ರಾಜ್ಯದಲ್ಲಿ ಗಮನ ಸೆಳೆದ ಹಾವೇರಿ ಶಾಸಕರು


Team Udayavani, Jul 27, 2019, 9:30 AM IST

hv-tdy-1

ಹಾವೇರಿ: ಜಿಲ್ಲೆಯ ಆರು ಶಾಸಕರಲ್ಲಿ ನಾಲ್ವರು ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದು, ರಾಜ್ಯ ರಾಜಕಾರಣದಲ್ಲಿ ಹಾವೇರಿ ಮತ್ತೆ ಗಮನ ಸೆಳೆಯುತ್ತಿದೆ.

ಹಿರಿಯ ಮುಖಂಡ ಸಿ.ಎಂ. ಉದಾಸಿ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮೊದಲಿನಿಂದಲೂ ರಾಜ್ಯ ರಾಜಕಾರಣದಲ್ಲಿ ಹಿರಿಯರಾಗಿ ಗುರುತಿಸಿಕೊಂಡವರು. ಸಚಿವರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ ರಾಜ್ಯಮಟ್ಟದಲ್ಲಿ ಬೆಳೆದವರು. ಇವರ ಜತೆಗೆ ಈಗ ಹಿರೇಕೆರೂರಿನ ಶಾಸಕ ಬಿ.ಸಿ. ಪಾಟೀಲ ಹಾಗೂ ಪಕ್ಷೇತರ ಶಾಸಕ ಆರ್‌. ಶಂಕರ್‌ ಇಬ್ಬರೂ ರಾಜ್ಯ ರಾಜಕಾರಣದಲ್ಲಿ ಬೇರೆಯದೇ ಆದ ರೀತಿಯಲ್ಲಿ ಗಮನ ಸೆಳೆದ ಶಾಸಕರಾಗಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಬಹಿರಂಗವಾಗಿ ಅತೃಪ್ತಿ ಹೊರಹಾಕುವ ಮೂಲಕ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಳ್ಳುವ ಮೂಲಕ ಬಿ.ಸಿ. ಪಾಟೀಲ ಪ್ರಸ್ತುತ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇನ್ನೋರ್ವ ಶಾಸಕ ಆರ್‌. ಶಂಕರ್‌ ಆ ಪಕ್ಷ, ಈ ಪಕ್ಷ ಎಂದು ವಿವಿಧ ಪಕ್ಷಗಳಿಗೆ ಬೆಂಬಲ ಸೂಚಿಸಿ, ಈಗ ಶಾಸಕ ಸ್ಥಾನ ಅನರ್ಹತೆಗೆ ಒಳಗಾಗುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದಾರೆ.

ಇಮ್ಮಡಿಯಾದ ಉತ್ಸಾಹ: ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯ ಈ ಪ್ರಭಾವಿ ಮುಖಂಡರಲ್ಲಿ ಉತ್ಸಾಹ ಇಮ್ಮಡಿಸಿದೆ. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಜಿಲ್ಲೆಯ ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರೂ ಅವರ ಜತೆಗಿದ್ದು ಸರ್ಕಾರ, ಪಕ್ಷ ಹಾಗೂ ರಾಜಕಾರಣದ ಎಲ್ಲ ಹಂತದಲ್ಲಿ ಮಾರ್ಗದರ್ಶನ ನೀಡುವ ಮಟ್ಟಿಗೆ ಆಪ್ತರಾಗಿದ್ದವರು. ಈಗ ಮತ್ತೆ ಈ ಇಬ್ಬರೂ ನಾಯಕರಿಗೆ ಸರ್ಕಾರದಲ್ಲಿ ಪ್ರಬಲ ಅಧಿಕಾರ ಸಿಗುವ ನಿರೀಕ್ಷೆ ಇದೆ.

ಜಿಲ್ಲೆಗೆ ನಾಲ್ಕು ಸಚಿವ ಸ್ಥಾನ: ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರೂ ಪ್ರಭಾವಿಗಳಾಗಿರುವುದರಿಂದ ಇಬ್ಬರೂ ಯಡಿಯೂರಪ್ಪ ಸರ್ಕಾರದಲ್ಲಿ ಪ್ರಮುಖ ಖಾತೆಯ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಬಹುದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಜಿಲ್ಲೆಗೆ ಎರಡು ಪ್ರಮುಖ ಖಾತೆಗಳ ಸಚಿವ ಸ್ಥಾನ ಸಿಕ್ಕಿತ್ತು. ಹಿರಿಯ ಮುಖಂಡ ಸಿ.ಎಂ. ಉದಾಸಿಯವರಿಗೆ ಲೋಕೋಪಯೋಗಿ ಖಾತೆ ಕೊಟ್ಟಿದ್ದರೆ ಬಸವರಾಜ ಬೊಮ್ಮಾಯಿಗೆ ನೀರಾವರಿ ಖಾತೆ ಕೊಡಲಾಗಿತ್ತು. ಸಿ.ಎಂ. ಉದಾಸಿಯವರಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಕೊಡಲಾಗಿತ್ತು. ಈಗ ಮತ್ತೆ ಅದೇ ರೀತಿ ಪ್ರಮುಖ ಖಾತೆಗಳ ಎರಡು ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಜಿಲ್ಲೆಯಲ್ಲಿ ನಡೆದಿದೆ.

ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಕೈಕೊಟ್ಟು ಬಿಜೆಪಿ ಬೆಂಬಲಿಸಬಹುದಾದ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕ ಬಿ.ಸಿ. ಪಾಟೀಲ ಅವರಿಗೂ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಇನ್ನು ಶಾಸಕ ಸ್ಥಾನದ ಅನರ್ಹತೆ ಶಿಕ್ಷೆಗೊಳಗಾದ ಆರ್‌. ಶಂಕರ್‌ ಅವರಿಗೂ ಸಾಧ್ಯಾಸಾಧ್ಯತೆ ಆಲೋಚಿಸಿ ವಿ.ಪ. ಸದಸ್ಯತ್ವ ನೀಡಿಯಾದರೂ ಸಚಿವ ಸ್ಥಾನ ನೀಡಬಹುದು ಎಂಬ ಚರ್ಚೆ ನಡೆದಿದೆ. ಹೀಗೆ ಜಿಲ್ಲೆಯ ನಾಲ್ವರು ಶಾಸಕರಿಗೆ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರ ಪಕ್ಷದ ವಲಯದಲ್ಲಿ ನಡೆದಿದೆ.

ಬಿಜೆಪಿ ಅವಧಿಯಲ್ಲಿ ಭರಪೂರ: ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಭರಪೂರ ಸ್ಥಾನಮಾನ ದೊರಕಿತ್ತು. ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಇದರ ಜತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬುಡಕಟ್ಟು ಆಯೋಗದ ಅಧ್ಯಕ್ಷ ಸ್ಥಾನ ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ, ಮಲಪ್ರಭಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಸೋಮಣ್ಣ ಬೇವಿನಮರದ ಅವರಿಗೆ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ಭೋಜರಾಜ ಕರೂದಿ ಅವರಿಗೆ ನೀಡಲಾಗಿತ್ತು. ಇಷ್ಟೇ ಅಲ್ಲ ಸೋಮಣ್ಣ ಬೇವಿನಮರದ ಅವರಿಗೆ ವಿಧಾನ ಪರಿಷತ್‌ ಸದಸ್ಯ ಸ್ಥಾನವನ್ನೂ ನೀಡಲಾಗಿತ್ತು.

‘ಕೈ’ ಅವಧಿಯಲ್ಲಿ ಕಡಿಮೆ: ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಹೆಚ್ಚಿನ ರಾಜಕೀಯ ಸ್ಥಾನಮಾನ ಸಿಕ್ಕಿರಲಿಲ್ಲ. ಒಂದು ಸಚಿವ ಸ್ಥಾನ ಕೊಡಲು ಸಹ ಭಾರಿ ಮೀನಾಮೇಷ ಎಣಿಸಿ ಒಂದೂವರೆ ವರ್ಷದ ಬಳಿಕ ಹಾನಗಲ್ಲ ಶಾಸಕ ಮನೋಹರ ತಹಸೀಲ್ದಾರ್‌ ಅವರಿಗೆ ಸಚಿವ (ಅಬಕಾರಿ)ಸ್ಥಾನ ಕೊಟ್ಟು ವರ್ಷದೊಳಗೇ ಅವರಿಂದ ಸಚಿವ ಸ್ಥಾನ ವಾಪಸ್‌ ಪಡೆಯಲಾಗಿತ್ತು. ಬಳಿಕ ನಡೆದ ರಾಜಕೀಯ ತಲ್ಲಣಗಳ ನಡುವೆ (ಸಚಿವ ಪರಮೇಶ ನಾಯ್ಕ ರಾಜೀನಾಮೆ)ಲಂಬಾಣಿ ಸಮುದಾಯದವರಿಗೆ ಸಚಿವ ಸ್ಥಾನ ನೀಡುವ ಸಂದರ್ಭ ನಿರ್ಮಾಣವಾಗಿ ನಿರಾಯಾಸವಾಗಿ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ಒಲಿದಿತ್ತು.2018ರಲ್ಲಿ ಬಂದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಂತೂ ಜಿಲ್ಲೆಗೆ ಹೆಚ್ಚಿನ ಸ್ಥಾನಮಾನ ಮರೀಚಿಕೆಯಾಗಿತ್ತು. ಆರ್‌. ಶಂಕರ್‌ಗೆ ಬಿಟ್ಟರೆ ಬೇರೆ ಯಾರಿಗೂ ಸಚಿವ ಸ್ಥಾನ ಸಿಗಲಿಲ್ಲ. ಆರಂಭದಿಂದಲೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಸಿ. ಪಾಟೀಲ ಇದೇ ಕಾರಣಕ್ಕಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ಇತಿಹಾಸ.

ಒಟ್ಟಾರೆ ಈ ಬಾರಿ ಬಿಜೆಪಿ ಸರ್ಕಾರ ರಚನೆಗೂ ಮೊದಲೇ ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ ಹಾಗೂ ಇತರೆ ಸ್ಥಾನಮಾನ ಲಭಿಸುವ ನಿರೀಕ್ಷೆ ಹೆಚ್ಚಾಗಿದೆ. ಶಾಸಕರು, ಮುಖಂಡರು ವಿವಿಧ ಸ್ಥಾನಮಾನಕ್ಕಾಗಿ ಪಕ್ಷದ ಗಮನಸೆಳೆಯಲು ಮುಂದಾಗಿದ್ದಾರೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.