ಬಸನಗೌಡ ದೇಸಾಯಿ ಜಿಪಂ ಅಧ್ಯಕ

7 ತಿಂಗಳ ನಂತರ ಅಧಿಕಾರ ಬಿಟ್ಟು ಕೊಡುವ ಆಂತರಿಕ ಒಪ್ಪಂದಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್‌

Team Udayavani, Feb 16, 2020, 3:26 PM IST

16-February-20

ಹಾವೇರಿ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಿಗ್ಗಾವಿ ತಾಲೂಕು ದುಂಢಸಿ ಜಿಪಂ ಕ್ಷೇತ್ರದ ಬಸನಗೌಡ ದೇಸಾಯಿ ಆಯ್ಕೆಯಾದರು. ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆದ ಚುನಾವಣೆ ವೇಳೆ ಬಸನಗೌಡ ದೇಸಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಯ್ಕೆ ಅವಿರೋಧವಾಗಿ ನಡೆಯಿತು.

ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಚುನಾವಣಾ ಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟು ಸದಸ್ಯರಲ್ಲಿ ಭಿನ್ನಮತ ಸೃಷ್ಟಿಯಾಗಿತ್ತು. ಶಿಗ್ಗಾವಿ ದುಂಢಸಿ ಕ್ಷೇತ್ರದ ಬಸನಗೌಡ ದೇಸಾಯಿ ಸೇರಿದಂತೆ ಮಾಜಿ ಸಚಿವ ಮನೋಹರ ತಹಸೀಲ್ದಾರ್‌ ಪುತ್ರ ರಾಘವೇಂದ್ರ ತಹಶೀಲ್ದಾರ್‌, ರಾಣಿಬೆನ್ನೂರಿನ ಏಕನಾಥ ಭಾನುವಳ್ಳಿ, ಹಾನಗಲ್ಲನ ಟಾಕನಗೌಡ ಪಾಟೀಲ, ಹಿರೇಕೆರೂರಿನ ಮಾಜಿ ಶಾಸಕ ಬಿ.ಎಚ್‌. ಬನ್ನಿಕೋಡ ಅವರ ಪುತ್ರ ಪ್ರಕಾಶ ಬನ್ನಿಕೋಡ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದರು.

ಪಕ್ಷದ ಮುಖಂಡರು, ಜಿಪಂ ಸದಸ್ಯರೆಲ್ಲ ಶುಕ್ರವಾರ ಸಂಜೆ ನಗರದಲ್ಲಿ ಸಭೆ ಸೇರಿ ಸಾಕಷ್ಟು ಚರ್ಚಿಸಿ, ಜಿಪಂನ ಉಳಿದ 14 ತಿಂಗಳ ಅವಧಿಯನ್ನು ಇಬ್ಬರಿಗೆ ಹಂಚಿಕೊಡಲು ತೀರ್ಮಾನಿಸಿದರು. ಮೊದಲ ಏಳು ತಿಂಗಳ ಅವಧಿಗೆ ಶಿಗ್ಗಾವಿ ತಾಲೂಕು ದುಂಢಸಿ ಕ್ಷೇತ್ರದ ಬಸನಗೌಡ ದೇಸಾಯಿ, ಉಳಿದ ಏಳು ತಿಂಗಳ ಅವಧಿಯನ್ನು ರಾಘವೇಂದ್ರ ತಹಸೀಲ್ದಾರ್‌ ಅವರಿಗೆ ಬಿಟ್ಟುಕೊಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಾದ ಈ ಆಂತರಿಕ ಒಪ್ಪಂದದಂತೆ ಶನಿವಾರ ಒಬ್ಬರೇ ರಾಜೀನಾಮೆ ನೀಡಿ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶಿಸಿತು. ಜಿಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದು, 2016ರ ಮೇ 13ರಂದು ಜಿಪಂ ಅಧ್ಯಕ್ಷರಾಗಿ ಕೊಟ್ರೇಶಪ್ಪ ಬಸೇಗಣ್ಣಿ ಆಯ್ಕೆಯಾಗಿದ್ದರು. ಪಕ್ಷದ ಆಂತರಿಕ ಒಪ್ಪಂದಂತೆ ರಾಜೀನಾಮೆ ನೀಡಿದ ಬಳಿಕ 2018ರ ಸೆ. 21ರಂದು ಜಿಪಂ ಅಧ್ಯಕ್ಷರಾಗಿ ಎಸ್‌.ಕೆ. ಕರಿಯಣ್ಣನವರ ಆಯ್ಕೆಯಾಗಿದ್ದರು. ಇತ್ತೀಚೆಗೆ ಅವರು ಸಹ ಪಕ್ಷದ ಆಂತರಿಕ ಒಪ್ಪಂದದಂತೆ
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ತೆರವಾದ ಸ್ಥಾನಕ್ಕೆ ಬಸನಗೌಡ ದೇಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಪಂಚಾಯಿತಿಯ ಒಟ್ಟು 34ಸ್ಥಾನಗಳಲ್ಲಿ ಕಾಂಗ್ರೆಸ್‌ 22 ಸ್ಥಾನ, ಬಿಜೆಪಿ 12ಸ್ಥಾನಗಳನ್ನು
ಹೊಂದಿದೆ. ಕಾಂಗ್ರೆಸ್‌ ಸ್ಪಷ್ಟ ಬಹುಮತ ಹೊಂದಿರುವುದರಿಂದ ಜಿಪಂನಲ್ಲಿ ಕಾಂಗ್ರೆಸ್‌ ಆಡಳಿತ ಮುಂದುವರಿದಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.