ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ


Team Udayavani, Apr 15, 2024, 5:55 PM IST

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಉದಯವಾಣಿ ಸಮಾಚಾರ
ಹಾವೇರಿ: ಮನುಷ್ಯ ಜೀವನದಲ್ಲಿ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿ ಕೊಳ್ಳದಿದ್ದರೆ ಜೀವನ ವ್ಯರ್ಥ. ನಮ್ಮ ನಡೆ ನುಡಿಗಳು ಸತ್ಯದ ಪರವಾಗಿರಬೇಕು. ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆಗೊಳ್ಳಲು ಸಾಧ್ಯವಾಗುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ತಾಲೂಕಿನ ನೆಗಳೂರು ಹಿರೇಮಠದಲ್ಲಿ ರವಿವಾರ ಕರ್ತೃ ಗುರುಶಾಂತೇಶ್ವರ ಮಂದಿರದ ನೂತನ ಗೋಪುರ ಉದ್ಘಾಟನೆ, ಕಳಸಾರೋಹಣ, ಸಾಮೂಹಿಕ ವಿವಾಹ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಒಳ್ಳೆಯ ಕಾರ್ಯ ಮಾಡುವಾಗ ತೊಡಕು ತೊಂದರೆಗಳು ಬರಬಹುದು. ಅನೇಕ ಮಹಾತ್ಮರಿಗೂ ಸಜ್ಜನರಿಗೂ ತೊಂದರೆಗಳು ಬಿಟ್ಟಿಲ್ಲ. ಸಜ್ಜನರಿಗೆ ಬರುವ ಆಪತ್ತು ದುರ್ಜನರಿಗೆ ಬರುವ ಸಂಪತ್ತು ಬಹಳ ಕಾಲ ಉಳಿಯುವುದಿಲ್ಲ. ಸುಳ್ಳಿನ ಜೊತೆ ದುಷ್ಟ
ಶಕ್ತಿಯಿದ್ದರೆ ಸತ್ಯದ ಜೊತೆ ದೈವಶಕ್ತಿ ಇರುತ್ತದೆ. ನೋಡುವ ದೃಷ್ಟಿ ಸರಿಯಿದ್ದರೆ ಎಲ್ಲವೂ ಒಳ್ಳೆಯದೇ ಆಗುತ್ತದೆ. ಸಂಪತ್ತು ಮತ್ತು ಬಯಕೆ ಹೊಂದಿರುವ ಮನುಷ್ಯ ಮೊದಲು ಧರ್ಮ ಮಾರ್ಗದಲ್ಲಿ ನಡೆಯಬೇಕೆಂದು ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ಸಂವಿಧಾನದಲ್ಲಿ ನಿರೂಪಿಸಿದ್ದಾರೆ.

ಸಮಾಜದಲ್ಲಿ ಆಗುವ ದುಂದು ವೆಚ್ಚ ತಡೆಗಟ್ಟಲು ಸಾಮೂಹಿಕ ವಿವಾಹ ಸಮಾರಂಭಗಳ ಅವಶ್ಯಕತೆಯಿದೆ. ನೂತನ ದಂಪತಿಗಳ ಬಾಳು ಉಜ್ವಲವಾಗಲೆಂದು ಶುಭ ಹಾರೈಸಿದರು.

ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸತಿ-ಪತಿಗಳು ಸಾಮರಸ್ಯದಿಂದ ಬಾಳಬೇಕಾಗುತ್ತದೆ. ಮುತ್ತೆ$çದೆಯರಿಗೆ ವೀರಶೈವ ಪಂಚ ಪೀಠಗಳು ಹಸಿರು ಬಳೆ, ಕುಂಕುಮ, ಕರಿಮಣಿ ಸರ, ಮೂಗುನತ್ತು ಮತ್ತು ಮಾಂಗಲ್ಯ ಕೊಟ್ಟು ಶುಭ ಹಾರೈಸಿದ್ದನ್ನು ಎಂದಿಗೂ ಮರೆಯಲಾಗದು.

ಪವಿತ್ರವಾದ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದ ನವ ದಂಪತಿಗಳ ಬಾಳು ಉಜ್ವಲವಾಗಲೆಂದು ಬಯಸಿ ಶ್ರೀ ರಂಭಾಪುರಿ ಜಗದ್ಗುರುಗಳ ಅಶೀರ್ವಾದ ಯಾವಾಗಲೂ ನಮಗೆ ಶ್ರೀರಕ್ಷೆಯಾಗಿದೆ ಎಂದರು. ಇದೇ ಸಂದರ್ಭದಲ್ಲಿ 40 ಜನ ಜಂಗಮ
ವಟುಗಳಿಗೆ ಶಿವದೀಕ್ಷಾ ಅಯ್ನಾಚಾರ ನಡೆಯಿತು.

ಸಮಾರಂಭದ ನೇತೃತ್ವ ವಹಿಸಿದ ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಗುರು ಶಕ್ತಿಗಿಂತ ಮಿಗಿಲಾದ ಶಕ್ತಿ ಇನ್ನೊಂದಿಲ್ಲ. ಗುರು ಕಾರುಣ್ಯ ವೊಂದಿದ್ದರೆ ಏನೆಲ್ಲ ಸೌಭಾಗ್ಯ ಸಂಪತ್ತು ಪಡೆಯಲು ಸಾಧ್ಯ. ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶ್ರೀಗಳು ಪರಿಶ್ರಮ ಮತ್ತು ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.

ಅಂಗೂರು ಶಿವಯೋಗೀಶ್ವರ ಶಿವಾಚಾರ್ಯರು, ಲಕ್ಷೇ¾ಶ್ವರದ ಮಳೆ ಮಲ್ಲಿಕಾರ್ಜುನ ಶಿವಾಚಾರ್ಯರು, ತುಪ್ಪದ ಕುರಹಟ್ಟಿ ಡಾ| ವಾಗೀಶ ಪಂಡಿತಾರಾಧ್ಯ ಶ್ರೀಗಳು, ಕುಂದಗೋಳದ ಶಿತಿಕಂಠೇಶ್ವರ ಶ್ರೀಗಳು, ಅಮ್ಮಿನಬಾವಿ ಅಭಿನವ ಶಾಂತಲಿಂಗ ಶ್ರೀಗಳು,
ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ಹಾವೇರಿ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಬೆಳಗುಂಪ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಕುಂದರಗಿ ವೀರಸಂಗಮೇಶ್ವರ ಶಿವಾಚಾರ್ಯರು, ಹಾವನೂರು ಶಿವಕುಮಾರ ಸ್ವಾಮೀಜಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.