ಹಾವೇರಿ: 86ನೇ ನುಡಿ ಜಾತ್ರೆಯಲ್ಲಿ 86 ಕೃತಿಗಳ ಬಿಡುಗಡೆ


Team Udayavani, Jan 4, 2023, 6:45 AM IST

ಹಾವೇರಿ: 86ನೇ ನುಡಿ ಜಾತ್ರೆಯಲ್ಲಿ 86 ಕೃತಿಗಳ ಬಿಡುಗಡೆ

ಹಾವೇರಿ: ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜ. 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದ್ದು, ಈ ನುಡಿ ಜಾತ್ರೆ ಭವಿಷ್ಯದ ದಿನಗಳಲ್ಲಿ ಇತರ ಸಮ್ಮೇಳನಗಳಿಗೆ ಮಾದರಿಯಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಬಿಡುಗಡೆಯಾದ ಅನುದಾನದಿಂದ ಹಿಡಿದು ವೇದಿಕೆ ನಿರ್ಮಾಣ, ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆ, ಸಮ್ಮೇಳನದಲ್ಲಿ ವಿದೇಶಿಗರ ಪಾಲ್ಗೊಳ್ಳುವಿಕೆ, 86ನೇ ಸಾಹಿತ್ಯ ಸಮ್ಮೇಳನದಲ್ಲಿ 86 ಕೃತಿಗಳ ಬಿಡುಗಡೆ, ದಸರಾ ಮಾದರಿಯಲ್ಲಿ ದೀಪಾಲಂಕಾರ, ಸಮ್ಮೇಳನದಲ್ಲಿ ಸಮಯ ಪಾಲನೆಗಾಗಿ ವಿಶೇಷ ವ್ಯವಸ್ಥೆ, ಸಮ್ಮೇಳನಕ್ಕೆ ಬರುವ ವಾಹನಗಳ ಪಾರ್ಕಿಂಗ್‌ಗಾಗಿ ಕ್ಯೂಆರ್‌ ಕೋಡ್‌ ಬಳಕೆ, ಪ್ರತಿನಿಧಿಗಳ ನೋಂದಣಿಗಾಗಿ ಆ್ಯಪ್‌ ಬಳಕೆ ಮಾಡಿದ್ದು, ರಾಜ್ಯಾದ್ಯಂತ ಕನ್ನಡ ರಥ ಸಂಚಾರ.. ಹೀಗೆ ಹಲವು ಪ್ರಥಮಗಳಿಗೆ 86ನೇ ಸಾಹಿತ್ಯ ಸಮ್ಮೇಳನ ಮುನ್ನಡಿ ಬರೆಯುತ್ತಿದೆ.

ಸಮಯ ಪಾಲನೆಗೆ ವಿಶೇಷ ವ್ಯವಸ್ಥೆ
ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ಜರಗುವ ವೇಳೆ ಸಮಯ ಪಾಲನೆಗೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಇದಕ್ಕಾಗಿಯೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಗೋಷ್ಠಿಗಳಲ್ಲಿ ಪಾಲ್ಗೊಳ್ಳುವ ಅಥಿತಿಗಳ ಭಾಷಣಕ್ಕೆ ಸಮಯ ನಿಗದಿಗೊಳಿಸಿದ್ದು, ಅತಿಥಿಗಳ ಭಾಷಣದ ಸಮಯ ಮುಗಿಯುತ್ತಾ ಬರುತ್ತಿದ್ದಂತೆ ಮುನ್ಸೂಚನೆ ನೀಡಲು ಕೆಂಪು ದೀಪದ ಬರ್ಜರ್‌ ಅಳವಡಿಸಲಾಗುತ್ತಿದೆ. ಭಾಷಣದ ಅವಧಿ  ಮುಗಿಯುತ್ತಿದ್ದಂತೆ ಧ್ವನಿವರ್ಧಕ ಸ್ವಯಂಚಾಲಿತವಾಗಿ ಬಂದ್‌ ಆಗುವ ವ್ಯವಸ್ಥೆ ಮಾಡಿದ್ದು, ಸಮಯ ಪಾಲನೆಗಾಗಿ ಈ ವ್ಯವಸ್ಥೆ ಮಾಡಿರುವುದು ವಿಶೇಷವಾಗಿದೆ.

ಮೆರವಣಿಗೆಗೆ ವಿಶೇಷ ರಥ
ಈ ಬಾರಿ ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆ ಎಲ್ಲರ ಗಮನ ಸೆಳೆಯಲಿದೆ. ಸಮ್ಮೇಳನಾಧ್ಯಕ್ಷರಾದ ಡಾ| ದೊಡ್ಡರಂಗೇಗೌಡ ಅವರ ಮೆರವಣಿಗೆಗಾಗಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಅರಮನೆ ದರ್ಬಾರ್‌ ಮಾದರಿಯಲ್ಲಿ ಭವ್ಯ ರಥ ಸಿದ್ಧಪಡಿಸಲಾಗಿದೆ. ಕೆಂಪು, ಹಳದಿ ಹಾಗೂ ಬಂಗಾರದ ವರ್ಣಗಳಿಂದ ರಥವನ್ನು ಅಲಂಕರಿಸಲಾಗಿದ್ದು, ಭುವನೇಶ್ವರಿ, ಸಮ್ಮೇಳನದ ಲಾಂಛನ, ಕನ್ನಡ ಧ್ವಜಗಳಿಂದ ಈ ವಿಶೇಷ ರಥ ಕಂಗೊಳಿಸಲಿದೆ. ಜತೆಗೆ ರಾಜ್ಯದ 31 ಜಿಲ್ಲೆಗಳ ಕಸಾಪ ಅಧ್ಯಕ್ಷರಿಗಾಗಿ 11 ಸಾರೋಟುಗಳನ್ನು ವ್ಯವಸ್ಥೆ ಮಾಡಲಾಗಿದೆ.

86 ಕೃತಿಗಳ ಬಿಡುಗಡೆ
ಸಮ್ಮೇಳನದಲ್ಲಿ 86 ಕೃತಿಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಬಾರಿಯ ವಿಶೇಷ. ಹಾವೇರಿ ಜಿಲ್ಲೆಗೆ ಸಂಬಂಧಿ ಸಿದಂತೆ 37 ಕೃತಿಗಳನ್ನು ಹೊರತರಲಾಗುತ್ತಿದೆ. ಉಳಿದ 49 ಕೃತಿಗಳು ನಾಡು-ನುಡಿಗೆ ಸಂಬಂಧಿ ಸಿದ್ದು, ಅವುಗಳಲ್ಲಿ 15 ಹೊಸ ಮತ್ತು 34 ಮರು ಮುದ್ರಣಗೊಳ್ಳುತ್ತಿರುವ ಕೃತಿಗಳಾಗಿವೆ. ಜತೆಗೆ 86ನೇ ನುಡಿ ಜಾತ್ರೆಯ ಸವಿನೆನಪಿಗಾಗಿ 500 ಪುಟಗಳ ಏಲಕ್ಕಿ ಹಾರ ಶೀರ್ಷಿಕೆಯ ಸ್ಮರಣ ಸಂಚಿಕೆ ಹೊರತರಲಾಗುತ್ತಿದೆ.

ಮೈಸೂರು ಮಾದರಿ ದೀಪಾಲಂಕಾರ
ನಗರವನ್ನು ಮಧುವಣಗಿತ್ತಿಯಂತೆ ಸಿಂಗಾರ ಮಾಡಲು ಪ್ರಮುಖ ವೃತ್ತ, ರಸ್ತೆ, ಸರಕಾರಿ ಕಚೇರಿಗಳಿಗೆ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆ, ವೃತ್ತಗಳು ವಿದ್ಯುದ್ದೀಪಗಳಿಂದ ಕಂಗೊಳಿಸುವ ಮೂಲಕ ಎಲ್ಲರನ್ನು ಆಕರ್ಷಿಸುತ್ತಿವೆ.

ಕ್ಯೂಆರ್‌ ಕೋಡ್‌ ವ್ಯವಸ್ಥೆ
ಸಮ್ಮೇಳನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಬರುವವರು ಸಮ್ಮೇಳನದ ಸ್ಥಳ, ಪಾರ್ಕಿಂಗ್‌ ವ್ಯವಸ್ಥೆ, ಯಾವ ಮಾರ್ಗದಲ್ಲಿ ವೇದಿಕೆಯತ್ತ ಬರಬೇಕು ಎಂಬ ಗೊಂದಲ ನಿವಾರಣೆಗಾಗಿ ಕ್ಯೂಆರ್‌ ಕೋಡ್‌ ಬಳಕೆ ಮಾಡುತ್ತಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.