Haveri; ನೂರಕ್ಕೆ ನೂರು ಟಿಕೆಟ್ ಸಿಗುವ ವಿಶ್ವಾಸವಿದೆ: ಕೆ.ಇ. ಕಾಂತೇಶ
Team Udayavani, Mar 11, 2024, 3:22 PM IST
ಹಾವೇರಿ: ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲವಿಲ್ಲ. ಟಿಕೆಟ್ ಕೇಳುವುದು ಕಾರ್ಯಕರ್ತರ ಹಕ್ಕು. ಹೈಕಮಾಂಡ್ ನಿಶ್ಚಯ ಮಾಡಿ ಯಾರಿಗೆ ಟಿಕೆಟ್ ಕೊಡುತ್ತದೋ ಉಳಿದವರು ಅವರಿಗೆ ಬೆಂಬಲ ನೀಡುವ ಪದ್ದತಿ ಬಿಜೆಪಿಯಲ್ಲಿದೆ. ನನಗೆ ಗುರು ಹಿರಿಯರ ಆಶೀರ್ವಾದದಿಂದ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕೆ.ಇ. ಕಾಂತೇಶ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಸಿಂದಗಿ ಮಠಕ್ಕೆ ನಡೆದುಕೊಂಡು ಬರುತ್ತಿದ್ದೇವೆ. ಸಿಂದಗಿ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇವೆ. ಯಡಿಯೂರಪ್ಪನವರು ನಿನ್ನೆ ಆಶೀರ್ವಾದ ಮಾಡಿದ್ದಾರೆ. ನಾನು, ನನ್ನ ತಂದೆ ದೆಹಲಿಗೆ ಹೋಗುತ್ತಿಲ್ಲ. ಸಭೆ ಮುಗಿದ ಮೇಲೆ ಸಿಹಿ ಸುದ್ದಿ ಸಿಗುತ್ತದೆ, ಎಲ್ಲರ ಬೆಂಬಲ ಬಿಜೆಪಿ ಮೇಲಿರಲಿ. ನೂರಕ್ಕೆ ನೂರು ವಿಶ್ವಾಸವಿದೆ ನನಗೆ ಟಿಕೆಟ್ ಸಿಗಲಿದೆ ಎಂದರು.
ಬಸವರಾಜ್ ಬೊಮ್ಮಾಯಿ, ಬಿ.ಸಿ.ಪಾಟೀಲ ಹೆಸರು ನಿಗದಿಯಾದರೆ ನಾನು ಬೆಂಬಲ ನೀಡುತ್ತೇನೆ. ಯಾರೇ ಅಭ್ಯರ್ಥಿಯಾದರೂ ನಾನು ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೇನೆ. ನಾವೆಲ್ಲರೂ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರು, ಬೆಂಬಲಿಗರು ತಾಳ್ಮೆಯಿಂದ ಇರಬೇಕು. ಪಕ್ಷ ತೀರ್ಮಾನ ಮಾಡಿದ ಮೇಲೆ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.
ಕಳೆದ ಚುನಾವಣೆಯಲ್ಲಿ ಚುಣಾವಣಾ ರಂಗದಿಂದ ಹೊರ ಬರುವಂತೆ ಹೈಕಮಾಂಡ್ ತಿಳಿಸಿತ್ತು. ನನಗೆ ಟಿಕೆಟ್ ನೀಡಿದರೂ ಸಂತೋಷದಿಂದ ಕೆಲಸ ಮಾಡುತ್ತೇನೆ, ಬೇರೆಯವರಿಗೆ ಕೊಟ್ಟರೂ ಸಂತೋಷದಿಂದ ಕೆಲಸ ಮಾಡುತ್ತೇನೆ. ತ್ಯಾಗದ ಪ್ರಶ್ನೆ ಉದ್ಬವಿಸುವುದಿಲ್ಲ ಎಂದು ಕಾಂತೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Lok Sabha polls: ಒಡಿಶಾದಲ್ಲಿ ನವೀನ್ ಜನಪ್ರಿಯತೆ Vs ಬಿಜೆಪಿ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!