ಹಾವೇರಿ: ಯುವ ಸಮೂಹ ಎಚ್ಚರಿಸುವ ವಿಚಾರ ಸಂಕಿರಣ ಅಗತ್ಯ


Team Udayavani, Feb 9, 2024, 6:12 PM IST

ಹಾವೇರಿ: ಯುವ ಸಮೂಹ ಎಚ್ಚರಿಸುವ ವಿಚಾರ ಸಂಕಿರಣ ಅಗತ್ಯ

ಉದಯವಾಣಿ ಸಮಾಚಾರ
ಹಾವೇರಿ: ಇಲ್ಲಿಯ ಪಪೂ ಕಾಲೇಜುಗಳ ನೌಕರರ ಭವನದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ, ನವದೆಹಲಿ ಮತ್ತು ಜಿಲ್ಲಾ ಕಸಾಪ ಆಯೋಜಿಸಿದ್ದ ಸಮಕಾಲೀನ ಸಾಹಿತ್ಯದಲ್ಲಿ ಜೀವಪರ ನಿಲುವುಗಳು ಎಂಬ ವಿಚಾರ ಸಂಕಿರಣ ನಡೆಯಿತು.

ಸಮಾರೋಪ ನುಡಿಗಳನ್ನಾಡಿದ ಹಿರಿಯ ಲೇಖಕ ಮೀರಾಸಾಬಿಹಳ್ಳಿ ಶಿವಣ್ಣ, ಪ್ರತಿರೋಧಕ ದನಿಗಳು ದಮನವಾಗುತ್ತಿರುವಾಗ ಹೊಸ ಜನಾಂಗವನ್ನು ಎಚ್ಚರಿಸುವ ಇಂತಹ ವಿಚಾರ ಸಂಕಿರಣಗಳು ಆಗಾಗ ನಡೆಯಬೇಕು ಎಂದರು.

ಮೊದಲ ಗೋಷ್ಠಿಯ ವರ್ಣ, ವರ್ಗಗಳ ಮೀರುವ ಬಗೆ ಎಂಬ ವಿಷಯ ಕುರಿತು ವಿಚಾರ ಮಂಡಿಸಿದ ಕವಿ ವಿಜಯಕಾಂತ ಪಾಟೀಲ, ಸಂವಿಧಾನವೇ ನಮ್ಮ ಧರ್ಮ ಗ್ರಂಥ ಎಂದು ಒಪ್ಪಿಕೊಂಡರೆ ವರ್ಣ ವರ್ಗಗಳ ತಾರತಮ್ಯ ಸುಲಭವಾಗಿ ಮೀರಬಹುದು. ಅತಿಯಾದ ಮೌನ ಮತ್ತು ಮಾತು ಲೇಖಕರಿಗೆ ಬೇಡ. ಈ  ಸಮಾಜದಲ್ಲಿ ಇನ್ನೂ ಅಂತಃಕರಣಗಳ ಸೆಲೆಗಳು
ಬತ್ತಿಲ್ಲ. ಅವುಗಳನ್ನು ಹುಡುಕ ಬೇಕಷ್ಟೆ ಎಂದರು.

ಶಿವಮೊಗ್ಗ ಸೈಹ್ಯಾದ್ರಿ ಕಾಲೇಜಿನ ಡಾ| ಶೋಭಾ ಮರವಂತೆ ಮಾತನಾಡಿ, ಧರ್ಮ ಮತ್ತು ಅಧಿಕಾರದ ಮಾತುಗಳು ಬಂದಾಗ ನಾನು ಹೆಣ್ಣಾಗಿ ಹೆದರುತ್ತೇನೆ. ಗರ್ಭದಲ್ಲಿಯೇ ಕಟ್ಟಲ್ಪಟ್ಟ ಹೆಣ್ಣಿನ ಅವಮಾನ ಮತ್ತು ಅನುಮಾನಗಳು ಸದಾ ಚಾಲ್ತಿಯಲ್ಲಿರುತ್ತವೆ. ದೇವರಿಲ್ಲದ ಜಗತ್ತಿನಲ್ಲಿ ಪಾಪಿಗಳಿಲ್ಲ ಎಂಬ ಮಾತು ನನ್ನನ್ನು ಕಾಡಿದೆ ಎಂದರು.

ಅಕ್ಷತಾ ಕೆ.ಸಿ., ಜ್ಞಾನದ ಮಾತನಾಡಿದರು. ಗೋಷ್ಠಿಯನ್ನು ಶಿವಾನಂದ ಕ್ಯಾಲಕೊಂಡ ನಡೆಸಿದರು. ಎರಡನೆಯ ಗೋಷ್ಠಿಯಲ್ಲಿ
ಜಾಗತೀಕರಣದ ಸಾಮಾಜಿಕ ಪರಿಣಾಮಗಳ ವಿಷಯ ಕುರಿತು ಆನಂದ ಕುಂಚೂರ, ಸಾಫ್ಟವೇರ್‌ ಜಗತ್ತಿನಲ್ಲೂ ಭಾಷೆ, ಜಾತಿ, ಪ್ರಾದೇಶಿಕ ತಾರತಮ್ಯಗಳ ಮೇಲಾಟಗಳಿವೆ. ಜಾಗತೀಕರಣ ನಮ್ಮಂತಹ ಟೆಕ್ಕಿಗಳಿಗೆ ಅನ್ನ ನೀಡಿದರೂ ಸಣ್ಣತನಗಳನ್ನು ಮೀರಲಾಗುತ್ತಿಲ್ಲ. ಭ್ರಮಾತ್ಮಕವಾದ ಜೀವಪರತೆ ಬೇಡ ಎಂದರು.

ಪರಿಸರ ಕುರಿತಾದ ಸಂಗತಿಗಳು ಎಂಬ ವಿಷಯ ಕುರಿತು ಡಾ| ಮಲ್ಲಿಕಾರ್ಜುನಗೌಡ ತೂಲಹಳ್ಳಿ ಮಾತನಾಡಿದರು. ಗೋಷ್ಠಿಗೆ ಸ್ಪಂದನೆ ನೀಡಿದ ಕವಿ ರಂಜಾನ್‌ ಕಿಲ್ಲೇದಾರ, ಕಾವ್ಯ ಮುಖೇನ ಮಾತ್ರ ಜೀವಪರ ಚಿಂತನೆಗಳನ್ನು ನೀಡಬಹುದು ಎಂದರು.

ಗೋಷ್ಠಿಯನ್ನು ಪ್ರಥ್ವಿರಾಜ ಬೆಟಗೇರಿ ನಡೆಸಿದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಕವಿ ಸತೀಶ ಕುಲಕರ್ಣಿ ವಹಿಸಿದ್ದರು. ಪ್ರಾಚಾರ್ಯ ಮಂಜುನಾಥ ವಡ್ಡರ, ಈರಣ್ಣ ಬೆಳವಡಿ, ಗಂಗಯ್ಯ ಕುಲಕರ್ಣಿ, ಲಿಂಗಯ್ಯ ಹಿರೇಮಠ, ವೀರೇಶ, ಬೇಬಿ ಲಮಾಣಿ ಇದ್ದರು. ಅಕಾಡೆಮಿಯ ಸದಸ್ಯ ಚೆನ್ನಪ್ಪ ಅಂಗಡಿ ವಂದಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.