ಕಾಟಾಚಾರದ ಉದ್ಯೋಗ ಮೇಳಕ್ಕೆ ಆಕ್ರೋಶ


Team Udayavani, Jan 26, 2019, 10:52 AM IST

26-january-19.jpg

ಹಾವೇರಿ: ವಿವಿಧ ಇಲಾಖೆಗಳ ಆಶ್ರಯದಲ್ಲಿ ಶುಕ್ರವಾರ ನಗರದ ಮುನ್ಸಿಪಲ್‌ ಮೈದಾನದಲ್ಲಿ ಸಂಘಟಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಅಕ್ಷರಶಃ ಕಾಟಾಚಾರದ ಮೇಳದಂತೆ ನಡೆಯಿತು.

ಜಿಲ್ಲಾ ಮಟ್ಟದ ಉದ್ಯೋಗ ಮೇಳವೆಂದರೆ ಉದ್ಯೋಗ ಕೊಡುವ ಉದ್ಯೋಗದಾತರಾದ ನೂರಾರು ಕಂಪನಿಗಳು, ಉದ್ಯೋಗ ಪಡೆಯುವ ಸಾವಿರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಬರಬೇಕಿತ್ತು. ಆದರೆ, ಇಲ್ಲಿ ಗರಿಷ್ಠ 15-20 ಕಂಪನಿಗಳು, 100ರಷ್ಟು ಉದ್ಯೋಗಾಕಾಂಕ್ಷಿಗಳು ಮಾತ್ರ ಭಾಗವಹಿಸಿದ್ದವು.

ಅಧಿಕಾರಿಗಳ ಕಾಟಾಚಾರದ ಈ ಮೇಳಕ್ಕೆ ಸಾಕ್ಷಿಯೆಂಬಂತೆ ಮೇಳ ಉದ್ಘಾಟನೆಯ ಸಮಯದಲ್ಲಿ ಉದ್ಯೋಗದಾತರರು ಬಂದು ತಮ್ಮ ಫಲಕಗಳನ್ನು ಅಳವಡಿಸಿಕೊಳ್ಳುತ್ತಿದ್ದರು. 9 ಶಾಲಾ ಕೊಠಡಿ ಹಾಗೂ ಹೊರಗಡೆ ಆವರಣದಲ್ಲಿ ಮೂರು ಮಳಿಗೆಗಳನ್ನು ಮಾತ್ರ ಹಾಕಲಾಗಿತ್ತು. ಇದರಲ್ಲಿಯೇ ಎರಡ್ಮೂರು ಮಳಿಗೆಗಳು ಖಾಲಿ ಇದ್ದವು.

ಉದ್ಯೋಗ ಮೇಳವನ್ನು ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ಸಹಯೋಗದಲ್ಲಿ ಸಂಘಟಿಸಲಾಗಿತ್ತು. ಮೇಳ ಉದ್ಘಾಟನೆ ವೇಳೆ ಸಂಘಟಕರು ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರನ್ನೆಲ್ಲ ಸಭಾ ಭವನಕ್ಕೆ ಕರೆತಂದು ಕುರ್ಚಿ ತುಂಬಿಸುವ ಕಾರ್ಯಕ್ಕೆ ಹೆಣಗಾಡುತ್ತಿರುವುದು ಕಂಡು ಬಂದಿತು. ಇನ್ನು ಉದ್ಯೋಗ ಮೇಳದಲ್ಲಿ ಮಾರಾಟ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಕಂಪನಿಗಳೇ ಹೆಚ್ಚಿದ್ದವು.

ಈ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದಖಾನ್‌, ಉದ್ಯೋಗ ಮೇಳಗಳು ಕಾಟಾಚಾರದ ಮೇಳಗಳಾಗಬಾರದು. ಮೇಳದಲ್ಲಿ ಭಾಗವಹಿಸಿದ ಎಷ್ಟು ಕಂಪನಿಗಳು ಎಷ್ಟು ಜನರಿಗೆ, ಯಾರಿಗೆ ಉದ್ಯೋಗ ಕೊಟ್ಟಿವೆ ಎಂಬ ಮಾಹಿತಿ ತಮಗೆ ಕೊಡಬೇಕು ಎಂದು ತಾಕೀತು ಮಾಡಿದರು.

ಅದೇ ರೀತಿ ಸ್ಥಳೀಯ ಶಾಸಕ ನೆಹರು ಓಲೇಕಾರ ಸಹ ಅಸಮಾಧಾನ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಉದ್ಯೋಗ ಮೇಳ ಎಂದರೆ ಇಲ್ಲಿ ನಾಲ್ಕೈದು ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬೇಕಿತ್ತು. ಇಲ್ಲಿ 500 ಜನರೂ ಇಲ್ಲ. ನಿರುದ್ಯೋಗಿಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಅಧಿಕಾರಿಗಳು ಸರಿಯಾಗಿ ಪ್ರಚಾರ ಮಾಡಬೇಕು. ಸಾಕಷ್ಟು ಪ್ರಚಾರ ಮಾಡದೆ, ಕಾಟಾಚಾರಕ್ಕಾಗಿ ಮೇಳ ಮಾಡಿದರೆ ಸರ್ಕಾರದ ಹಣ ಅಪವ್ಯಯವಾಗುವುದು ಬಿಟ್ಟರೆ ಬೇರೆ ಏನೂ ಆಗದು ಎಂದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.