ಹಾವೇರಿ ನುಡಿಜಾತ್ರೆ ಸದ್ಯಕ್ಕಿಲ್ಲ?

­ಮೇ 20ರಿಂದ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಯಾಗಿತ್ತು

Team Udayavani, Apr 18, 2022, 10:05 AM IST

6

ಹಾವೇರಿ: ಹಾವೇರಿಯಲ್ಲಿ 86ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಹಲವು ಬಾರಿ ಮುಹೂರ್ತ ನಿಗದಿ ಮಾಡಿದ್ದರೂ ಇನ್ನೂ ಕಾಲ ಕೂಡಿ ಬಂದಂತೆ ಕಾಣುತ್ತಿಲ್ಲ. ಮೇ 20ರಿಂದ ಮೂರು ದಿನಗಳ ಕಾಲ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿ ಮಾಡಿದ್ದರೂ ಇದುವರೆಗೆ ಸರ್ಕಾರದಿಂದ ಅಧಿಕೃತ ಘೋಷಣೆಯಾಗಿಲ್ಲ. ಹೀಗಾಗಿ ಮೇ ತಿಂಗಳಲ್ಲಿ ನುಡಿ ಜಾತ್ರೆ ನಡೆಯುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ.

ಈಗಾಗಲೇ ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಸದ್ಯ ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬಂದಿರುವುದರಿಂದ ಮೇ ತಿಂಗಳಲ್ಲಿ ಸಮ್ಮೇಳನ ನಡೆಸಲು ಕಳೆದ ಮಾರ್ಚ್‌ ತಿಂಗಳಲ್ಲಿ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಅಧ್ಯಕ್ಷ‌ತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೇ 20, 21 ಮತ್ತು 22ರಂದು ಸಮ್ಮೇಳನ ನಡೆಸುವ ಬಗ್ಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿತ್ತು.

ಈ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ದಿಷ್ಟ ದಿನಾಂಕ ಘೋಷಿಸುವುದಾಗಿ ಅವರು ತಿಳಿಸಿದ್ದರು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಅವರೊಂದಿಗೆ ಮಹೇಶ ಜೋಶಿ ಅವರು ಸಿಎಂ ಭೇಟಿಯಾಗಿ ಚರ್ಚಿಸಿದ್ದರು. ಆದರೆ ಇದುವರೆಗೂ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟ ಸೂಚನೆ ನೀಡದಿರುವುದರಿಂದ ಮೇ ತಿಂಗಳಲ್ಲಿ ಸಮ್ಮೇಳನ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಕೋವಿಡ್‌ ಮೊದಲ ಅಲೆ ಮುಗಿದ ಬಳಿಕ ಕಳೆದ ವರ್ಷ ಫೆ.26ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಎರಡನೇ ಅಲೆ ಶುರುವಾಗಿದ್ದರಿಂದ ನುಡಿಜಾತ್ರೆಯ ತಯಾರಿ ಬಂದ್‌ ಮಾಡಲಾಗಿತ್ತು. ಈಗ ಎರಡನೇ ಬಾರಿ ಸಮ್ಮೇಳನ ದಿನಾಂಕ ಮುಂದೂಡಲ್ಪಟ್ಟರೂ ಅಚ್ಚರಿಯಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಸಿದ್ಧತೆಗೆ ಬೇಕು ಸಮಯಾವಕಾಶ: ಲಕ್ಷಾಂತರ ಜನ ಸೇರುವ ಸಾಹಿತ್ಯ ಸಮ್ಮೇಳನಕ್ಕೆ ಕನಿಷ್ಟ ಮೂರು ತಿಂಗಳ ಮುಂಚಿತವಾಗಿಯೇ ಸಿದ್ಧತಾ ಕಾರ್ಯ ಆರಂಭಿಸಬೇಕಾಗುತ್ತದೆ. ಇಲ್ಲಿಯ ಜಿಎಚ್‌ ಕಾಲೇಜು ಪಕ್ಕದ ಖಾಲಿ ಜಾಗದಲ್ಲಿ ಸಮ್ಮೇಳನ ನಡೆಸಲು ಸ್ಥಳ ಗುರುತಿಸಲಾಗಿದೆ. ಆದರೆ ಅಲ್ಲಿ ಗಿಡ ಗಂಟಿ ಬೆಳೆದಿದ್ದು, ಎತ್ತರ ತಗ್ಗುಗಳಿಂದ ಕೂಡಿದೆ. ಅಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡು ಜಾಗ ಸಮತಟ್ಟು ಮಾಡಬೇಕಿದೆ.

ಈ ಸಲ ಸಮ್ಮೇಳನ ನಡೆಸಲು ಅನುದಾನಕ್ಕೆ ಕಾಯುವ ಪ್ರಮೇಯವಿಲ್ಲ. ಬಜೆಟ್‌ನಲ್ಲೇ 20 ಕೋಟಿ ರೂ. ಘೋಷಣೆ ಮಾಡಲಾಗಿದೆ. ಆದರೆ ವೇದಿಕೆ ನಿರ್ಮಾಣ ಸೇರಿದಂತೆ ಅಗತ್ಯ ಸಿದ್ಧತೆಗೆ ಸಮಯಾವಕಾಶ ಬೇಕಾಗಲಿದೆ. ಈ ಸಲ ಸಮಾನಾಂತರ ವೇದಿಕೆಗಳನ್ನು ಮಾಡದೇ ಮುಖ್ಯ ವೇದಿಕೆಯಲ್ಲೇ ಎಲ್ಲ ಕಾರ್ಯಕ್ರಮ, ಗೋಷ್ಠಿ ನಡೆಸುವ ಬಗ್ಗೆ ಆಸಕ್ತಿ ತೋರಲಾಗಿದೆ. ಡಿಜಿಟಲ್‌ ಟಚ್‌ ಕೊಡುವ ಬಗ್ಗೆಯೂ ಕಸಾಪ ರಾಜ್ಯಾಧ್ಯಕ್ಷ‌ರು ಹೇಳಿದ್ದಾರೆ.  ಮೇ ತಿಂಗಳಲ್ಲಿ ನಡೆದರೆ ಬಿಸಿಲು, ಸೆಕೆ ಪ್ರಮಾಣ ಹೆಚ್ಚಿರುವುದರಿಂದ ಎಸಿ ಅಳವಡಿಸುವ ಬಗ್ಗೆಯೂ ಮಾತನಾಡಿದ್ದರು. ಇವೆಲ್ಲ ತಯಾರಿ ಆಗಬೇಕೆಂದರೆ ಹೆಚ್ಚಿನ ಸಮಯ ಬೇಕಾಗಲಿದೆ.

ಸ್ಪಷ್ಟ ನಿರ್ಧಾರ ಘೋಷಿಸಲಿ: ಸಮ್ಮೇಳನ ನಡೆಯುವ ದಿನಾಂಕಕ್ಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಲಕ್ಷಾಂತರ ಜನ ಸೇರುವ ಸಾಹಿತ್ಯ ಸಮ್ಮೇಳನವನ್ನು ಶಿಸ್ತುಬದ್ಧವಾಗಿ ಮಾಡದಿದ್ದರೆ ಹಾವೇರಿ ಜಿಲ್ಲೆಗೆ ಮತ್ತೂಮ್ಮೆ ಕೆಟ್ಟ ಹೆಸರು ತಪ್ಪಿದ್ದಲ್ಲ. ಸಮ್ಮೇಳನದ ಆಮಂತ್ರಣ ಪತ್ರಿಕೆ, ಸ್ಮರಣ ಸಂಚಿಕೆ, ವೇದಿಕೆ ನಿರ್ಮಾಣ, ಅತಿಥಿಗಳಿಗೆ ಊಟ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಸಿದ್ಧತೆ ನಡೆಸಬೇಕಿದೆ. ಸಮ್ಮೇಳನವನ್ನು ಈಗ ನಿಗದಿಪಡಿಸಿದ ತಾತ್ಕಾಲಿಕ ದಿನಾಂಕದಲ್ಲೇ ನಡೆಸುವುದಾದರೆ ಅಥವಾ ಮುಂದೂಡುವ ಬಗ್ಗೆಯಾದರೂ ಸರ್ಕಾರ ಸ್ಪಷ್ಟ ನಿರ್ಧಾರ ಘೋಷಿಸಬೇಕು. ಆ ಮೂಲಕ ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆಯಬೇಕಿದೆ.

ತರಾತುರಿಯಲ್ಲಿ ಸಮ್ಮೇಳನ ಬೇಡ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅವಾಂತರ ಶುರುವಾಗಿದೆ. ಸಮ್ಮೇಳನ ನಡೆಯುವ ಸ್ಥಳ ಕಪ್ಪು ಮಣ್ಣಿನಿಂದ ಕೂಡಿರುವುದರಿಂದ ಒಮ್ಮೆ ಮಳೆಯಾದರೆ ಹಲವು ದಿನ ತೇವಾಂಶ ಇರುತ್ತದೆ. ವೇದಿಕೆ ಇತ್ಯಾದಿ ತಯಾರಿ ಆದ ಮೇಲೆ ಗಾಳಿ, ಮಳೆಯಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಸಮ್ಮೇಳನ ಆಯೋಜನೆಗೆ ತಾತ್ಕಾಲಿಕ ನಿಗದಿ ಮಾಡಿರುವ ದಿನಾಂಕಕ್ಕೆ ಕೇವಲ ಇನ್ನು ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದು, ಇಷ್ಟು ಕಡಿಮೆ ಅವ ಧಿಯಲ್ಲಿ ಸಮ್ಮೇಳನ ನಡೆಸುವುದು ಕಷ್ಟ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ತರಾತುರಿಯಲ್ಲಿ ಸಮ್ಮೇಳನ ನಡೆಸುವುದಕ್ಕಿಂತ ಮಳೆಗಾಲ ಬಳಿಕ ನವೆಂಬರ್‌, ಡಿಸೆಂಬರ್‌ ವೇಳೆಗೆ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿವೆ. ಆದ್ದರಿಂದ ಸರ್ಕಾರ ಹಾಗೂ ಕಸಾಪ ಪದಾಧಿಕಾರಿಗಳು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಸಮ್ಮೇಳನದ ದಿನಾಂಕ ನಿಗದಿ ಕುರಿತು ಉಸ್ತುವಾರಿ ಸಚಿವರು ಹಾಗೂ ಕಸಾಪ ರಾಜ್ಯಾಧ್ಯಕ್ಷ‌ರು ಒಮ್ಮೆ ಸಿಎಂ ಅವರನ್ನು ಭೇಟಿಯಾಗಿದ್ದಾರೆ. ಆದರೆ ಸಿಎಂ ಯಾವುದೇ ಅಭಿಪ್ರಾಯ ತಿಳಿಸಿಲ್ಲ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅವಾಂತರ ಶುರುವಾಗಿದ್ದು, ಸಮ್ಮೇಳನ ಆಯೋಜಿಸಿದರೆ ತೊಂದರೆ ಎದುರಾಗಬಹುದು ಎಂಬ ಬಗ್ಗೆ ಆತಂಕವಿದೆ. ನವಂಬರ್‌, ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸುವುದು ಸೂಕ್ತವಾಗಿದ್ದು, ಮುಖ್ಯಮಂತ್ರಿಗಳು ಕೈಗೊಳ್ಳುವ ತೀರ್ಮಾನದ ಮೇಲೆ ಎಲ್ಲವೂ ನಿಂತಿದೆ.   -ಲಿಂಗಯ್ಯ ಹಿರೇಮಠ,ಕಸಾಪ ಜಿಲ್ಲಾಧ್ಯಕ್ಷ‌          ­

ವೀರೇಶ ಮಡ್ಲೂರ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.