Haveri: ವಿದೇಶಿ ನೆಲ ತಲುಪಿದ ಕಬಡ್ಡಿ ಕ್ರೀಡೆ; ಕೋಚ್‌ ರವೀಂದ್ರ ಶೆಟ್ಟಿ

ಕ್ರೀಡಾಪಟುಗಳ ಏಳ್ಗೆಗೆ ಸಹಕರಿಸಿ ಕಬಡ್ಡಿ ಕ್ರೀಡೆಯನ್ನು ಉತ್ತುಂಗಕ್ಕೇರಿಸಿದೆ

Team Udayavani, Nov 3, 2023, 4:19 PM IST

Haveri: ವಿದೇಶಿ ನೆಲ ತಲುಪಿದ ಕಬಡ್ಡಿ ಕ್ರೀಡೆ; ಕೋಚ್‌ ರವೀಂದ್ರ ಶೆಟ್ಟಿ

ಬ್ಯಾಡಗಿ: ಭಾರತದ ಅತ್ಯಂತ ಜನಪ್ರಿಯ ಕಬಡ್ಡಿ ಕ್ರೀಡೆ ವಿದೇಶಿ ನೆಲ ತಲುಪಿದ್ದು, ಹೊಸ ತಾಂತ್ರಿಕತೆ ಅಳವಡಿಸಿಕೊಂಡು ಪರಿಚಯವಾದ ಪ್ರೊ| ಕಬಡ್ಡಿ ಬಳಿಕ ಪ್ರತಿಯೊಬ್ಬ ಕ್ರೀಡಾಪಟು ಕೋಟಿಗೂ ಅಧಿಕ ಹಣ ಸಂಪಾದಿಸುತ್ತಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರ ಶೇ.2 ರಷ್ಟು ಮೀಸಲಾತಿ ಪ್ರಕಟಿಸಿದ್ದು ಕೂಡ ಕ್ರೀಡಾಪಟುಗಳು ಕಬಡ್ಡಿಯತ್ತ ಗಮನ ಸೆಳೆಯುವಂತೆ ಮಾಡಿದೆ ಎಂದು ಪಟ್ನಾ ಪೈರೇಟ್ಸ್‌ ಹಾಗೂ ಥೈಲ್ಯಾಂಡ್‌ ಕೋಚ್‌ ರವೀಂದ್ರ ಶೆಟ್ಟಿ ಹೇಳಿದರು.

ತುಮಕೂರಿನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೋಟೆಬೆನ್ನೂರಿನ ಬಿಆರ್‌ಇ (ಸಿಬಿಎಸ್‌ಇ) ಪ್ರೌಢಶಾಲೆ ಕ್ರೀಡಾಪಟುಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಬಹುದೊಡ್ಡ ಪಾತ್ರ ವಹಿಸುತ್ತವೆ. ಆದರೆ, ಉದ್ಯೋಗ ಭರವಸೆ ಸಿಗದ ಬಹಳಷ್ಟು ಕಬಡ್ಡಿ ಕ್ರೀಡಾಪಟುಗಳು ಭವಿಷ್ಯ ರೂಪಿಸಿಕೊಳ್ಳಲಾಗದೇ ನೇಪಥ್ಯಕ್ಕೆ ಸರಿದಿದ್ದಾರೆ. ಮೂಲ ಸೌಕರ್ಯದ ಜೊತೆಗೆ ಪ್ರತಿಭಾನ್ವಿತರನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಗುರುತರ ಜವಾಬ್ದಾರಿ ಇದೀಗ ಸರ್ಕಾರದ ಮೇಲಿದೆ. ಈ ಕುರಿತು ಬಹುದೊಡ್ಡ ಚಿಂತನೆ ನಡೆಸಬೇಕಾಗಿದೆ ಎಂದರು.

ಮಾಜಿ ಶಾಸಕ ಹಾಗೂ ಬಿಆರ್‌ಇ ಸಂಸ್ಥೆ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಜಿಲ್ಲೆಯಲ್ಲಿರುವ ಮಾಜಿ ಕಬಡ್ಡಿ ಕ್ರೀಡಾಪಟುಗಳೆಲ್ಲರೂ ಸೇರಿಕೊಂಡು ಅಸೋಸಿಯೇಶನ್‌ ರಚಿಸಿದ್ದು, ಕಬಡ್ಡಿ ಕ್ರೀಡಾಪಟುಗಳಿಗೆ ರಾಷ್ಟ್ರಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಬದುಕಿನ ಮಾರ್ಗ ತೋರಿಸುವ ನಿರ್ದಿಷ್ಟ ಗುರಿಯೊಂದಿಗೆ ಕಳೆದೆರಡು ದಶಕದಿಂದ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ ಯಶಸ್ಸು ಕಂಡಿರುವ ಹಾವೇರಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್‌ ಜಿಲ್ಲೆಯ ನೂರಾರು ಕ್ರೀಡಾಪಟುಗಳ ಏಳ್ಗೆಗೆ ಸಹಕರಿಸಿ ಕಬಡ್ಡಿ ಕ್ರೀಡೆಯನ್ನು ಉತ್ತುಂಗಕ್ಕೇರಿಸಿದೆ. ಬಹಳಷ್ಟು ಕ್ರೀಡಾಪಟುಗಳು ಅವರ ಗರಡಿಯಲ್ಲೇ ಪಳಗಿದ್ದಾರೆ ಎಂದರು.

ಮೆಣಸಿನಕಾಯಿಯಂತೆ ಬ್ಯಾಡಗಿ ಪಟ್ಟಣ ಕಬಡ್ಡಿ ಕ್ರೀಡೆಗೆ ಉತ್ತಮ ಹೆಸರು ಪಡೆದುಕೊಂಡಿದೆ. ನಮ್ಮ ತಾಲೂಕಿನ ರವೀಂದ್ರ ಶೆಟ್ಟಿ ಥೈಲ್ಯಾಂಡ್‌ ದೇಶದ ಪುರುಷ ಮತ್ತು ಮಹಿಳಾ ಕಬಡ್ಡಿ ತಂಡಗಳಿಗೆ ಮುಖ್ಯ ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ತರುವ ವಿಷಯ. ಇತ್ತೀಚೆಗೆ ಮುಕ್ತಾಯವಾದ ಏಷ್ಯನ್‌ ಚಾಂಪಿಯನ್‌ ಶಿಪ್‌ನಲ್ಲಿ ಥೈಲ್ಯಾಂಡ್‌ ದೇಶದ ತಂಡಗಳಿಗೆ ಕೋಚಿಂಗ್‌ ಮಾಡುವ ಮೂಲಕ ಪಂದ್ಯಾವಳಿಯಲ್ಲಿ ಮಾರ್ಗದರ್ಶನ ನೀಡಿ ಬ್ಯಾಡಗಿ ಹೆಸರನ್ನು ಸಾಗರದಾಚೆಗೂ ತಲುಪಿಸಿದ್ದಾರೆ ಎಂದರು.

ಇದೇ ವೇಳೆ ನಾಯಕಿ ಗುಣಶೀಲಾ ಸೂರಣಗಿ ಸೇರಿದಂತೆ ಕ್ರೀಡಾಪಟುಗಳಾದ ನಿತ್ಯಾ ಬನ್ನಿಮಟ್ಟಿ, ಸ್ನೇಹ ಹರಪನಹಳ್ಳಿ, ರೇವತಿ ಕಣದಮನಿ, ಅಮೂಲ್ಯ ಮಾಜೀಗೌಡ್ರ, ಕವನಾ ರ್ಯಾವಣ್ಣನವರ, ಎಂ.ಕೆ. ದೀಪ್ತಿ, ನಿವೇದಾ ಜಲಾಟಿಗೌಡ್ರ, ಪೂರ್ಣಿಮಾ ಚಿನಿವಾಲಗಟ್ಟಿ, ಚೈತ್ರಾ ನಾಯಕ್‌, ರೇಣುಕಾ ಬುಶೆಟ್ಟಿ, ವಿದ್ಯಾ ಸಣ್ಣಕ್ಕಿ ಕೋಚ್‌ ನಿಂಗಪ್ಪ ಮಡಿವಾಳರ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಾವೇರಿ ಜಿಲ್ಲಾ ಅಮೇಚೂರ್‌ ಕಬಡ್ಡಿ ಅಸೋಸಿಯೇಶನ್‌ ಚೇರ್ಮನ್‌ ಸಿ.ಜಿ.ಚಕ್ರಸಾಲಿ,
ಬಿಆರ್‌ಈ ಸಂಸ್ಥೆಯ ಖಜಾಂಚಿ ಚನ್ನವೀರಪ್ಪ ಬಳ್ಳಾರಿ, ಪ್ರಾಚಾರ್ಯ ಮೋಹಿತ್‌ ಅರಬೈಲ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.