮಾಡೋದು ಎಂಬ ಚಿಂತೆ ಕೆಲವರನ್ನು ಕಾಡುತ್ತಿದೆ. ಮದುವೆ ವೇಳೆ ಕೊರೊನಾ ಸೋಂಕು ತಗಲಿ ಹೆಚ್ಚು ಕಮ್ಮಿಯಾದರೆ ಏನು ಮಾಡೋದು ಇತ್ಯಾದಿ ತಳಮಳದಲ್ಲೇ ಕಾಲ ಕಳೆಯುವಂತಾಗಿದೆ.

ಮದುವೆಗೆ 50 ಜನ: ಸರ್ಕಾರ ಹೊರಡಿಸಿರುವ ಕೋವಿಡ್‌ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್‌ ಧರಿಸುವುದು ಕಡ್ಡಾಯವಾಗಿದೆ. ಮದುವೆ ಸಮಾರಂಭದಲ್ಲಿ ಗರಿಷ್ಠ 50 ಜನರು ಮೀರಬಾರದು. ಶವಸಂಸ್ಕಾರದ ಸಂದರ್ಭದಲ್ಲಿ ಗರಿಷ್ಠ 5 ಜನರಿಗೆ ಭಾಗವಹಿಸಲು ಅನುಮತಿ ನೀಡಿದ್ದು, ಧಾರ್ಮಿಕ ಆಚರಣೆ-ಸಮಾರಂಭಗಳನ್ನು ನಿಷೇಧಿ ಸಿ ಆದೇಶ ಹೊರಡಿಸಲಾಗಿದೆ. ಬೇಸಿಗೆಯಲ್ಲಿ ಹೆಚ್ಚು ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳು, ಗೃಹ ಪ್ರವೇಶ ಮುಂತಾದ ಸಮಾರಂಭಗಳು ನಡೆಯುವುದರಿಂದ ವ್ಯಾಪಾರು- ವಹಿವಾಟುಗಳು ಈ ಅವ ಧಿಯಲ್ಲಿ ಹೆಚ್ಚಿರುತ್ತಿದ್ದವು. ಆದರೆ ಕೊರೊನಾ ಎರಡನೇ ಅಲೆ ಮತ್ತೆ ಮದುವೆ ಸೀಸನ್‌ನ ವಹಿವಾಟು ಕುಸಿಯುವಂತೆ ಮಾಡಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.