ಬ್ಯಾಟರಿ ಬೆಳಕಲ್ಲಿ ಒಣಗಿದ ಬೆಳೆ ವೀಕ್ಷಿಸಿದ ಸಿಎಂ!


Team Udayavani, Jan 5, 2019, 11:09 AM IST

5-january-17.jpg

ಹಾವೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಸಂಜೆ ಕತ್ತಲೆಯಲ್ಲಿಯೇ ತಾಲೂಕಿನ ಮೂರ್‍ನಾಲ್ಕು ಹಳ್ಳಿಗಳಿಗೆ ಭೇಟಿ ನೀಡಿ, ಬ್ಯಾಟರಿ ಬೆಳಕಲ್ಲಿಯೇ ಒಣಗಿದ ಬೆಳೆ ವೀಕ್ಷಿಸಿದರು. ಮಧ್ಯಾಹ್ನ 2 ಗಂಟೆಗೆ ಬರ ವೀಕ್ಷಣೆಗೆ ಬರಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಸಂಜೆ 6:40ರ ಹೊತ್ತಿಗೆ ಆಗಮಿಸಿ ಎರೆಕುಪ್ಪಿ, ಜೋಯಿಸರಹಳ್ಳಿ, ಹೂಲಿಹಳ್ಳಿ, ಕದರಮಂಡಲಗಿ ಗ್ರಾಮಗಳಿಗೆ ಭೇಟಿ ನೀಡಿದರು.

ಮುಖ್ಯಮಂತ್ರಿ ಬರುವಿಕೆಗಾಗಿ ರೈತರು ಮಧ್ಯಾಹ್ನ 1ಗಂಟೆಯಿಂದಲೇ ಬಿಸಿಲಲ್ಲಿ ಕುಳಿತು ಕಾಯುತ್ತಿದ್ದರು. ಸಂಜೆ 5ಗಂಟೆಯಾದರೂ ಮುಖ್ಯಮಂತ್ರಿ ಬಾರದೆ ಇದ್ದಾಗ ಹಲವರು ನಿರಾಶರಾಗಿ ಮನೆಗೆ ನಡೆದರು. ಇನ್ನು ಕೆಲ ರೈತರು ಪೊಲೀಸರ ಮಾಹಿತಿ ಮೇರೆಗೆ ಮುಖ್ಯಮಂತ್ರಿಯವರಿಗೆ ಕಾಯುವ ಕಾಯಕ ಮುಂದುವರಿಸಿದರು. 6:30ರ ಹೊತ್ತಿಗೆ ಆಗಸದಲ್ಲಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್‌ ಕಂಡೊಡನೆ ನಾಡಿನ ದೊರೆ ಅಂತೂ ಬಂದರಲ್ಲ ಎಂದು ನಿಟ್ಟುಸಿರುವ ಬಿಟ್ಟರು.

ತಡವಾಗಿ ಬರ ವೀಕ್ಷಣೆಗೆ ಬಂದಿರುವ ಬಗ್ಗೆ ರೈತರಿಗೆ ಸ್ಪಷ್ಟನೆ ನೀಡಿದ ಸಿಎಂ ಕುಮಾರಸ್ವಾಮಿ, ಧಾರವಾಡದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಬರುವವನಿದ್ದು ಸಮ್ಮೇಳನದ ಬಳಿಕ ಸಿಗುವ ಸಮಯದಲ್ಲಿ ಜಿಲ್ಲೆಯ ಬರ ವೀಕ್ಷಣೆ, ಇನ್ನಿತರ ಸಮಸ್ಯೆ ಆಲಿಸುವ ಆಲೋಚನೆಯಿಂದ ಭೇಟಿಗಾಗಿ ವ್ಯವಸ್ಥೆ ಮಾಡಲು ಗುರುವಾರ ದಿಢೀರ್‌ ಆಗಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ, ಧಾರವಾಡ ಸಮ್ಮೇಳನದಿಂದ ಬರುವುದು ತಡವಾಯಿತು. ಈ ಬಗ್ಗೆ ಯಾರೂ ಅನ್ಯತಾ ಭಾವಿಸಬಾರದು. ಅಧಿಕಾರಿಗಳಿಂದ ಜಿಲ್ಲೆಯ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಸಮಾಧಾನ ಹೇಳಿದರು.

ದುಡಿಯುವ ಕೈಗಳಿಗೆ ಕೆಲಸ ಕೊಡಲು 8.5 ಕೋಟಿ ಉದ್ಯೋಗ ಹೆಚ್ಚುವರಿ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ. ಬರ ಪರಿಸ್ಥಿತಿಯನ್ನು ನಿಭಾಯಿಸಲು ಮಂತ್ರಿಗಳು, ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದರು.

ಎಲ್ಲೆಲ್ಲಿ ಭೇಟಿ?
ಸಂಜೆ ಕತ್ತಲಾವರಿಸಿದ ಬಳಿಕ ಬರ ವೀಕ್ಷಣೆಗೆ ಬಂದ ಸಿಎಂ ಕುಮಾರಸ್ವಾಮಿ, ಎರೆಕುಪ್ಪಿಯ ರೈತ ದ್ಯಾಮಪ್ಪ ಕಡ್ಲಿಗೊಂದಿ ಅವರ ಹೊಲದಲ್ಲಿ ಜೋಳದ ಬೆಳೆ ಹಾನಿ ವೀಕ್ಷಿಸಿದರು. ಅಲ್ಲಿಂದ ಜೋಯಿಸರಹರಳಹಳ್ಳಿ ಗ್ರಾಮಕ್ಕೆ ತೆರಳಿ ಖಾಸಗಿ ಕೊಳವೆಬಾವಿ ನೀರು ಸರಬರಾಜು ವೀಕ್ಷಿಸಿದರು. ಬಳಿಕ ಲಲಿತಾ ಜಟ್ಟೆಪ್ಪ ಹೊರಕೇರಿ, ಭೀಮಪ್ಪ ಬಸಪ್ಪ ಹೊರಕೇರಿ ಜಮೀನಿನಲ್ಲಿರುವ ಒಣಗಿದ ಬೆಳೆ
ವೀಕ್ಷಣೆ, ನಂತರ ಹಳೇಹೂಲಿಹಳ್ಳಿ ಗ್ರಾಮಕ್ಕೆ ಆಗಮಿಸಿ ಯುಟಿಪಿ ಕಾಮಗಾರಿ ವೀಕ್ಷಿಸಿ, ಕದರಮಂಡಲಗಿ ಗ್ರಾಮದ ನರೇಗಾ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ರಾತ್ರಿ 9:10ರ ವೇಳೆಗೆ ಕದರಮಂಡಲಗಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸುವಾಗ ನೆರೆದಿದ್ದ ರೈತರು ಕೆರೆ ತುಂಬಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಕಾರ್ಪೆಟ್ ಏಕೆ?
ಮುಖ್ಯಮಂತ್ರಿ ಕುಮಾರಸ್ವಾಮಿ ಹೊಲ ಭೇಟಿ ಹಿನ್ನೆಲೆಯಲ್ಲಿ ಅ ಧಿಕಾರಿಗಳು ರಸ್ತೆಯಿಂದ ಹೊಲದವರೆಗೆ ಹಸಿರು ಕಾಪೆìಟ್‌ ಹಾಸಿದ್ದರು. ಕಾರಿನಿಂದ ಇಳಿದ ಸಿಎಂ ಕುಮಾರಸ್ವಾಮಿ, ಹಾಸಿರುವ ಕಾರ್ಪೆಟ್ ನೋಡಿ, ‘ನಾನೂ ಮಣ್ಣಿನಲ್ಲೇ ಓಡಾಡುತ್ತೇನೆ. ಹೊಲಕ್ಕೆ ಹೋಗಲು ನನಗೇಕೆ ಕಾರ್ಪೆಟ್‌ ಹಾಕಿದ್ದೀರಿ’ ಎಂದು ನಗುಮೊಗದಿಂದಲೇ ಅಧಿಕಾರಿಗಳನ್ನು ಪ್ರಶ್ನಿಸಿ ಹೊಲದತ್ತ ಬ್ಯಾಟರಿ ಬೆಳಕಲ್ಲಿ ನಡೆದರು.

ಶಾಸಕ ಶಂಕರ್‌ ಮುನಿಸು?
ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಣಿಬೆನ್ನೂರು ತಾಲೂಕಿನ ಹಳ್ಳಿಗಳಲ್ಲಿಯೇ ಬರ ಪರಿಸ್ಥಿತಿ ವೀಕ್ಷಣೆಗೆ ಬಂದರೂ ಸ್ಥಳೀಯ ಶಾಸಕ, ಮಾಜಿ ಸಚಿವ ಆರ್‌. ಶಂಕರ್‌ ಬರ ವೀಕ್ಷಣೆಗೆ ಬಂದಿರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದು ಬಳಿಕ ಕಳೆದುಕೊಂಡ ತಾಲೂಕಿನ ಶಾಸಕರ ಅನುಪಸ್ಥಿತಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.