ಎಪಿಎಂಸಿ ದ್ವಾರದಲ್ಲಿ ಆರೋಗ್ಯ ತಪಾಸಣೆ
Team Udayavani, Jul 6, 2020, 4:42 PM IST
ಹಾವೇರಿ: ಕೋವಿಡ್ ಸೋಂಕು ಹಬ್ಬುವುದನ್ನು ತಡೆಯಲು ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿತ್ಯ ವ್ಯಾಪಾರ ವಹಿವಾಟಿಗೆ ಬರುವ ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಂಡಿದೆ.
ಎಪಿಎಂಸಿಯ ಮೂರು ಮುಖ್ಯದ್ವಾರಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಮಾಸ್ಕ್ ಹಾಕಿದವರಿಗಷ್ಟೇ ಥರ್ಮಲ್ ಸ್ಕ್ರೀನಿಂಗ್ನಿಂದ ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿದೆ. ಇದಕ್ಕಾಗಿ 12 ಸಿಬ್ಬಂದಿ ನೇಮಕ ಮಾಡಲಾಗಿದ್ದು ಆರು ಥರ್ಮಲ್ ಸ್ಕ್ರೀನಿಂಗ್ ಸಾಧನ ನೀಡಲಾಗಿದೆ. ಸದ್ಯ ತರಕಾರಿ ಹಾಗೂ ಕಾಳು-ಕಡಿ ಮಾರುಕಟ್ಟೆಯಲ್ಲಿ ಮಾತ್ರ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ರೈತರ ಹಿತದೃಷ್ಟಿಯಿಂದ ಜಾನುವಾರು ಮಾರುಕಟ್ಟೆಯಲ್ಲೂ ಕ್ರಮ ಕೈಗೊಳ್ಳಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ತಿಳಿಸಿದ್ದಾರೆ.