![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಆರುತಿದೆ ಕುಂಬಾರರ ಹಣತೆ!
Team Udayavani, Nov 3, 2018, 5:05 PM IST
![3-november-20.gif](https://www.udayavani.com/wp-content/uploads/2018/11/3/3-november-20.gif)
ಹಾವೇರಿ: ದೀಪಗಳ ಹಬ್ಬ ದೀಪಾವಳಿಯಲ್ಲಿ ಹಣತೆಗೆ ಹೆಚ್ಚಿನ ಬೇಡಿಕೆ. ಆದರೆ, ಆಧುನಿಕತೆಯ ಬಿರುಗಾಳಿಗೆ ಸಿಲುಕಿ ಕುಂಬಾರರ ಮಣ್ಣಿನ ಹಣತೆ ಆರುತ್ತಿದ್ದು, ಕುಂಬಾರರ ಬದುಕು ಅಕ್ಷರಶಃ ಕತ್ತಲಾಗುತ್ತಿದೆ. ಜೇಡಿ ಮಣ್ಣಿನಿಂದ ರಚಿತ ಹಣತೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವುದರಿಂದ ಕುಂಬಾರ ಜೀವನ ಅಂಧಕಾರದಲ್ಲಿ ಮುಳುಗುತ್ತಿದೆ.ದೂರದ ಸ್ಥಳಗಳಿಂದ ಜೇಡಿ ಮಣ್ಣು ತಂದು ಹದ ಮಾಡಿ ತಮ್ಮ ಕೈಚಳಕದಿಂದ ವಿವಿಧ ವಿನ್ಯಾಸದ ಹಣತೆಗಳನ್ನು ರಚಿಸಿ, ಸುಟ್ಟು ಮಾರುಕಟ್ಟೆಗೆ ತಂದು 10ರಿಂದ 15 ರೂ.ಗಳಿಗೆ ಡಜನ್ (ಹಣತೆ) ಎಂದರೂ ಗ್ರಾಹಕರು ಖರೀದಿಸದ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ ಸಂಗತಿ.
ಇದಕ್ಕೆ ಕುಂಬಾರರ ಈ ಗೋಳಿಗೆ ಕಾರಣ ಚೀನಿ ಮಣ್ಣಿನ(ಯಂತ್ರದಿಂದ ತಯಾರಿಸಿದ) ಹಣತೆಗಳು. ಹೊಳಪಿನ ಮೈಮಾಟವುಳ್ಳ, ವೈವಿಧ್ಯಮಯ ಕಲಾ ಚಿತ್ತಾರ ಹೊಂದಿರುವ ಈ ಹಣತೆಗಳಿಗೆ ಬಹುತೇಕ ಜನರು ಮಾರುಹೋಗಿರುವುದಿದೇ ಕಾರಣ. ಕೇವಲ ಒಂದು ದಶಕದ ಲಕ್ಷ ಲಕ್ಷ ಹಣತೆಗಳನ್ನು ತಮ್ಮ ಮನೆ ಮುಂದೆ ಮಾರಾಟ ಮಾಡುತ್ತಿದ್ದ ಕುಂಬಾರ ಕುಟುಂಬಗಳು ಐದಾರು ವರ್ಷಗಳಿಂದ ಸಾವಿರ ಲೆಕ್ಕದಲ್ಲಿ ಹಣತಿಗಳನ್ನು ಮಾರಾಟ ಮಾಡಿ ತಮ್ಮ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಹಣತೆ ತಯಾರಿಸಿಯಯೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದವರು ಈಗ ಬೇರೆ ವೃತ್ತಿಯತ್ತ ಮುಖ ಮಾಡಿದ್ದಾರೆ. ಒಟ್ಟಾರೆ ಕುಂಬಾರರ ಹಣತೆ ಈಗ ಎಲ್ಲರಿಂದ ಕಡೆಗಣನೆಗೊಳಾಗುತ್ತಿರುವುದು ಖೇದಕರ ಸಂಗತಿ.
ಬೂದಿ ಕಕ್ಕುವಂತಾದ ಜೀವನ
ಹಲವಾರು ವರ್ಷಗಳಿಂದ ಕಂಬಾರಿಕೆ ವೃತ್ತಿ ಮಾಡುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪಿಂಗಾಣಿ ಹಾವಳಿಯಿಂದಾಗಿ ಮಣ್ಣಿನ ಹಣತೆ ಬೆಲೆ ಇಲ್ಲದಾಗಿದೆ. ಸರ್ಕಾರ ತಮಗೆ ಪ್ರೋತ್ಸಾಹ ನೀಡುವ ಯಾವುದೇ ಯೋಜನೆಯನ್ನೂ ರೂಪಿಸಿಲ್ಲ. ಇದರಿಂದಾಗಿ ಕುಂಬಾರರ ಜೀವನ ಬೂದಿ ತಿಂದು ಬೂದಿ ಕಕ್ಕುವಂತಾಗಿದೆ ಎನ್ನುತ್ತಾರೆ ಪ್ರೇಮವ್ವ ಕುಂಬಾರ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್](https://www.udayavani.com/wp-content/uploads/2024/07/9-16-150x90.jpg)
Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್
![Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು](https://www.udayavani.com/wp-content/uploads/2024/07/haveri-3-150x83.jpg)
Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು
![4-haveri](https://www.udayavani.com/wp-content/uploads/2024/07/4-haveri-150x90.jpg)
Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು
![ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ](https://www.udayavani.com/wp-content/uploads/2024/07/Haveri-2-150x62.jpg)
ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ
![Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು](https://www.udayavani.com/wp-content/uploads/2024/07/haveri-1-150x92.jpg)
Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.