ನಾಳೆಯಿಂದ ಆರೋಗ್ಯ ಸರ್ವೇ

ಪ್ರತಿ ಮನೆ ಪ್ರತಿ ವ್ಯಕ್ತಿ ಮಾಹಿತಿ ಸಂಗ್ರಹ; ಗ್ರಾಮಗಳಲ್ಲೇ ಶಿಬಿರ-ಚಿಕಿತ್ಸೆ

Team Udayavani, Apr 14, 2020, 4:43 PM IST

ನಾಳೆಯಿಂದ ಆರೋಗ್ಯ ಸರ್ವೇ

ಹಾವೇರಿ: ಜನರ ಆರೋಗ್ಯದ ಸ್ಥಿತಿಗತಿಗಳ ಕುರಿತು ವೈಜ್ಞಾನಿಕ ತಪಾಸಣೆ ಮೂಲಕ ಮಾಹಿತಿ ಸಂಗ್ರಹಿಸಲು ಏ. 15ರಿಂದ ಜಿಲ್ಲೆಯಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಕಾರ್ಯ ಆರಂಭಿಸಲಾಗುವುದು ಎಂದು ಜಿಪಂ ಸಿಇಒ ರಮೇಶ ದೇಸಾಯಿ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ತಹಶೀಲ್ದಾರ್‌ಗಳು, ತಾಪಂ ಇಒಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ನಡೆಯುವ ಆರೋಗ್ಯ ಶಿಬಿರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಮೀಕ್ಷಾ ತಂಡಕ್ಕೆ ಅಗತ್ಯ ತರಬೇತಿ ನೀಡಬೇಕು. ಸೋಮವಾರ ಹಾಗೂ ಮಂಗಳವಾರದೊಳಗೆ ತಾಲೂಕಾವಾರು ಸಭೆ ನಡೆಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರವಾರು ತಪಾಸಣೆಯ ಯೋಜನೆ
ಸಿದ್ಧಪಡಿಸಿ ಏ. 15ರಿಂದ ಅಧಿಕೃತವಾಗಿ ಸಮೀಕ್ಷೆ ಕಾರ್ಯವನ್ನು ಕಡ್ಡಾಯವಾಗಿ ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು.

ಆಶಾ, ಅಂಗನವಾಡಿ, ಕಿರಿಯ ಆರೋಗ್ಯ ಸಹಾಯಕರು ಒಳಗೊಂಡ ಮೂರು ಜನರ ತಂಡ ರಚಿಸಿ ಪ್ರತಿ ತಂಡಕ್ಕೆ 50 ಮನೆಗಳಂತೆ ಹಂಚಿಕೆ ಮಾಡಿ ತಪಾಸಣೆ ಆರಂಭಿಸಬೇಕು. ಪ್ರತಿ ಮನೆಯ ಪ್ರತಿ ವ್ಯಕ್ತಿಯ ಮಾಹಿತಿ ಪಡೆಯಬೇಕು. ದೊಡ್ಡ ಗ್ರಾಮಗಳಾದರೆ ಎರಡು ದಿನ ತಪಾಸಣೆ ನಡೆಸಬೇಕು. ಈ ತಂಡಗಳು ಬೆಳಗ್ಗೆ ಸಂಗ್ರಹಿಸಿದ ಮಾಹಿತಿ ಅನುಸಾರ ಮಧ್ಯಾಹ್ನ ಆಯಾ ಗ್ರಾಮದಲ್ಲೇ ಸರ್ಕಾರಿ ಶಾಲೆ ಅಥವಾ ಕಟ್ಟಡಗಳಲ್ಲಿ ಹೆಲ್ತ್‌ ಕ್ಯಾಂಪ್‌ ನಡೆಸಿ ಅಗತ್ಯವಿರುವ ಜನರಿಗೆ ಚಿಕಿತ್ಸೆ ನೀಡುವಂತಾಗಬೇಕು. ಕೋವಿಡ್‌ ಲಕ್ಷಣಗಳು ಕಂಡುಬಂದರೆ ಮಾದರಿ ಸಂಗ್ರಹಕ್ಕೆ ತಾಲೂಕಾ ಆರೋಗ್ಯ ಕೇಂದ್ರಗಳಿಗೆ ವಾಹನಗಳ ಮೂಲಕ ಕಳುಹಿಸಿಕೊಡಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾ ಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಆಯಾ ಕೇಂದ್ರ ವ್ಯಾಪ್ತಿಯ ಸಮೀಕ್ಷೆಯ ಮುಖ್ಯಸ್ಥರಾಗಿರುತ್ತಾರೆ. ಬೆಳಗ್ಗೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಿ ಮಧ್ಯಾಹ್ನದ ನಂತರ ಸಮೀಕ್ಷೆಗೆ ಆಯ್ಕೆ ಮಾಡಿಕೊಂಡ ಗ್ರಾಮಕ್ಕೆ ತೆರಳಿ ಆರೋಗ್ಯ ಶಿಬಿರಗಳಲ್ಲಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು. ಮನೆ ಮನೆ ಸಮೀಕ್ಷೆ ನಡೆಸುವ ಕಾರ್ಯಕರ್ತೆಯರಿಗೆ ಸುರಕ್ಷಾ ಸಾಧನ, ವಾಹನ, ಊಟದ ವ್ಯವಸ್ಥೆ, ಆಯಾ ಗ್ರಾಮಗಳಲ್ಲಿ ತಾತ್ಕಾಲಿಕ ಆರೋಗ್ಯ ಶಿಬಿರ ನಡೆಸಿ ತಪಾಸಣೆ ನಡೆಸಲು ಅಗತ್ಯವಾದ ಸರ್ಕಾರಿ ಕಟ್ಟಡ ಅಥವಾ ಶಾಲೆಗಳನ್ನು ಗುರುತಿಸಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ತಹಶೀಲ್ದಾರ್‌, ತಾಪಂ ಇಒಗಳು ಉಸ್ತುವಾರಿ ವಹಿಸಲು ಸೂಚನೆ ನೀಡಿದರು.

ಡಿಎಚ್‌ಒ ಡಾ| ರಾಜೇಂದ್ರ ದೊಡ್ಡಮನಿ, ಆರ್‌ಸಿಎಚ್‌ ಅ ಧಿಕಾರಿ ಡಾ| ಜಯಾನಂದ, ಹಾವೇರಿ ಎಸಿ ಡಾ| ದಿಲೀಷ್‌, ಸವಣೂರು ಎಸಿ ಅನ್ನಪೂರ್ಣಾ ಮುದಕಮ್ಮನವರ ಮೊದಲಾದವರಿದ್ದರು.

ದಿನಕ್ಕೊಂದು ಗ್ರಾಮ
ಜಿಲ್ಲೆಯಲ್ಲಿ 17 ಲಕ್ಷ ಜನಸಂಖ್ಯೆ ಇದೆ, 708 ಗ್ರಾಮಗಳಿವೆ, 67 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಈ ಪೈಕಿ 47 ಕೇಂದ್ರಗಳಲ್ಲಿ ಎಂಬಿಬಿಎಸ್‌ ವೈದ್ಯರು, 20 ಕೇಂದ್ರದಲ್ಲಿ ಆಯುಷ್‌ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತಿದಿನ ಒಂದೊಂದು ಗ್ರಾಮ ಆಯ್ಕೆ ಮಾಡಿ ತಪಾಸಣೆ ಆರಂಭಿಸಬೇಕು. ಇದರಿಂದ ಪ್ರತಿದಿನ ಜಿಲ್ಲೆಯ 67 ಹಳ್ಳಿಗಳ ಸರ್ವೇ ಕಾರ್ಯ ಪೂರ್ಣಗೊಳ್ಳುತ್ತದೆ. 15 ದಿನದೊಳಗಾಗಿ ಎಲ್ಲ ಗ್ರಾಮಗಳ ಸರ್ವೇ ಪೂರ್ಣಗೊಳಿಸಬಹುದು ಎಂದು ಜಿಪಂ ಸಿಇಒ ಸಲಹೆ ನೀಡಿದರು.

ಸಾಮಾನ್ಯ ಆರೋಗ್ಯ ತಪಾಸಣೆ ವೇಳೆಯಲ್ಲಿ ಜನರಿಗೆ ಇತರ ಆರೋಗ್ಯ ಸಮಸ್ಯೆಗಳು ಕಂಡುಬಂದರೆ ಆಯಾ ಗ್ರಾಮದಲ್ಲೇ ಹೆಲ್ತ್‌ಕ್ಯಾಂಪ್‌ ನಡೆಸಿ ಚಿಕಿತ್ಸೆ ನೀಡಬೇಕು. ಸರ್ಕಾರಿ ವೈದ್ಯರ ಜೊತೆಗೆ ಖಾಸಗಿ ವೈದ್ಯರ ನೆರವನ್ನು ಪಡೆದುಕೊಳ್ಳಬೇಕು.
ರಮೇಶ ದೇಸಾಯಿ, ಜಿಪಂ ಸಿಇಒ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.