ಆರೋಗ್ಯ ಶಿಬಿರ ಬಡವರಿಗೆ ಸಹಕಾರಿ


Team Udayavani, Oct 20, 2019, 3:29 PM IST

hv-tdy-2

ಹಾನಗಲ್ಲ: ಮನುಷ್ಯನಿಗೆ ಎಲ್ಲ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯ ಅತೀ ಮುಖ್ಯವಾಗಿದ್ದು. ದುಬಾರಿ ವೆಚ್ಚದ ಇಂದಿನ ಕಾಲದಲ್ಲಿ ಬಡಜನತೆಗೆ ಆಸ್ಪತ್ರೆ ಖರ್ಚು ನಿಭಾಯಿಸುವುದು ಕಷ್ಟಸಾಧ್ಯ. ಸಂಘ ಸಂಸ್ಥೆಗಳು ನಡೆಸುವ ಉಚಿತ ಆರೋಗ್ಯ ಶಿಬಿರಗಳು ಬಡವರಿಗೆ ಸಹಕಾರಿ ಎಂದು ಎಪಿಎಂಸಿ ಸದಸ್ಯ ಸಿದ್ದಪ್ಪ ಬಂಗಾರೇರ ತಿಳಿಸಿದರು.

ತಾಲೂಕಿನ ಮಕರವಳ್ಳಿ ಗ್ರಾಮದಲ್ಲಿ ರೋಶನಿ ಸಮಾಜ ಸೇವಾ ಸಂಸ್ಥೆ ಸಹಯೋಗದಲ್ಲಿ, ಗ್ರಾಮಾಭಿವೃದ್ಧಿ ಸಮಿತಿ, ಲೋಕ್‌ಮಂಚ, ವಿಶ್ವ ಸೇವಾ ಸಮಿತಿ, ಪಿಡಿಜಿರೋ ಸುಬ್ರಾವ್‌ ಕಾಸರಕೋಡ ಮೆಮೋರಿಯಲ್‌ ರೋಟರಿ ಚಾರಿಟೇಬಲ್‌ ಆಸ್ಪತ್ರೆ ಆಶ್ರದಲ್ಲಿ ನಡೆದ ಕಿವಿ ಮೂಗು ಗಂಟಲು, ಎಲಬು ಕೀಲು, ಸ್ತ್ರೀ ರೋಗ ಉಚಿತ ಆರೊಗ್ಯ ತಪಾಸಣಾ ಮತ್ತು ಜಾಗೃತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಬಡವರ ಹಿತದೃಷ್ಟಿಯಿಂದ ಹಲವಾರು ವರ್ಷಗಳಿಂದ ರೋಶನಿ ಸಂಸ್ಥೆ ಇಂತಹ ಉಚಿತ ಆರೋಗ್ಯ ತಪಾಸಣೆಗಳನ್ನು ನಡೆಸುವುದರ ಜತೆಗೆ ಆರೋಗ್ಯದ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ. ಶಿಬಿರದಲ್ಲಿ ಪಾಲ್ಗೊಂಡವರು ವೈದ್ಯರ ಸಲಹೆ ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಿ ಎಂದು ಕರೆ ನೀಡಿದರು.

ರೋಟರಿ ಚಾರಿಟೇಬಲ್‌ ಆಸ್ಪತ್ರೆ ತಜ್ಞ ಡಾ| ಕೆ.ಜೆ. ಸಿದ್ದೇಶ್ವರ ಮಾತನಾಡಿ, ಮನುಷ್ಯನಲ್ಲಿ ತೇವಾಂಶ ಹೆಚ್ಚಿರುವುದರಿಂದ ಕಿವಿಗಳಲ್ಲಿ ಖೊಬ್ಬರಿ ಎಣ್ಣೆಯನ್ನು ಹಾಕಬಾರದು. ಇದರೊಂದಿಗೆ ಕಿವಿಯಲ್ಲಿ ಕಡ್ಡಿ, ಪಿನ್‌, ಚೂಪಾದ ವಸ್ತುಗಳನ್ನು ಹಾಕುವುದರಿಂದ ಕಿವುಡುತನ ಬರುತ್ತದೆ. ಹಾಗಾಗದಂತೆ ಎಚ್ಚರ ವಹಿಸುವುದು ಅಗತ್ಯ. ಡಾಕ್ಟರ್‌ಗಳ ಸಲಹೆಯಂತೆ ಔಷಧಿ ಗಳನ್ನು ಬಳಸಬೇಕು. ವೈದ್ಯರ ಸಲಹೆ ಇಲ್ಲದೆ ಯಾವುದೇ ಔಷಧಿ ಬಳಸುವುದು ಆರೋಗ್ಯಕ್ಕೆ ಹಾನಿ ಉಂಟಾಗುತ್ತದೆ ಎಂದು ಸಲಹೆ ನೀಡಿದರು.

ರೋಶನಿ ಸಂಸ್ಥೆಯ ಸಂಯೋಜಕಿ ಸಿಸ್ಟರ್‌ ಅನಿತಾ ಡಿಸೋಜಾ ಮಾತನಾಡಿ, ಸಮಾಜದ ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ. ರೋಶನಿ ಸಂಸ್ಥೆ ಕಳೆದ ಎರಡು ದಶಕಗಳಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಮಾಜದಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಸಮಾಜಮುಖೀ ಕಾರ್ಯ ಮಾಡಿ ಪರಿಹಾರ ನೀಡುತ್ತ ಬಂದಿದೆ. ಸಾರ್ವಜನಿಕರು ಇಂತಹ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ರೋಶನಿ ಸಂಸ್ಥೆಯ ಸಂಯೋಜಕ ಕೆ.ಎಫ್‌. ನಾಯ್ಕರ ಆರೋಗ್ಯ ಭಾಗ್ಯದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೊಂದಿ ಗ್ರಾಪಂ ಅಧ್ಯಕ್ಷೆ ಪ್ರಬಾವತಿ ಕರಬುಳ್ಳೇರ ವಹಿಸಿದ್ದರು. ಗ್ರಾಪಂ ಸದಸ್ಯರಾದ ದುರ್ಗಪ್ಪ ಗೂರನವರ, ಸಾವಿತ್ರಮ್ಮ ಸೊಟ್ಟನವರ, ಉಮೇಶ ಕಬ್ಬೂರ, ಲೋಕ್‌ ಮಂಚ್‌ ಮುಖಂಡ ಮಂಜುನಾಥ ಕುದರಿ, ಡಾ| ದೇವೇಂದ್ರ ಪಾತ್ರೋಟಿ, ಡಾ| ದಿವ್ಯತಾ, ದಾರೇಶ್ವರ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಶಿಬಿರದಲ್ಲಿ 250ಕ್ಕೊ ಹೆಚ್ಚು ಜನರು ಭಾಗವಹಿಸಿ ಶಿಬಿರದ ಸದುಪಯೋಗ ಪಡಿಸಿಕೊಂಡರು.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.