ಹಾವೇರಿ: ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆ
Team Udayavani, May 23, 2020, 12:29 PM IST
ಹಾವೇರಿ: ಕೋವಿಡ್-19 ಸೋಂಕು ತಾಗಿದ್ದ ಜಿಲ್ಲೆಯ ವ್ಯಕ್ತಿಯೋರ್ವ ಈಗ ಗುಣಮುಖನಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಈತ ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಯ ಸವಣೂರಿಗೆ ಬಂದಿದ್ದ ವ್ಯಕ್ತಿಗೆ ಸೋಂಕು ತಾಗಿತ್ತು. ಗಂಟಲು ದೃವ ಪರೀಕ್ಷೆಯಲ್ಲಿ ಸೋಂಕು ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ಈತನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸದ್ಯ ಈತ ಚಿಕಿತ್ಸೆಗೆ ಸ್ಪಂದಿಸಿ ಗುಣಮುಖನಾಗಿದ್ದು ಶನಿವಾರ ಬೆಳಗ್ಗೆ ಜಿಲ್ಲಾ ಆಸ್ಪತ್ರೆಯಿಂದ ಹೂವು ಹಾಕಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡಲಾಯಿತು.
ಜಿಲ್ಲೆಯಲ್ಲಿ ಒಟ್ಟು ಆರು ಪ್ರಕರಣಳು ದೃಢವಾಗಿದ್ದು, ಮೂರು ಪ್ರಕರಣಗಳು ಶುಕ್ರವಾರ ವರದಿಯಾಗಿತ್ತು.