ಆಧ್ಯಾತ್ಮಿಕ ಸಂಪತ್ತಿನಲ್ಲಡಗಿದೆ ಆತ್ಮ ಸಂತೋಷ


Team Udayavani, Jan 14, 2019, 10:23 AM IST

14-january-19.jpg

ಹಾವೇರಿ: ಮಹಾತ್ಮರ ಸ್ಮರಣೆ ಮಾಡುವುದರಿಂದ ಪ್ರತ್ಯಕ್ಷ ಜ್ಯೋರ್ತಿಲಿಂಗ ಮಾಡಿದಷ್ಟು ಆತ್ಮ ಅನುಸಂಧಾನವಾಗುತ್ತದೆ. ಇಂಥ ಆತ್ಮ ಸಂತೋಷ ನಾಡಿನ ಮಠ ಮಾನ್ಯಗಳ ಆಧ್ಯಾತ್ಮಿಕ ಸಂಪತ್ತಿನಲ್ಲಿ ಅಡಗಿದೆ ಎಂದು ಶಿರಸಿ ಬಣ್ಣದಮಠದ ಶಿವಲಿಂಗ ಸ್ವಾಮೀಜಿ ನುಡಿದರು. ನಗರದ ಹುಕ್ಕೇರಿಮಠದಲ್ಲಿ ಹಮ್ಮಿಕೊಂಡಿರುವ ಲಿಂ| ಶಿವಬಸವ ಸ್ವಾಮಿಗಳ 73ನೇ ಮತ್ತು ಲಿಂ| ಶಿವಲಿಂಗ ಶ್ರೀಗಳ 10ನೇ ಪುಣ್ಯ ಸ್ಮರಣೋತ್ಸವದ ‘ನಮ್ಮೂರ ಜಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸ್ವಾಮೀಜಿ ಮಾತನಾಡಿದರು.

ಈಗ ಮಾನವನ ಬದುಕಿನಲ್ಲಿ ಭೌತಿಕ ಸಂಪತ್ತು ಹೆಚ್ಚಾಗಿದೆ. ಆದರೆ, ಅಂತರಂಗದ ಆಧ್ಮಾತ್ಮಿಕ ಸಂಪತ್ತು ಕಡಿಮೆಯಾಗಿದೆ. ನೈತಿಕ ಮೌಲ್ಯಗಳ ಕೊರತೆಯೇ ಇದಕ್ಕೆ ಕಾರಣವಾಗಿದೆ. ಧಾರ್ಮಿಕ ಆಚರಣೆಗಳಾದ ಪಂಚಾಚಾರಗಳು, ಅಷ್ಟಾವರಣಗಳು ಮನುಷ್ಯನಲ್ಲಿ ನೈತಿಕ ಮೌಲ್ಯಗಳನ್ನು ಹೆಚ್ಚುಸುತ್ತವೆ ಎಂದು ಹೇಳಿದರು.

ಸಮ್ಮುಖ ವಹಿಸಿದ್ದ ಜಡೆಯ ಸಂಸ್ಥಾನಮಠದ ಡಾ| ಮಹಾಂತ ಸ್ವಾಮೀಜಿ ಮಾತನಾಡಿ, ಜಾತ್ರೆ ಎಂದರೆ ಅದು ಬೆಂಡು ಬತ್ತಾಸಗಳ ಮಾರಾಟವಲ್ಲ. ಮನದ ಮಲಿನತೆ ತೊಡೆದು ಹಾಕುವ, ಕಲೆಗೆ ಬೆಲೆ ಹಾಗೂ ಬದುಕಿನ ಸಾರ್ಥಕತೆ ಜೀವನ ನಡೆಸುವುದಕ್ಕಾಗಿ ಇರುವ ಮಾರ್ಗವಾಗಿದೆ ಎಂದು ಹೇಳಿದರು.

ನೇತೃತ್ವ ವಹಿಸಿದ್ದ ಕೂಡಲದ ಗುರುಮಹೇಶ್ವರ ಸ್ವಾಮೀಜಿ ಮಾತನಾಡಿ, ಕನ್ನಡ ನಾಡಿನಲ್ಲಿ ಪುಣ್ಯಕ್ಷೇತ್ರಗಳು ಹಲವು. ತಪೋಕ್ಷೇತ್ರಗಳು ಕೆಲವೇ ಕೆಲವು. ಅಂತಹ ತಪೋಕ್ಷೇತ್ರಗಳಲ್ಲಿ ಹುಕ್ಕೇರಿಮಠವೂ ಒಂದಾಗಿದೆ. ಸಮಾಜಮುಖೀ ಚಿಂತನೆಗಳ ಮೂಲಕ ಭಕ್ತರ ಬದುಕಿನ ತಲ್ಲಣ, ಚಂಚಲತೆ, ವಿಪ್ಲವಗಳನ್ನು ನಿವಾರಿಸಿ ಸನ್ಮಾರ್ಗದಲ್ಲಿ ನಡೆಯಲು ಇಲ್ಲಿನ ಧರ್ಮ ಸಂಸ್ಕಾರ ಕಾರಣವಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹುಕ್ಕೇರಿಮಠ ಕಬಡ್ಡಿ ಚಾಂಪಿಯನ್‌ ಟ್ರೋಫಿ ಗೆದ್ದ ತಂಡಗಳಿಗೆ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಯಿತು. ಹಾರನಹಳ್ಳಿ ಚೌಕಿಮಠದ ನೀಲಕಂಠ ಸ್ವಾಮೀಜಿ ಅವರಿಗೆ ಶ್ರೀಮಠದಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಖ್ಯಾತ ವ್ಯಂಗಚಿತ್ರಕಾರ ನಾಮದೇವ ಕಾಗದಗಾರ ಮತ್ತು ಹಿರಿಯ ಕ್ರೀಡಾಪಟು ಚಂದ್ರಶೇಖರ ಕೋಡಿಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಕಲಬುರ್ಗಿ ಸಂಗಮೇಶ ಪಾಟೀಲ ಸುಗಮ ಸಂಗೀತ ಪ್ರಸ್ತುತ ಪಡಿಸಿದರು.

ಸಮಾರಂಭದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಶಿವಣ್ಣ ಶಿರೂರ, ತಮ್ಮಣ್ಣ ಮುದ್ದಿ, ಪಿ.ಡಿ. ಶಿರೂರ, ಆರ್‌.ಡಿ. ಹಾವನೂರ, ಸಿ.ವೈ. ಅಂತರವಳ್ಳಿ, ಎಸ್‌.ಎಸ್‌. ಮುಷ್ಠಿ, ಜಗದೀಶ ತುಪ್ಪದ, ವೀರಣ್ಣ ಅಂಗಡಿ, ಬಿ.ಬಸವರಾಜ, ರಾಚಣ್ಣ ಲಂಬಿ, ಮಹೇಶ ಚಿನ್ನಿಕಟ್ಟಿ ಇದ್ದರು. ರಾಜಣ್ಣ ಮಾಗನೂರ ಸ್ವಾಗತಿಸಿದರು. ಎಸ್‌.ಎನ್‌. ಮಳೆಪ್ಪನವರ ಮತ್ತು ಶಿವಬಸವ ಮರಳಿಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಎಸ್‌. ಶಿವಣ್ಣ ವಂದಿಸಿದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.